ಪ್ರಾತಿನಿಧಿಕ ಚಿತ್ರ 
ದೇಶ

ಅಂಬಾಲಾ ಸೆಂಟ್ರಲ್ ಜೈಲಿನಲ್ಲಿ ನೇಣು ಬಿಗಿದುಕೊಂಡು ಕೊಲೆ ಆರೋಪಿ ಆತ್ಮಹತ್ಯೆ

2019ರ ಕೊಲೆ ಪ್ರಕರಣದ ಆರೋಪಿಯಾಗಿದ್ದ 40 ವರ್ಷದ ವ್ಯಕ್ತಿಯೊಬ್ಬ ಇಲ್ಲಿನ ಕೇಂದ್ರ ಕಾರಾಗೃಹದ ತನ್ನ ಬ್ಯಾರಕ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಅಂಬಾಲಾ: 2019ರ ಕೊಲೆ ಪ್ರಕರಣದ ಆರೋಪಿಯಾಗಿದ್ದ 40 ವರ್ಷದ ವ್ಯಕ್ತಿಯೊಬ್ಬ ಇಲ್ಲಿನ ಕೇಂದ್ರ ಕಾರಾಗೃಹದ ತನ್ನ ಬ್ಯಾರಕ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಗೊಂಡಾ ಗ್ರಾಮದ ನಿವಾಸಿಯಾದ ಸರ್ವೇಶ್ ಸೇವಕ್ ಭಾನುವಾರ ಜೈಲಿನ ಬ್ಯಾರಕ್‌ನಲ್ಲಿ ಹಗ್ಗದಿಂದ ನೇಣು ಬಿಗಿದುಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, 2019ರಲ್ಲಿ ಸೇವಕ್ ಕೆಲಸ ಹುಡುಕಿಕೊಂಡು ಅಂಬಾಲಾ ನಗರಕ್ಕೆ ಬಂದಿದ್ದ. ಈ ವೇಳೆ ಈಗಾಗಲೇ ವಲಸೆ ಕಾರ್ಮಿಕನಾಗಿದ್ದ ನಿಕ್ಕು ಎಂಬಾತ ವಾಸಿಸುತ್ತಿದ್ದ ಮೋಟಾರ್ ಮಾರ್ಕೆಟ್ ಪ್ರದೇಶದಲ್ಲಿ ಬಾಡಿಗೆಗೆ ಮನೆಯನ್ನು ತೆಗೆದುಕೊಂಡಿದ್ದ. ಅದೇ ವರ್ಷ ಏಪ್ರಿಲ್‌ನಲ್ಲಿ ಸೇವಕ್ ಮತ್ತು ನಿಕ್ಕು ನಡುವೆ ಕೆಲವು ವಿಚಾರಗಳಿಗೆ ಅಸಮಾಧಾನ ಉಂಟಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ, 2019ರ ಏಪ್ರಿಲ್ 6 ರಂದು ಟೆರೇಸ್ ಮೇಲೆ ಮಲಗಿದ್ದಾಗ ನಿಕ್ಕುನನ್ನು ಸೇವಕ್ ಹಗ್ಗದಿಂದ ಕತ್ತು ಹಿಸುಕಿ ಕೊಂದಿದ್ದಾನೆ. ನಿಕ್ಕು ಅವರ ದೇಹವು ಹಾಸಿಗೆಯ ಕೆಳಗೆ ಬಿದ್ದಿರುವುದು ಕಂಡುಬಂದಿದೆ ಮತ್ತು ಘಟನೆಯ ನಂತರ ಸೇವಕ್ ಪರಾರಿಯಾಗಿದ್ದನು ಎಂದು ಅವರು ತಿಳಿಸಿದ್ದಾರೆ.

ಬಲಿಕ ಸೇವಕ್‌ನನ್ನು ಬಂಧಿಸಲಾಯಿತು ಮತ್ತು ಪೊಲೀಸರು ಆತನ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT