ಪುಲ್ಕಿತ್ ಆರ್ಯ-ಅಂಕಿತ 
ದೇಶ

ಉತ್ತರಾಖಂಡ್: ಹತ್ಯೆ ಪ್ರಕರಣದಲ್ಲಿ ಬಿಜೆಪಿ ನಾಯಕನ ಪುತ್ರನ ಬಂಧನ

ರಿಷಿಕೇಶ್ ನಲ್ಲಿ ವನ್ ತಾರಾ ರೆಸಾರ್ಟ್ ನ ಸ್ವಾಗತಗಾರ್ತಿಯ ಹತ್ಯೆ ಪ್ರಕರಣದಲ್ಲಿ ಮೂವರು ಬಂಧನಕ್ಕೊಳಗಾಗಿದ್ದು, ಈ ಪೈಕಿ ಓರ್ವ ಬಿಜೆಪಿಯ ನಾಯಕ ವಿನೋದ್ ಆರ್ಯ ಮಗ ಪುಲ್ಕಿತ್ ಆರ್ಯ ಸೇರಿದ್ದಾರೆ. 

ಉತ್ತರಾಖಂಡ್: ರಿಷಿಕೇಶ್ ನಲ್ಲಿ ವನ್ ತಾರಾ ರೆಸಾರ್ಟ್ ನ ಸ್ವಾಗತಗಾರ್ತಿಯ ಹತ್ಯೆ ಪ್ರಕರಣದಲ್ಲಿ ಮೂವರು ಬಂಧನಕ್ಕೊಳಗಾಗಿದ್ದು, ಈ ಪೈಕಿ ಓರ್ವ ಬಿಜೆಪಿಯ ನಾಯಕ ವಿನೋದ್ ಆರ್ಯ ಮಗ ಪುಲ್ಕಿತ್ ಆರ್ಯ ಸೇರಿದ್ದಾರೆ. 

ರೆಸಾರ್ಟ್ ನ ಸ್ವಾಗತಗಾರ್ತಿ ಅಂಕಿತಾ ಕಳೆದ 5 ದಿನಗಳಿಂದ ನಾಪತ್ತೆಯಾಗಿದ್ದರು, ಆಕೆಯನ್ನು ರೆಸಾರ್ಟ್ ನ ಮಾಲಿಕ ಹಾಗೂ ಕಾರ್ಯನಿರ್ವಾಹಕರು ಹತ್ಯೆ ಮಾಡಿದ್ದರು. 

ಅಂಕಿತ ಸಾಯುತ್ತಿರುವ ಸಂದರ್ಭದಲ್ಲಿ ಪೊಲೀಸರೆದುರು ಹೇಳಿಕೆ ನೀಡಲು ಸಾಧ್ಯವಾಗಲಿಲ್ಲವಾದರೂ ಜಮ್ಮುವಿನಲ್ಲಿದ್ದ ಸ್ನೇಹಿತರೊಂದಿಗಿನ ಆಕೆಯ ವಾಟ್ಸ್ ಆಪ್ ಚಾಟ್ ಸಂವಹನಗಳು ರೆಸಾರ್ಟ್ ನಿರ್ವಾಹಕರ ದೌರ್ಜನ್ಯದ ಕಥೆಯನ್ನು ಬಿಚ್ಚಿಡುತ್ತಿವೆ. 

ಶ್ರೀಕೋಟ್ ಗ್ರಾಮದ ಅಂಕಿತ ಭಂಡಾರಿ ಎಂಬ ಯುವತಿ ರಿಷಿಕೇಶ್ ನ ವನ್ ತಾರಾ ರೆಸಾರ್ಟ್ ನಲ್ಲಿ ಸ್ವಾಗತಗಾರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದರು, ಆಕೆ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. 

ಈ ಪ್ರಕರಣವನ್ನು ಅನುಮಾನಾಸ್ಪದವಾಗಿ ಪರಿಗಣಿಸಿದ ಡಿಜಿಪಿ ಅಶೋಕ್ ಕುಮಾರ್, ರೆಸಾರ್ಟ್ ನ ಸಿಬ್ಬಂದಿಯ ವಿಚಾರಣೆ, ಹಾಗೂ ಸಿಸಿಟಿವಿ ಫುಟೇಜ್ ಗಳನ್ನು ಪರಿಶೀಲಿಸಲು ಮುಂದಾದರು, ಇಲ್ಲಿಂದ ಲಭ್ಯವಾದ ಮಾಹಿತಿಯ ಆಧಾರದಲ್ಲಿ ಪುಲ್ಕಿತ್ ಆರ್ಯ, ಬಿಜೆಪಿ ನಾಯಕ ವಿನೋದ್ ಆರ್ಯ ಅವರ ಪುತ್ರನೂ ಇದ್ದಾರೆ.

ಮೂವರನ್ನೂ ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಅಂಕಿತ್ ಅಲಿಯಾಸ್ ಪುಲ್ಕಿತ್ ಗುಪ್ತಾ, ಸೌರಭ್ ಭಾಸ್ಕರ್ ಹಾಗೂ ಪುಲ್ಕಿತ್ ಆರ್ಯ ಬಂಧಿತ ಆರೋಪಿಗಳಾಗಿದ್ದಾರೆ. 

"ಸೆ.18 ರಂದು ಸಂಜೆ ಪುಳ್ಕಿತ್ ಹಾಗೂ ಅಂಕಿತ ಅವರು ರೆಸಾರ್ಟ್ ನಲ್ಲಿದ್ದಾಗ ನಿರ್ದಿಷ್ಟ ವಿಚಾರಕ್ಕೆ ವಾಗ್ವಾದ ಆರಂಭವಾಗಿದೆ. ಆ ಬಳಿಕ ಪುಲ್ಕಿತ್ ಅಂಕಿತಾಳನ್ನು ಮನಸು ಬದಲಾಯಿಸುವುದಕ್ಕಾಗಿ ತನ್ನೊಂದಿಗೆ ಕರೆದೊಯ್ದಿದ್ದಾರೆ. ಸ್ನೇಹಿತರೆಲ್ಲರೂ ಏಮ್ಸ್ ಗೆ ತೆರಳಿದ್ದಾರೆ. ಅಲ್ಲಿ ಮತ್ತೆ ಅಂಕಿತಾ ಹಾಗೂ ಪುಳ್ಕಿತ್ ನಡುವೆ ಮತ್ತೆ ವಾಗ್ವಾದ ಉಂಟಾಗಿದೆ. ಅಂಕಿತಾ ಸಹೋದ್ಯೋಗಿಗಳೆದುರು ನಮ್ಮನ್ನು ಅವಮಾನ ಮಾಡುತ್ತಿದ್ದರು, ನಮ್ಮ ವಿಷಯಗಳನ್ನು ಅವರ ಸಹೋದ್ಯೋಗಿಗಳಿಗೆ ಹೇಳುತ್ತಿದ್ದರು." ನಾವು, ಆಕ್ರೋಶಗೊಂಡು ಅಂಕಿತಾ ಅವರೊಂದಿಗೆ ಜಗಳವಾಡುತ್ತಿದ್ದಾಗ ಆಕೆ ನಮ್ಮನ್ನು ಥಳಿಸಲು ಮುಂದಾದಳು, ನಾವು ಕೋಪದಲ್ಲಿ ಆಕೆಯನ್ನು ತಳ್ಳಿದೆವು ಆಕೆ ಕಾಲುವೆಗೆ ಬಿದ್ದಳು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT