ವಿದೇಶಾಂಗ ಸಚಿವ ಎಸ್. ಜೈಶಂಕರ್ 
ದೇಶ

'ಪಕ್ಷಪಾತ ವರದಿ': ಅಮೆರಿಕ ಮಾಧ್ಯಮಗಳ ವಿರುದ್ಧ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಕಿಡಿ

ಅಮೆರಿಕ ಮಾಧ್ಯಮಗಳ ವಿರುದ್ಧ ತೀವ್ರ ಕಿಡಿಕಾರಿರುವ ವಿದೇಶಾಂಗ ಸಚಿವ ಎಸ್ ಜೈ ಶಂಕರ್, ಮಾಧ್ಯಮಗಳ ವರದಿ ಪಕ್ಷಪಾತದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ.

ವಾಷಿಂಗ್ಟನ್: ಅಮೆರಿಕ ಮಾಧ್ಯಮಗಳ ವಿರುದ್ಧ ತೀವ್ರ ಕಿಡಿಕಾರಿರುವ ವಿದೇಶಾಂಗ ಸಚಿವ ಎಸ್ ಜೈ ಶಂಕರ್, ಮಾಧ್ಯಮಗಳ ವರದಿ ಪಕ್ಷಪಾತದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ.

ಭಾರತೀಯ–ಅಮೆರಿಕನ್ನರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಮೆರಿಕದ ಮಾಧ್ಯಮಗಳು ಭಾರತದ ಬಗ್ಗೆ ತಾರತಮ್ಯದಿಂದ ಕೂಡಿದ ವರದಿಗಳನ್ನು ಪ್ರಕಟಿಸುತ್ತಿವೆ ಎಂದು ಕಿಡಿಕಾರಿದ್ದಾರೆ. ಹೆಸರು ಹೇಳದೆಯೇ ‘ದಿ ವಾಷಿಂಗ್ಟನ್ ಪೋಸ್ಟ್’ ಪತ್ರಿಕೆ ಬಗ್ಗೆಯೂ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಮಾಧ್ಯಮಗಳನ್ನು ಗಮನಿಸಿದೆ. ಈ ನಗರದಿಂದ ಪ್ರಕಟವಾಗುವ ಪತ್ರಿಕೆಯೊಂದು ಸೇರಿದಂತೆ ಇಲ್ಲಿನ ಮಾಧ್ಯಮಗಳು ಏನು ಪ್ರಕಟಿಸುತ್ತಿವೆ ಎಂಬುದು ನಿಜವಾಗಿಯೂ ನಿಮಗೆ ಗೊತ್ತಿದೆಯೇ’ ಎಂದು ಪ್ರಶ್ನಿಸಿದ್ದಾರೆ.

ಜೆಫ್ ಬೆಜೋಸ್ ಮಾಲೀಕತ್ವದ ‘ದಿ ವಾಷಿಂಗ್ಟನ್ ಪೋಸ್ಟ್’ ಪತ್ರಿಕೆಯು ವಾಷಿಂಗ್ಟನ್ ಡಿಸಿಯಿಂದ ಪ್ರಕಟವಾಗುತ್ತಿದೆ. ‘ಮಾಧ್ಯಮಗಳ ವರದಿಗಳು ಪಕ್ಷಪಾತದಿಂದ ಕೂಡಿವೆ ಎಂಬುದು ನನ್ನ ಅಭಿಪ್ರಾಯವಾಗಿದೆ. ಭಾರತದಲ್ಲಿ ನಿಜವಾಗಿಯೂ ಪ್ರಯತ್ನಗಳಾಗುತ್ತಿವೆ... ನೋಡಿ, ಭಾರತವು ತನ್ನ ದಾರಿಯಲ್ಲೇ ಸಾಗುತ್ತಿದೆ. ತಾವೇ ಭಾರತದ ರಕ್ಷಕರು ಮತ್ತು ಭಾರತವನ್ನು ರೂಪಿಸುವವರು ಎಂದು ಭಾವಿಸಿರುವವರು ಅಲ್ಲಿ ನೆಲೆ ಕಳೆದುಕೊಳ್ಳುತ್ತಿದ್ದಾರೆ. ಹೀಗೆ ಚರ್ಚೆ ಮಾಡುವ ಕೆಲವರ ಬಣ್ಣ ಬಯಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ. ಭಾರತ ವಿರೋಧಿ ಶಕ್ತಿಗಳು ಇಲ್ಲಿ ಹೆಚ್ಚಾಗುತ್ತಿವೆಯಲ್ಲಾ ಎಂದು ಕೇಳಲಾದ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದ್ದಾರೆ.

ಅಂಥ ಶಕ್ತಿಗಳು ಹೊರಗಡೆಯಿಂದ ಭಾರತವನ್ನು ಗೆಲ್ಲಲು ಮತ್ತು ಹೊರಗಿದ್ದುಕೊಂಡೇ ಭಾರತಕ್ಕೆ ಒಂದು ರೂಪ ನೀಡಬೇಕು ಎಂದು ಪ್ರಯತ್ನಿಸುತ್ತಿವೆ. ಆದರೆ ಅವುಗಳು ಭಾರತದಲ್ಲಿ ಗೆಲ್ಲುವುದಿಲ್ಲ. ಇದು ನಾವು ತಿಳಿದುಕೊಳ್ಳಬೇಕಾದ ಮುಖ್ಯ ವಿಷಯ. ಸ್ಪರ್ಧಿಸುವುದು ಮುಖ್ಯ. ಯಾಕೆಂದರೆ ಹೆಚ್ಚಿನ ಅಮೆರಿಕನ್ನರು ಸೂಕ್ಷ್ಮಗಳನ್ನು ಮತ್ತು ಸ್ವದೇಶಕ್ಕೆ ಮರಳುವ ಸಂಕೀರ್ಣತೆಗಳನ್ನು ಅರಿತಿರುವುದಿಲ್ಲ. ಇತರರು ನಮ್ಮನ್ನು ವ್ಯಾಖ್ಯಾನಿಸಲು ಬಿಡಬಾರದು. ಹೀಗಾಗಿ ಇದು ಒಂದು ಸಮುದಾಯವಾಗಿ ನನಗೆ ಬಹು ಮುಖ್ಯವಾದ ವಿಷಯವಾಗಿದೆ’ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI ಇಂಪ್ಯಾಕ್ಟ್ ಶೃಂಗಸಭೆ ಟಾರ್ಗೆಟ್: ವಿದೇಶಿಗರಿಂದ ದಾಳಿ ಸಾಧ್ಯತೆ, ಗುಪ್ತಚರ ವರದಿ ಬೆನ್ನಲ್ಲೇ G20 ಗ್ರೇಡ್ ಸೈಬರ್ ಭದ್ರತಾ ವ್ಯವಸ್ಥೆ!

'ಕರಾವಳಿ' ಹೂಡಿಕೆ ವಿವಾದ: ಪ್ರಿಯಾಂಕ್ ಖರ್ಗೆ ಸಹಜವಾಗಿ ಹೇಳಿದ್ದಾರೆ, ಆದರೆ ದಕ್ಷಿಣ ಕನ್ನಡ ಬದಲಾಗುತ್ತಿದೆ; ಪರಮೇಶ್ವರ್

T20 World Cup: Super 8 ಪ್ರವೇಶಿಸಿ ಜಿಂಬಾಬ್ವೆ ಇತಿಹಾಸ ಸೃಷ್ಟಿ; 17 ವರ್ಷಗಳ ನಂತರ Australia ಟೂರ್ನಿನಿಂದ ಔಟ್!

News wrap of the day 17-02-2026| Muda case: CS ಶಾಲಿನಿ ರಜನೀಶ್ ವಿರುದ್ಧ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ, ಆಡಿಯೋ ಬಿಡುಗಡೆ; ನಾಯಿ, ನಾಯಕತ್ವ: ಮಹದೇವಪ್ಪ ಹೇಳಿಕೆಗೆ DK Suresh ಪ್ರತಿಕ್ರಿಯೆ ಏನು?

ಭಾರತದಲ್ಲಿ ವಯಸ್ಸಿನ ಆಧಾರದ ಮೇಲೆ 'ಸಾಮಾಜಿಕ ಜಾಲತಾಣ ನಿಷೇಧ' ಕುರಿತು ಚರ್ಚೆ: ಅಶ್ವಿನಿ ವೈಷ್ಣವ್

SCROLL FOR NEXT