ಬಿಜೆಪಿ ಸಾಂದರ್ಭಿಕ ಚಿತ್ರ 
ದೇಶ

ಪಂಚ ರಾಜ್ಯಗಳ ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿ ಮಾಡಿದ ವೆಚ್ಚ ಎಷ್ಟು ಗೊತ್ತಾ?

ಇದೇ ವರ್ಷದ ಆರಂಭದಲ್ಲಿ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಬಿಜೆಪಿ ಸುಮಾರು ರೂ. 340 ಕೋಟಿ ವೆಚ್ಚ ಮಾಡಿದರೆ, ಕಾಂಗ್ರೆಸ್ ರೂ. 190 ಕೋಟಿಗಿಂತಲೂ ಹೆಚ್ಚಿನ ಹಣವನ್ನು ವ್ಯಯಿಸಿದೆ. ಉಭಯ ಪಕ್ಷಗಳ ಚುನಾವಣಾ ವೆಚ್ಚದ ಮಾಹಿತಿಯಲ್ಲಿ ಇದು ಬಹಿರಂಗವಾಗಿದೆ. 

ನವದೆಹಲಿ: ಇದೇ ವರ್ಷದ ಆರಂಭದಲ್ಲಿ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಬಿಜೆಪಿ ಸುಮಾರು ರೂ. 340 ಕೋಟಿ ವೆಚ್ಚ ಮಾಡಿದರೆ, ಕಾಂಗ್ರೆಸ್ ರೂ. 190 ಕೋಟಿಗಿಂತಲೂ ಹೆಚ್ಚಿನ ಹಣವನ್ನು ವ್ಯಯಿಸಿದೆ. ಉಭಯ ಪಕ್ಷಗಳ ಚುನಾವಣಾ ವೆಚ್ಚದ ಮಾಹಿತಿಯಲ್ಲಿ ಇದು ಬಹಿರಂಗವಾಗಿದೆ. 

ಈ ವರ್ಷದ ಆರಂಭದಲ್ಲಿ ನಡೆದ ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ, ಗೋವಾ ಮತ್ತು ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ರೂ. 340 ಕೋಟಿ ಗೂ ಹೆಚ್ಚಿನ ಮೊತ್ತದ ಹಣವನ್ನು ವೆಚ್ಚ ಮಾಡಿರುವುದಾಗಿ ಚುನಾವಣಾ ಆಯೋಗ ಬಿಜೆಪಿ ಸಲ್ಲಿಸಿರುವ ವರದಿಯಲ್ಲಿ ತಿಳಿಸಿದೆ.  

340 ಕೋಟಿ ರೂ. ಪೈಕಿ ರೂ. 221 ಕೋಟಿ ರೂ. ಗಳನ್ನು ಉತ್ತರ ಪ್ರದೇಶದಲ್ಲಿಯೇ ವೆಚ್ಚ ಮಾಡಲಾಗಿದೆ. ಮಣಿಪುರದಲ್ಲಿ ರೂ. 23 ಕೋಟಿ, ಉತ್ತರಾಖಂಡ್ ನಲ್ಲಿ ರೂ. 43. 67 ಕೋಟಿ ಮತ್ತು ಪಂಜಾಬ್ ನಲ್ಲಿ 36 ಕೋಟಿಗೂ ಹೆಚ್ಚು ಹಾಗೂ ಗೋವಾದಲ್ಲಿ ರೂ. 19 ಕೋಟಿಗೂ ಹೆಚ್ಚಿನ ಮೊತ್ತದ ಹಣವನ್ನು ವ್ಯಯಿಸಿರುವುದಾಗಿ ಬಿಜೆಪಿ ವೆಚ್ಚದ ವರದಿಯಲ್ಲಿ ಉಲ್ಲೇಖಿಸಲಾಗಿದೆ. 

ಕಾಂಗ್ರೆಸ್ ಸಲ್ಲಿಸಿರುವ ವರದಿ ಪ್ರಕಾರ, ಐದು ರಾಜ್ಯಗಳಲ್ಲಿ ಚುನಾವಣಾ ಪ್ರಚಾರ ಮತ್ತಿತರ ಕಾರ್ಯಗಳಿಗಾಗಿ  ರೂ. 194 ಕೋಟಿ ವೆಚ್ಚ ಮಾಡಲಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ದೇಶದಲ್ಲಿನ ಎರಡು ಪ್ರಬಲ ರಾಷ್ಟ್ರೀಯ ಪಕ್ಷಗಳಾಗಿವೆ. ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷಗಳು ತಮ್ಮ ಚುನಾವಣಾ ವೆಚ್ಚದ ವರದಿಯನ್ನು ಚುನಾವಣಾ ಆಯೋಗಕ್ಕೆ ಕಡ್ಡಾಯವಾಗಿ ಸಲ್ಲಿಸಬೇಕಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT