ಭಾರಿ ಮಳೆಯಿಂದಾಗಿ ಸೋಮವಾರ ಉಂಟಾಗಿದ್ದ ಟ್ರಾಫಿಕ್ ಜಾಮ್ 
ದೇಶ

ಹೈದರಾಬಾದ್‌ನಲ್ಲಿ ಮತ್ತೆ ಭಾರಿ ಮಳೆ; ನಗರದಾದ್ಯಂತ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ಸವಾರರು

ಭಾರಿ ಮಳೆಯಿಂದಾಗಿ ಹಲವೆಡೆ ಜಲಾವೃತವಾಗಿದೆ. ಟೋಲಿಚೌಕಿ ಮೇಲ್ಸೇತುವೆ ಬಳಿ ಮೆಹದಿಪಟ್ನಂ ಕಡೆಗೆ ಸಾಗುವ ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ರಸ್ತೆಗಳೆಲ್ಲ ಜಲಾವೃತವಾಗಿರುವುದರಿಂದ ದ್ವಿಚಕ್ರ ವಾಹನ ಸವಾರರು ಪರದಾಡುವಂತಾಯಿತು.

ಹೈದರಾಬಾದ್: ರಾಜ್ಯ ರಾಜಧಾನಿಯ ಹಲವು ಭಾಗಗಳಲ್ಲಿ ಸೋಮವಾರ ಭಾರಿ ಮಳೆಯಾಗಿದೆ. ಕಳೆದ ಕೆಲವು ವಾರಗಳಿಂದ ಬಿಡುವು ಕೊಟ್ಟಿದ್ದ ಮಳೆ ಇದೀಗ ಅಬ್ಬರದೊಂದಿಗೆ ಹೈದರಾಬಾದ್‌ಗೆ ಮರಳಿದೆ. ರಾತ್ರಿ 8 ಗಂಟೆಯವರೆಗೆ ನಾಂಪಲ್ಲಿಯಲ್ಲಿ ಅತಿ ಹೆಚ್ಚು ಅಂದರೆ 9.3 ಸೆಂ.ಮೀ., ಎಲ್‌ಬಿ ನಗರ (8.6 ಸೆಂ.ಮೀ.), ಮೆಹದಿಪಟ್ನಂ (8.4 ಸೆಂ.ಮೀ.), ಖೈರತಾಬಾದ್ (7.6 ಸೆಂ.ಮೀ.) ಮತ್ತು ಆಸಿಫ್‌ನಗರ (7.6 ಸೆಂ.ಮೀ.) ಮಳೆ ದಾಖಲಾಗಿದೆ.

ಭಾರಿ ಮಳೆಯಿಂದಾಗಿ ಹಲವೆಡೆ ಜಲಾವೃತವಾಗಿದೆ. ಟೋಲಿಚೌಕಿ ಮೇಲ್ಸೇತುವೆ ಬಳಿ ಮೆಹದಿಪಟ್ನಂ ಕಡೆಗೆ ಸಾಗುವ ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ರಸ್ತೆಗಳೆಲ್ಲ ಜಲಾವೃತವಾಗಿರುವುದರಿಂದ ದ್ವಿಚಕ್ರ ವಾಹನ ಸವಾರರು ಪರದಾಡುವಂತಾಯಿತು.

ರಸ್ತೆಗಳೆಲ್ಲ ಜಲಾವೃತಗೊಂಡಿದ್ದು ದ್ವಿಚಕ್ರ ವಾಹನ ಸವಾರರ ಪರದಾಟ

ಖೈರತಾಬಾದ್ ಮೆಟ್ರೋ ನಿಲ್ದಾಣದ ಬಳಿಯೂ ಇದೇ ಪರಿಸ್ಥಿತಿ ಇದ್ದು, ಎರಡು ಅಡಿ ಎತ್ತರಕ್ಕೆ ನೀರು ನಿಂತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಮೂಸರಂಬಾಗ್ ಸೇತುವೆಯೂ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ವಿಪತ್ತು ನಿರ್ವಹಣಾ ಪಡೆ (ಡಿಆರ್‌ಎಫ್) ತಂಡಗಳು ನೀರನ್ನು ತೆರವುಗೊಳಿಸಲು ಮುಂದಾಗಿವೆ. ಓಲ್ಡ್ ಸಿಟಿಯ ಓಸ್ಮಾನ್ ಗುಂಜ್‌ನಂತಹ ಹಲವಾರು ಭಾಗಗಳಲ್ಲಿ ಭಾರಿ ಮಳೆಯಾಗಿರುವುದು ವರದಿಯಾಗಿದೆ.

ನಗರದಾದ್ಯಂತ ಟ್ರಾಫಿಕ್ ಜಾಮ್

ಭಾರಿ ಮಳೆಯಿಂದಾಗಿ ಹಲವೆಡೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪಂಜಾಗುಟ್ಟ ಜಂಕ್ಷನ್, ನಾಗಾರ್ಜುನ ಸರ್ಕಲ್, ಅಬಿಡ್ಸ್, ನಾಂಪಲ್ಲಿ, ಖೈರತಾಬಾದ್, ಮೆಹದಿಪಟ್ನಂ ಮತ್ತು ಲಕ್ಡಿಕಾಪುಲ್‌ನಲ್ಲಿ ಟ್ರಾಫಿಕ್ ಉಂಟಾಗಿದೆ.

ಜಂಟಿ ಆಯುಕ್ತ (ಸಂಚಾರ) ಎ.ವಿ.ರಂಗನಾಥ್ ಮಾತನಾಡಿ, ಭಾರಿ ಮಳೆಯಿಂದಾಗಿ ರಸ್ತೆಗಳೆಲ್ಲ ಜಲಾವೃತವಾಗಿದ್ದು, ನಗರದಾದ್ಯಂತ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. 'ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂದೂಡಲು ವಿನಂತಿಸಲಾಗಿದೆ, ಇಲ್ಲದಿದ್ದರೆ ಅವರು ಗಂಭೀರ ಟ್ರಾಫಿಕ್ ಜಾಮ್‌ಗಳಲ್ಲಿ ಸಿಲುಕಬಹುದು' ಎಂದು ಎಚ್ಚರಿಕೆ ನೀಡಿದ್ದಾರೆ.

ಈಮಧ್ಯೆ, ಮುಂದಿನ ನಾಲ್ಕು ದಿನಗಳ ಕಾಲ ತೆಲಂಗಾಣದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

SCROLL FOR NEXT