ಶೌಚಾಲಯದಲ್ಲಿ ಶೇಖರಿಸಿಟ್ಟ ಆಹಾರ ನೀಡುತ್ತಿರುವುದು 
ದೇಶ

ಮಹಿಳಾ ಕಬಡ್ಡಿ ಆಟಗಾರರಿಗೆ ಶೌಚಾಲಯದಲ್ಲಿ ಶೇಖರಿಸಿಟ್ಟ ಆಹಾರ ನೀಡಿದ ವಿಡಿಯೋ ವೈರಲ್, ಅಧಿಕಾರಿ ಅಮಾನತು

ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಹಿಳಾ ಆಟಗಾರರಿಗೆ ಶೌಚಾಲಯದಲ್ಲಿ ಶೇಖರಿಸಿಟ್ಟ ಆಹಾರವನ್ನು ಬಡಿಸಲಾಗಿದೆ ಎಂಬ ಆರೋಪದ ಮೇರೆಗೆ ಜಿಲ್ಲಾ ಕ್ರೀಡಾ ಅಧಿಕಾರಿಯನ್ನು...

ಲಖನೌ: ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಹಿಳಾ ಆಟಗಾರರಿಗೆ ಶೌಚಾಲಯದಲ್ಲಿ ಶೇಖರಿಸಿಟ್ಟ ಆಹಾರವನ್ನು ಬಡಿಸಲಾಗಿದೆ ಎಂಬ ಆರೋಪದ ಮೇರೆಗೆ ಜಿಲ್ಲಾ ಕ್ರೀಡಾ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ(ಕ್ರೀಡೆ) ನವನೀತ್ ಸೆಹಗಲ್ ಅವರು ಸಹರಾನ್‌ಪುರ ಜಿಲ್ಲಾ ಕ್ರೀಡಾ ಅಧಿಕಾರಿ ಅನಿಮೇಶ್ ಸಕ್ಸೇನಾ ಅವರನ್ನು ಸೋಮವಾರ ಅಮಾನತುಗೊಳಿಸಲಾಗಿದೆ ಎಂದು ಪಿಟಿಐಗೆ ತಿಳಿಸಿದ್ದಾರೆ.

ಸೆಪ್ಟೆಂಬರ್ 16 ರಂದು ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಡಾ.ಭೀಮರಾವ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಸಬ್ ಜೂನಿಯರ್ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಶೌಚಾಲಯದಲ್ಲಿ ಶೇಖರಿಸಿಟ್ಟಿದ್ದ ಅನ್ನ ಮತ್ತು ಪೂರಿಯನ್ನು ಬಡಿಸುತ್ತಿರುವ ದೃಶ್ಯ ಕಂಡು ಬಂದಿದೆ.

ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್(ಹಣಕಾಸು ಮತ್ತು ಕಂದಾಯ) ರಜನೀಶ್ ಕುಮಾರ್ ಮಿಶ್ರಾ ಅವರು ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಖಿಲೇಶ್ ಸಿಂಗ್ ಹೇಳಿದ್ದಾರೆ. 

ಅನ್ನ ಮತ್ತು ಪೂರಿಯನ್ನು ಶೌಚಾಲಯದಲ್ಲಿ ಇಡಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಆಟಗಾರರು ಶೌಚಾಲಯದೊಳಗೆ ಇಟ್ಟಿದ್ದ ಆಹಾರವನ್ನು ತೆಗೆದುಕೊಳ್ಳುತ್ತಿರುವ ದೃಶ್ಯ ಕಂಡು ಬಂದಿದೆ” ಎಂದು ಸಿಂಗ್ ಹೇಳಿದ್ದಾರೆ.

ಪಂದ್ಯಾವಳಿಯನ್ನು ಸೆಪ್ಟೆಂಬರ್ 16 ರಿಂದ 18 ರವರೆಗೆ ಆಯೋಜಿಸಲಾಗಿದ್ದು, ಇದರಲ್ಲಿ ರಾಜ್ಯದ 16 ವಿಭಾಗಗಳಿಂದ 300 ಕ್ಕೂ ಹೆಚ್ಚು ಆಟಗಾರರು ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT