ವಿದೇಶಾಂಗ ಸಚಿವ ಎಸ್. ಜೈಶಂಕರ್ 
ದೇಶ

'ಪಕ್ಷಪಾತ ವರದಿ': ಅಮೆರಿಕ ಮಾಧ್ಯಮಗಳ ವಿರುದ್ಧ ವಿದೇಶಾಂಗ ಸಚಿವ ಎಸ್ ಜೈ ಶಂಕರ್ ಕಿಡಿ

ಅಮೆರಿಕ ಮಾಧ್ಯಮಗಳ ವಿರುದ್ಧ ತೀವ್ರ ಕಿಡಿಕಾರಿರುವ ವಿದೇಶಾಂಗ ಸಚಿವ ಎಸ್ ಜೈ ಶಂಕರ್, ಮಾಧ್ಯಮಗಳ ವರದಿ ಪಕ್ಷಪಾತದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ.

ವಾಷಿಂಗ್ಟನ್: ಅಮೆರಿಕ ಮಾಧ್ಯಮಗಳ ವಿರುದ್ಧ ತೀವ್ರ ಕಿಡಿಕಾರಿರುವ ವಿದೇಶಾಂಗ ಸಚಿವ ಎಸ್ ಜೈ ಶಂಕರ್, ಮಾಧ್ಯಮಗಳ ವರದಿ ಪಕ್ಷಪಾತದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ.

ಭಾರತೀಯ–ಅಮೆರಿಕನ್ನರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಮೆರಿಕದ ಮಾಧ್ಯಮಗಳು ಭಾರತದ ಬಗ್ಗೆ ತಾರತಮ್ಯದಿಂದ ಕೂಡಿದ ವರದಿಗಳನ್ನು ಪ್ರಕಟಿಸುತ್ತಿವೆ ಎಂದು ಕಿಡಿಕಾರಿದ್ದಾರೆ. ಹೆಸರು ಹೇಳದೆಯೇ ‘ದಿ ವಾಷಿಂಗ್ಟನ್ ಪೋಸ್ಟ್’ ಪತ್ರಿಕೆ ಬಗ್ಗೆಯೂ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಮಾಧ್ಯಮಗಳನ್ನು ಗಮನಿಸಿದೆ. ಈ ನಗರದಿಂದ ಪ್ರಕಟವಾಗುವ ಪತ್ರಿಕೆಯೊಂದು ಸೇರಿದಂತೆ ಇಲ್ಲಿನ ಮಾಧ್ಯಮಗಳು ಏನು ಪ್ರಕಟಿಸುತ್ತಿವೆ ಎಂಬುದು ನಿಜವಾಗಿಯೂ ನಿಮಗೆ ಗೊತ್ತಿದೆಯೇ’ ಎಂದು ಪ್ರಶ್ನಿಸಿದ್ದಾರೆ.

ಜೆಫ್ ಬೆಜೋಸ್ ಮಾಲೀಕತ್ವದ ‘ದಿ ವಾಷಿಂಗ್ಟನ್ ಪೋಸ್ಟ್’ ಪತ್ರಿಕೆಯು ವಾಷಿಂಗ್ಟನ್ ಡಿಸಿಯಿಂದ ಪ್ರಕಟವಾಗುತ್ತಿದೆ. ‘ಮಾಧ್ಯಮಗಳ ವರದಿಗಳು ಪಕ್ಷಪಾತದಿಂದ ಕೂಡಿವೆ ಎಂಬುದು ನನ್ನ ಅಭಿಪ್ರಾಯವಾಗಿದೆ. ಭಾರತದಲ್ಲಿ ನಿಜವಾಗಿಯೂ ಪ್ರಯತ್ನಗಳಾಗುತ್ತಿವೆ... ನೋಡಿ, ಭಾರತವು ತನ್ನ ದಾರಿಯಲ್ಲೇ ಸಾಗುತ್ತಿದೆ. ತಾವೇ ಭಾರತದ ರಕ್ಷಕರು ಮತ್ತು ಭಾರತವನ್ನು ರೂಪಿಸುವವರು ಎಂದು ಭಾವಿಸಿರುವವರು ಅಲ್ಲಿ ನೆಲೆ ಕಳೆದುಕೊಳ್ಳುತ್ತಿದ್ದಾರೆ. ಹೀಗೆ ಚರ್ಚೆ ಮಾಡುವ ಕೆಲವರ ಬಣ್ಣ ಬಯಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ. ಭಾರತ ವಿರೋಧಿ ಶಕ್ತಿಗಳು ಇಲ್ಲಿ ಹೆಚ್ಚಾಗುತ್ತಿವೆಯಲ್ಲಾ ಎಂದು ಕೇಳಲಾದ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದ್ದಾರೆ.

ಅಂಥ ಶಕ್ತಿಗಳು ಹೊರಗಡೆಯಿಂದ ಭಾರತವನ್ನು ಗೆಲ್ಲಲು ಮತ್ತು ಹೊರಗಿದ್ದುಕೊಂಡೇ ಭಾರತಕ್ಕೆ ಒಂದು ರೂಪ ನೀಡಬೇಕು ಎಂದು ಪ್ರಯತ್ನಿಸುತ್ತಿವೆ. ಆದರೆ ಅವುಗಳು ಭಾರತದಲ್ಲಿ ಗೆಲ್ಲುವುದಿಲ್ಲ. ಇದು ನಾವು ತಿಳಿದುಕೊಳ್ಳಬೇಕಾದ ಮುಖ್ಯ ವಿಷಯ. ಸ್ಪರ್ಧಿಸುವುದು ಮುಖ್ಯ. ಯಾಕೆಂದರೆ ಹೆಚ್ಚಿನ ಅಮೆರಿಕನ್ನರು ಸೂಕ್ಷ್ಮಗಳನ್ನು ಮತ್ತು ಸ್ವದೇಶಕ್ಕೆ ಮರಳುವ ಸಂಕೀರ್ಣತೆಗಳನ್ನು ಅರಿತಿರುವುದಿಲ್ಲ. ಇತರರು ನಮ್ಮನ್ನು ವ್ಯಾಖ್ಯಾನಿಸಲು ಬಿಡಬಾರದು. ಹೀಗಾಗಿ ಇದು ಒಂದು ಸಮುದಾಯವಾಗಿ ನನಗೆ ಬಹು ಮುಖ್ಯವಾದ ವಿಷಯವಾಗಿದೆ’ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಭಾರತ ತಂಡಕ್ಕೆ ಭಾರಿ ಆಘಾತ; ಸ್ಟಾರ್ ಆಟಗಾರನ ಮೂಳೆ ಮುರಿತ, ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

SCROLL FOR NEXT