ಲಾಲ್‌ಬಾಗ್ಚಾ ರಾಜಾ ಗಣೇಶೋತ್ಸವ 
ದೇಶ

ಮುಂಬೈನ ಪ್ರತಿಷ್ಠಿತ ಲಾಲ್‌ಬಾಗ್ಚಾ ರಾಜಾ ಗಣೇಶ ಸಮಿತಿಗೆ 3.66 ಲಕ್ಷ ರೂ ದಂಡ..!; ಕಾರಣ ಏನು ಗೊತ್ತಾ?

ದೇಶದ ಪ್ರತಿಷ್ಠಿಕ ಗಣೇಶೋತ್ಸವ ಸಮಿತಿಗಳಲ್ಲಿ ಒಂದಾದ ಮುಂಬೈನ ಪ್ರತಿಷ್ಠಿತ ಲಾಲ್‌ಬಾಗ್ಚಾ ರಾಜಾ ಗಣೇಶ ಸಮಿತಿಗೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ಬರೊಬ್ಬರಿ 3.66 ಲಕ್ಷ ರೂ ದಂಡ ವಿಧಿಸಿದೆ.

ಮುಂಬೈ: ದೇಶದ ಪ್ರತಿಷ್ಠಿಕ ಗಣೇಶೋತ್ಸವ ಸಮಿತಿಗಳಲ್ಲಿ ಒಂದಾದ ಮುಂಬೈನ ಪ್ರತಿಷ್ಠಿತ ಲಾಲ್‌ಬೌಚಾ ರಾಜಾ ಗಣೇಶ ಸಮಿತಿಗೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ಬರೊಬ್ಬರಿ 3.66 ಲಕ್ಷ ರೂ ದಂಡ ವಿಧಿಸಿದೆ.

ಈ ವರ್ಷ ಗಣೇಶೋತ್ಸವದ ವೇಳೆ  ಲಾಲ್‌ಬಾಗ್ಚಾ ರಾಜಾ ಗಣೇಶ ಸಮಿತಿ ರಸ್ತೆಯಲ್ಲಿ ಗುಂಡಿಗಳ ಸೃಷ್ಟಿಗೆ ಕಾರಣವಾದ ಹಿನ್ನಲೆಯಲ್ಲಿ ಬಿಎಂಸಿ ಸಮತಿಗೆ ಭಾರಿ ಪ್ರಮಾಣದ ದಂಡ ವಿಧಿಸಿದೆ. ಈ ಬಾರಿಯ ಗಣೇಶೋತ್ಸವ ವೇಳೆ ಲಾಲ್‌ಬಾಗ್ಚಾ ರಾಜಾ ಗಣೇಶ ಸಮಿತಿ ರಸ್ತೆಗಳಲ್ಲಿ 183 ಗುಂಡಿಗಳ ಸೃಷ್ಟಿಸಿಗೆ ಕಾರಣವಾಗಿತ್ತು. ಇದೇ ಕಾರಣಕ್ಕೆ ಮುಂಬೈನ ನಾಗರಿಕ ಸಂಸ್ಥೆಯಾದ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಲಾಲ್‌ಬೌಚಾ ರಾಜಾ ಸಾರ್ವಜನಿಕ ಗಣೇಶೋತ್ಸವ ಮಂಡಳಿಗೆ 3.66 ಲಕ್ಷ ರೂಪಾಯಿ ದಂಡ ವಿಧಿಸಿದೆ. ಪ್ರತಿ ಗುಂಡಿಗೆ 2000 ರೂಪಾಯಿ ನಂತೆ ದಂಡ ವಿಧಿಸಲಾಗುವುದು ಎಂದು ಬಿಎಂಸಿ ತಿಳಿಸಿದೆ.

ಲಾಲ್‌ಬಾಗ್ಚಾ ರಾಜಾ ನಗರದಲ್ಲಿರುವ ಪ್ರಮುಖ ಗಣೇಶ ಮಂಡಲಗಳಲ್ಲಿ ಒಂದಾಗಿದ್ದು, ಹತ್ತು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ರಾಜ್ಯ ಮತ್ತು ದೇಶಾದ್ಯಂತ ಭಕ್ತರನ್ನು ಆಕರ್ಷಿಸುತ್ತದೆ. ಉತ್ಸವ ಮುಗಿದ ನಂತರ BMC ಅಧಿಕಾರಿಗಳು ರಸ್ತೆಗಳ ಪರಿಶೀಲನೆ ನಡೆಸುತ್ತಾರೆ, ಸಂಘಟನಾ ಸಮಿತಿಗಳು ಅಥವಾ ಮಂಡಲಗಳು ಬಿದಿರಿನ ಕಡ್ಡಿಗಳನ್ನು ನೆಡುವ ಉದ್ದೇಶದಿಂದ ರಸ್ತೆಗಳನ್ನು ಅಗೆಯುವ ಮೂಲಕ ಮತ್ತು ಪ್ಯಾಂಡಲ್‌ಗಳ ಸುತ್ತಮುತ್ತ ಬ್ಯಾರಿಕೇಡ್‌ಗಳನ್ನು ಸ್ಥಾಪಿಸುವ ಮೂಲಕ ರಸ್ತೆಗಳನ್ನು ಹಾಳುಮಾಡಿದ್ದಾರೆಯೇ ಎಂದು ಪರಿಶೀಲಿಸುತ್ತಾರೆ.

ಈ ಪರಿಶೀಲನೆ ಬಳಿಕ ಲಾಲ್‌ಬೌಚಾ ರಾಜಾ ಗಣೇಶ ಸಮಿತಿಗೆ 3.66 ಲಕ್ಷ ರೂ ದಂಡ ವಿಧಿಸಲಾಗಿದೆ ಎಂದು ಸಮಿತಿ ಸದಸ್ಯರೊಬ್ಬರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!