ಪುಲ್ಕಿತ್ ಆರ್ಯ-ಅಂಕಿತ 
ದೇಶ

ಉತ್ತರಾಖಂಡ್: ಹತ್ಯೆ ಪ್ರಕರಣದಲ್ಲಿ ಬಿಜೆಪಿ ನಾಯಕನ ಪುತ್ರನ ಬಂಧನ

ರಿಷಿಕೇಶ್ ನಲ್ಲಿ ವನ್ ತಾರಾ ರೆಸಾರ್ಟ್ ನ ಸ್ವಾಗತಗಾರ್ತಿಯ ಹತ್ಯೆ ಪ್ರಕರಣದಲ್ಲಿ ಮೂವರು ಬಂಧನಕ್ಕೊಳಗಾಗಿದ್ದು, ಈ ಪೈಕಿ ಓರ್ವ ಬಿಜೆಪಿಯ ನಾಯಕ ವಿನೋದ್ ಆರ್ಯ ಮಗ ಪುಲ್ಕಿತ್ ಆರ್ಯ ಸೇರಿದ್ದಾರೆ. 

ಉತ್ತರಾಖಂಡ್: ರಿಷಿಕೇಶ್ ನಲ್ಲಿ ವನ್ ತಾರಾ ರೆಸಾರ್ಟ್ ನ ಸ್ವಾಗತಗಾರ್ತಿಯ ಹತ್ಯೆ ಪ್ರಕರಣದಲ್ಲಿ ಮೂವರು ಬಂಧನಕ್ಕೊಳಗಾಗಿದ್ದು, ಈ ಪೈಕಿ ಓರ್ವ ಬಿಜೆಪಿಯ ನಾಯಕ ವಿನೋದ್ ಆರ್ಯ ಮಗ ಪುಲ್ಕಿತ್ ಆರ್ಯ ಸೇರಿದ್ದಾರೆ. 

ರೆಸಾರ್ಟ್ ನ ಸ್ವಾಗತಗಾರ್ತಿ ಅಂಕಿತಾ ಕಳೆದ 5 ದಿನಗಳಿಂದ ನಾಪತ್ತೆಯಾಗಿದ್ದರು, ಆಕೆಯನ್ನು ರೆಸಾರ್ಟ್ ನ ಮಾಲಿಕ ಹಾಗೂ ಕಾರ್ಯನಿರ್ವಾಹಕರು ಹತ್ಯೆ ಮಾಡಿದ್ದರು. 

ಅಂಕಿತ ಸಾಯುತ್ತಿರುವ ಸಂದರ್ಭದಲ್ಲಿ ಪೊಲೀಸರೆದುರು ಹೇಳಿಕೆ ನೀಡಲು ಸಾಧ್ಯವಾಗಲಿಲ್ಲವಾದರೂ ಜಮ್ಮುವಿನಲ್ಲಿದ್ದ ಸ್ನೇಹಿತರೊಂದಿಗಿನ ಆಕೆಯ ವಾಟ್ಸ್ ಆಪ್ ಚಾಟ್ ಸಂವಹನಗಳು ರೆಸಾರ್ಟ್ ನಿರ್ವಾಹಕರ ದೌರ್ಜನ್ಯದ ಕಥೆಯನ್ನು ಬಿಚ್ಚಿಡುತ್ತಿವೆ. 

ಶ್ರೀಕೋಟ್ ಗ್ರಾಮದ ಅಂಕಿತ ಭಂಡಾರಿ ಎಂಬ ಯುವತಿ ರಿಷಿಕೇಶ್ ನ ವನ್ ತಾರಾ ರೆಸಾರ್ಟ್ ನಲ್ಲಿ ಸ್ವಾಗತಗಾರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದರು, ಆಕೆ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. 

ಈ ಪ್ರಕರಣವನ್ನು ಅನುಮಾನಾಸ್ಪದವಾಗಿ ಪರಿಗಣಿಸಿದ ಡಿಜಿಪಿ ಅಶೋಕ್ ಕುಮಾರ್, ರೆಸಾರ್ಟ್ ನ ಸಿಬ್ಬಂದಿಯ ವಿಚಾರಣೆ, ಹಾಗೂ ಸಿಸಿಟಿವಿ ಫುಟೇಜ್ ಗಳನ್ನು ಪರಿಶೀಲಿಸಲು ಮುಂದಾದರು, ಇಲ್ಲಿಂದ ಲಭ್ಯವಾದ ಮಾಹಿತಿಯ ಆಧಾರದಲ್ಲಿ ಪುಲ್ಕಿತ್ ಆರ್ಯ, ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಪುತ್ರನೂ ಇದ್ದಾರೆ.

ಮೂವರನ್ನೂ ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಅಂಕಿತ್ ಅಲಿಯಾಸ್ ಪುಲ್ಕಿತ್ ಗುಪ್ತಾ, ಸೌರಭ್ ಭಾಸ್ಕರ್ ಹಾಗೂ ಪುಲ್ಕಿತ್ ಆರ್ಯ ಬಂಧಿತ ಆರೋಪಿಗಳಾಗಿದ್ದಾರೆ. 

"ಸೆ.18 ರಂದು ಸಂಜೆ ಪುಳ್ಕಿತ್ ಹಾಗೂ ಅಂಕಿತ ಅವರು ರೆಸಾರ್ಟ್ ನಲ್ಲಿದ್ದಾಗ ನಿರ್ದಿಷ್ಟ ವಿಚಾರಕ್ಕೆ ವಾಗ್ವಾದ ಆರಂಭವಾಗಿದೆ. ಆ ಬಳಿಕ ಪುಲ್ಕಿತ್ ಅಂಕಿತಾಳನ್ನು ಮನಸು ಬದಲಾಯಿಸುವುದಕ್ಕಾಗಿ ತನ್ನೊಂದಿಗೆ ಕರೆದೊಯ್ದಿದ್ದಾರೆ. ಸ್ನೇಹಿತರೆಲ್ಲರೂ ಏಮ್ಸ್ ಗೆ ತೆರಳಿದ್ದಾರೆ. ಅಲ್ಲಿ ಮತ್ತೆ ಅಂಕಿತಾ ಹಾಗೂ ಪುಳ್ಕಿತ್ ನಡುವೆ ಮತ್ತೆ ವಾಗ್ವಾದ ಉಂಟಾಗಿದೆ. ಅಂಕಿತಾ ಸಹೋದ್ಯೋಗಿಗಳೆದುರು ನಮ್ಮನ್ನು ಅವಮಾನ ಮಾಡುತ್ತಿದ್ದರು, ನಮ್ಮ ವಿಷಯಗಳನ್ನು ಅವರ ಸಹೋದ್ಯೋಗಿಗಳಿಗೆ ಹೇಳುತ್ತಿದ್ದರು." ನಾವು, ಆಕ್ರೋಶಗೊಂಡು ಅಂಕಿತಾ ಅವರೊಂದಿಗೆ ಜಗಳವಾಡುತ್ತಿದ್ದಾಗ ಆಕೆ ನಮ್ಮನ್ನು ಥಳಿಸಲು ಮುಂದಾದಳು, ನಾವು ಕೋಪದಲ್ಲಿ ಆಕೆಯನ್ನು ತಳ್ಳಿದೆವು ಆಕೆ ಕಾಲುವೆಗೆ ಬಿದ್ದಳು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel