ಪ್ರಾತಿನಿಧಿಕ ಚಿತ್ರ 
ದೇಶ

ಉತ್ತರ ಪ್ರದೇಶ: ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 40 ವರ್ಷದ ಶಿಕ್ಷಕ, 17 ವರ್ಷದ ವಿದ್ಯಾರ್ಥಿನಿ ಪತ್ತೆ!

40 ವರ್ಷದ ಶಾಲಾ ಶಿಕ್ಷಕ ಮತ್ತು ಅವರ ವಿದ್ಯಾರ್ಥಿನಿಯು ಅನೈತಿಕ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದ್ದು, ಇಲ್ಲಿನ ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಸಹರಾನ್‌ಪುರ: 40 ವರ್ಷದ ಶಾಲಾ ಶಿಕ್ಷಕ ಮತ್ತು ಅವರ ವಿದ್ಯಾರ್ಥಿನಿಯು ಅನೈತಿಕ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದ್ದು, ಇಲ್ಲಿನ ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಶಿಕ್ಷಕ ವೀರೇಂದ್ರ ಮತ್ತು ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯಾಗಿರುವ 17 ವರ್ಷದ ಬಾಲಕಿ ಮಂಗಳವಾರ ತಡರಾತ್ರಿ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ತಾಡಾ ತಿಳಿಸಿದ್ದಾರೆ.

ರಸೂಲ್‌ಪುರ ಗ್ರಾಮದ ನಿವಾಸಿಯಾಗಿರುವ ಶಿಕ್ಷಕ ತಾನು ಕೆಲಸ ಮಾಡುತ್ತಿದ್ದ ಶಾಲೆಯಲ್ಲೇ ಓದುತ್ತಿದ್ದ ಬಾಲಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದ್ದು, ಅವರಿಬ್ಬರು ಸೆಪ್ಟೆಂಬರ್ 3 ರಿಂದ ಕಾಣೆಯಾಗಿದ್ದರು ಎಂದು ಅವರು ಹೇಳಿದರು.

ಬಾಲಕಿ ಕುಟುಂಬವು ಅಪಹರಣ ಪ್ರಕರಣ ದಾಖಲಿಸಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಕೈಗೊಂಡಿದದ್ದರು. ಅವರು ಪದೇ ಪದೆ ಸ್ಥಳವನ್ನು ಬದಲಾಯಿಸುತ್ತಿದ್ದರಿಂದ ಅವರನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ ಎಂದು ತಿಳಿಸಿದ್ದಾರೆ.

ಸಂಜೆ, ಆ ಪ್ರದೇಶದಲ್ಲಿ ದುರ್ವಾಸನೆ ಹೊರಹೊಮ್ಮಲು ಪ್ರಾರಂಭಿಸಿದೆ. ಆಗ ಪೊಲೀಸರು ಕಾಡಿಗೆ ಹೋದಾಗ ಎರಡು ಮೃತ ದೇಹಗಳು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿವೆ. ಮೃತದೇಹಗಳ ಸ್ಥಿತಿ ನೋಡಿದರೆ ಇಬ್ಬರೂ ಹತ್ತು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಸ್‌ಎಸ್‌ಪಿ ಹೇಳಿದರು.

ಈ ಪ್ರದೇಶದಿಂದ ಬೈಕನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಆದರೆ, ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT