ಗೌತಮ್ ನವ್ಲಾಖಾ 
ದೇಶ

ಭೀಮಾ ಕೋರೆಗಾಂವ್ ಪ್ರಕರಣ: ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ಬಂಧಿತ ಕಾರ್ಯಕರ್ತ ನವ್ಲಾಖಾ ಚಿಕಿತ್ಸೆಗೆ ಸುಪ್ರೀಂ ಆದೇಶ

ಎಲ್ಗರ್‌ ಪರಿಷತ್‌-ಮಾವೋವಾದಿ ನಂಟು ಪ್ರಕರಣದಲ್ಲಿ ಜೈಲು ಪಾಲಾಗಿರುವ ಕಾರ್ಯಕರ್ತ ಗೌತಮ್‌ ನವ್ಲಾಖಾರನ್ನು ಚಿಕಿತ್ಸೆಗಾಗಿ ಮುಂಬೈನ ಜಸ್ಲೋಕ್‌ ಆಸ್ಪತ್ರೆಗೆ ತಕ್ಷಣವೇ ಸ್ಥಳಾಂತರಿಸುವಂತೆ ತಲೋಜಾ ಜೈಲು ಅಧೀಕ್ಷಕರಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ನವದೆಹಲಿ: ಎಲ್ಗರ್‌ ಪರಿಷತ್‌-ಮಾವೋವಾದಿ ನಂಟು ಪ್ರಕರಣದಲ್ಲಿ ಜೈಲು ಪಾಲಾಗಿರುವ ಕಾರ್ಯಕರ್ತ ಗೌತಮ್‌ ನವ್ಲಾಖಾರನ್ನು ಚಿಕಿತ್ಸೆಗಾಗಿ ಮುಂಬೈನ ಜಸ್ಲೋಕ್‌ ಆಸ್ಪತ್ರೆಗೆ ತಕ್ಷಣವೇ ಸ್ಥಳಾಂತರಿಸುವಂತೆ ತಲೋಜಾ ಜೈಲು ಅಧೀಕ್ಷಕರಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ವೈದ್ಯಕೀಯ ಚಿಕಿತ್ಸೆ ಪಡೆಯುವುದು ಖೈದಿಗಳ ಮೂಲಭೂತ ಹಕ್ಕು ಎಂದು ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರ ಪೀಠ ಹೇಳಿದ್ದು, ನವ್ಲಾಖಾ ಪತ್ನಿ ಸಭಾ ಹುಸೇನ್ ಮತ್ತು ಸಹೋದರಿ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಲು ಅನುಮತಿ ನೀಡಿದೆ.

'ಕಕ್ಷಿದಾರರ ಪರ ವಕೀಲ ಮನವಿಯನ್ನು ಆಲಿಸಿದ ನಂತರ, ವೈದ್ಯಕೀಯ ಚಿಕಿತ್ಸೆ ಪಡೆಯುವುದು ಮೂಲಭೂತ ಹಕ್ಕು ಎಂದು ನಾವು ಪೀಠ ಭಾವಿಸಿದ್ದು ಗೌತಮ್ ರನ್ನು ಸಂಪೂರ್ಣ ವೈದ್ಯಕೀಯ ತಪಾಸಣೆಗಾಗಿ ತಕ್ಷಣವೇ ಕರೆದೊಯ್ಯುವಂತೆ ನಾವು ನಿರ್ದೇಶಿಸಿದೆ. ಇದರಿಂದ ಜಸ್ಲೋಕ್ ಆಸ್ಪತ್ರೆಯಲ್ಲಿ ಅವರು ಅಗತ್ಯ ವೈದ್ಯಕೀಯ ತಪಾಸಣೆಗೆ ಒಳಗಾಗಲು ಮತ್ತು ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತದೆ.

ಮುಂಬೈ ಬಳಿಯ ತಲೋಜಾ ಜೈಲಿನಲ್ಲಿ ಸಾಕಷ್ಟು ವೈದ್ಯಕೀಯ ಮತ್ತು ಇತರ ಮೂಲಭೂತ ಸೌಕರ್ಯಗಳ ಕೊರತೆಯ ಆತಂಕದಿಂದ ಗೃಹಬಂಧನದ ಮನವಿಯನ್ನು ವಜಾಗೊಳಿಸಿದ ಬಾಂಬೆ ಹೈಕೋರ್ಟ್ ನ ಏಪ್ರಿಲ್ 26ರ ಆದೇಶವನ್ನು ಪ್ರಶ್ನಿಸಿ  70 ವರ್ಷ ವಯಸ್ಸಿನ ಕಾರ್ಯಕರ್ತ ಗೌತಮ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT