ಕೇರಳ ಪೊಲೀಸರು 
ದೇಶ

ಕೇರಳ: ಪಿಎಫ್‌ಐ ಪ್ರತಿಭಟನೆ, ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಹೈಕೋರ್ಟ್

ಎನ್ಐಎ ದಾಳಿ ವಿರೋಧಿಸಿ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂದ್ ಗೆ ಘೋಷಣೆ ನೀಡಿದ ನಂತರ ಕೇರಳ ರಾಜ್ಯದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಹೈಕೋರ್ಟ್ ಶುಕ್ರವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ತಿರುವನಂತಪುರಂ: ಎನ್ಐಎ ದಾಳಿ ವಿರೋಧಿಸಿ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂದ್ ಗೆ ಘೋಷಣೆ ನೀಡಿದ ನಂತರ ಕೇರಳ ರಾಜ್ಯದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಹೈಕೋರ್ಟ್ ಶುಕ್ರವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಬಂದ್ ನ್ನು ಈ ಹಿಂದೆಯೇ ನಿಷೇಧಿಸಲಾಗಿತ್ತು, ಸಾರ್ವಜನಿಕ ಆಸ್ತಿ ನಾಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಬಂದ್ ನಿಷೇಧಿಸುವ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ನ್ಯಾಯಾಲಯವು ರಾಜ್ಯಡಳಿತಕ್ಕೆ ಹೇಳಿದೆ. ಹಿಂಸಾಚಾರವನ್ನು ನಿಲ್ಲಿಸಲು ಸಾಧ್ಯವಿರುವ ಎಲ್ಲ ವಿಧಾನಗಳನ್ನು ಬಳಸುವಂತೆ ಅದು ಸರ್ಕಾರಕ್ಕೆ ಸೂಚಿಸಿದೆ.

ಶುಕ್ರವಾರ ಬೆಳಗ್ಗೆಯಿಂದ ಕೇರಳದ ವಿವಿಧ ಭಾಗಗಳಲ್ಲಿ ಪಿಎಫ್‌ಐ ಕರೆ ನೀಡಿರುವ ಬಂದ್ ನಿಂದಾಗಿ ಕಲ್ಲು ತೂರಾಟ ಸೇರಿದಂತೆ ಅಲ್ಲಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗಿವೆ.  

ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಬೆಂಬಲಿಸಲಾಗುತ್ತಿದೆ ಎಂದು  ಆರೋಪಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತಿತರ  ಏಜೆನ್ಸಿಗಳು ಗುರುವಾರ ಇಸ್ಲಾಮಿಕ್ ಸಂಘಟನೆಯ ನಾಯಕರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಪಿಎಫ್‌ಐ ಈ ಬಂದ್ ಗೆ ಕರೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT