ಸಿಎಂ ಏಕನಾಥ್ ಶಿಂಧೆ 
ದೇಶ

ಮಹಾರಾಷ್ಟ್ರ: ಬಾಳಾ ಠಾಕ್ರೆಯ ದೀರ್ಘಾವಧಿ ಆಪ್ತರು ಸಿಎಂ ಶಿಂಧೆ ಬಣಕ್ಕೆ ಸೇರ್ಪಡೆ

ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ಅವರ ನಿವಾಸ 'ಮಾತೋಶ್ರೀ'ಯಲ್ಲಿ ಸುಮಾರು ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ ಚಂಪಾ ಸಿಂಗ್ ಥಾಪಾ ಮತ್ತು ಮೊರೇಶ್ವರ್ ರಾಜೇ ಅವರು ಸೋಮವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ...

ಥಾಣೆ: ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ಅವರ ನಿವಾಸ 'ಮಾತೋಶ್ರೀ'ಯಲ್ಲಿ ಸುಮಾರು ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ ಚಂಪಾ ಸಿಂಗ್ ಥಾಪಾ ಮತ್ತು ಮೊರೇಶ್ವರ್ ರಾಜೇ ಅವರು ಸೋಮವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣ ಸೇರಿದ್ದಾರೆ.

ಥಾಪಾ ಅವರು ಬಾಳಾ ಠಾಕ್ರೆ ಅವರ ಅತ್ಯಂತ ನಂಬಿಕಸ್ಥ ವ್ಯಕ್ತಿಯಾಗಿದ್ದರು. 27 ವರ್ಷಗಳ ಕಾಲ ಶ್ರದ್ಧೆಯಿಂದ ಬಾಳಾ ಠಾಕ್ರೆ ಅವರ ಸೇವೆ ಮಾಡಿದ್ದರು. 

ಇನ್ನು 'ಮಾತೋಶ್ರೀ' ಗೆ ಬರುತ್ತಿದ್ದ ಪ್ರತಿ ಫೋನ್ ಕರೆಗಳನ್ನು ಸ್ವೀಕರಿಸುತ್ತಿದ್ದ ರಾಜೆ ಅವರು ಮುಂಬೈನ ಉಪನಗರ ಬಾಂದ್ರಾದಲ್ಲಿರುವ ಠಾಕ್ರೆ ಅವರ ನಿವಾಸದಲ್ಲಿ ಕನಿಷ್ಠ 35 ವರ್ಷಗಳಿಂದ ಕೆಲಸ ಮಾಡುತ್ತಿದ್ದರು.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಥಾಣೆ ಶಾಸಕರು ಥಾಪಾ ಮತ್ತು ರಾಜೇ ಅವರಿಗೆ ಶಾಲು ಹೊದಿಸಿ, ಅಭಿನಂದಿಸುವ ಮೂಲಕ ತಮ್ಮ ಬಣಕ್ಕೆ ಸ್ವಾಗತಿಸಿದರು.

ತಾವು "ನೈಜ" ಶಿವಸೇನೆಯನ್ನು ಪ್ರತಿನಿಧಿಸುವುದರಿಂದ ಸೇನೆಯ ಸಂಸ್ಥಾಪಕ ಬಾಳಾ ಠಾಕ್ರೆ ಅವರ ಹಿಂದುತ್ವದ ಬೋಧನೆಗಳನ್ನು ಸಾಕಾರಗೊಳಿಸುತ್ತಿರುವುದರಿಂದ ಈ ಇಬ್ಬರೂ ತಮ್ಮ ಬಣ ನಿರ್ಧರಿಸಿದ್ದಾರೆ ಎಂದು ಶಿಂಧೆ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Mysuru Dasara: ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ; ಜಂಬೂ ಸವಾರಿಗೆ ಸಿಎಂ ಚಾಲನೆ

ಯದುವೀರ್ ಒಡೆಯರ್ ರಿಂದ ಬನ್ನಿ ಮರಕ್ಕೆ ಶಮಿ ಪೂಜೆ: ಅರಮನೆ ದಸರಾ ಮುಕ್ತಾಯ

HAL ಗೇ ಠಕ್ಕರ್, ಟಾಟಾ-Airbus ನಿಂದ ಕರ್ನಾಟಕದಲ್ಲಿ H125 ಹೆಲಿಕಾಪ್ಟರ್ ನಿರ್ಮಾಣ!

RSS @100: ಪ್ರಚಾರಕರಾಗಿ ಸಂಘ ಸೇರಿದ ಕೇರಳದ ಮಾಜಿ ಪೊಲೀಸ್ ಮುಖ್ಯಸ್ಥ Jacob Thomas

ಭಾರತದಲ್ಲಿ ಪ್ರತಿ ಗಂಟೆಗೆ ಒಬ್ಬ ರೈತ ಆತ್ಮಹತ್ಯೆ: NCRB ವರದಿ

SCROLL FOR NEXT