ಗೌತಮ್ ನವ್ಲಾಖಾ 
ದೇಶ

ಭೀಮಾ ಕೋರೆಗಾಂವ್ ಪ್ರಕರಣ: ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ಬಂಧಿತ ಕಾರ್ಯಕರ್ತ ನವ್ಲಾಖಾ ಚಿಕಿತ್ಸೆಗೆ ಸುಪ್ರೀಂ ಆದೇಶ

ಎಲ್ಗರ್‌ ಪರಿಷತ್‌-ಮಾವೋವಾದಿ ನಂಟು ಪ್ರಕರಣದಲ್ಲಿ ಜೈಲು ಪಾಲಾಗಿರುವ ಕಾರ್ಯಕರ್ತ ಗೌತಮ್‌ ನವ್ಲಾಖಾರನ್ನು ಚಿಕಿತ್ಸೆಗಾಗಿ ಮುಂಬೈನ ಜಸ್ಲೋಕ್‌ ಆಸ್ಪತ್ರೆಗೆ ತಕ್ಷಣವೇ ಸ್ಥಳಾಂತರಿಸುವಂತೆ ತಲೋಜಾ ಜೈಲು ಅಧೀಕ್ಷಕರಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ನವದೆಹಲಿ: ಎಲ್ಗರ್‌ ಪರಿಷತ್‌-ಮಾವೋವಾದಿ ನಂಟು ಪ್ರಕರಣದಲ್ಲಿ ಜೈಲು ಪಾಲಾಗಿರುವ ಕಾರ್ಯಕರ್ತ ಗೌತಮ್‌ ನವ್ಲಾಖಾರನ್ನು ಚಿಕಿತ್ಸೆಗಾಗಿ ಮುಂಬೈನ ಜಸ್ಲೋಕ್‌ ಆಸ್ಪತ್ರೆಗೆ ತಕ್ಷಣವೇ ಸ್ಥಳಾಂತರಿಸುವಂತೆ ತಲೋಜಾ ಜೈಲು ಅಧೀಕ್ಷಕರಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ವೈದ್ಯಕೀಯ ಚಿಕಿತ್ಸೆ ಪಡೆಯುವುದು ಖೈದಿಗಳ ಮೂಲಭೂತ ಹಕ್ಕು ಎಂದು ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರ ಪೀಠ ಹೇಳಿದ್ದು, ನವ್ಲಾಖಾ ಪತ್ನಿ ಸಭಾ ಹುಸೇನ್ ಮತ್ತು ಸಹೋದರಿ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಲು ಅನುಮತಿ ನೀಡಿದೆ.

'ಕಕ್ಷಿದಾರರ ಪರ ವಕೀಲ ಮನವಿಯನ್ನು ಆಲಿಸಿದ ನಂತರ, ವೈದ್ಯಕೀಯ ಚಿಕಿತ್ಸೆ ಪಡೆಯುವುದು ಮೂಲಭೂತ ಹಕ್ಕು ಎಂದು ನಾವು ಪೀಠ ಭಾವಿಸಿದ್ದು ಗೌತಮ್ ರನ್ನು ಸಂಪೂರ್ಣ ವೈದ್ಯಕೀಯ ತಪಾಸಣೆಗಾಗಿ ತಕ್ಷಣವೇ ಕರೆದೊಯ್ಯುವಂತೆ ನಾವು ನಿರ್ದೇಶಿಸಿದೆ. ಇದರಿಂದ ಜಸ್ಲೋಕ್ ಆಸ್ಪತ್ರೆಯಲ್ಲಿ ಅವರು ಅಗತ್ಯ ವೈದ್ಯಕೀಯ ತಪಾಸಣೆಗೆ ಒಳಗಾಗಲು ಮತ್ತು ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತದೆ.

ಮುಂಬೈ ಬಳಿಯ ತಲೋಜಾ ಜೈಲಿನಲ್ಲಿ ಸಾಕಷ್ಟು ವೈದ್ಯಕೀಯ ಮತ್ತು ಇತರ ಮೂಲಭೂತ ಸೌಕರ್ಯಗಳ ಕೊರತೆಯ ಆತಂಕದಿಂದ ಗೃಹಬಂಧನದ ಮನವಿಯನ್ನು ವಜಾಗೊಳಿಸಿದ ಬಾಂಬೆ ಹೈಕೋರ್ಟ್ ನ ಏಪ್ರಿಲ್ 26ರ ಆದೇಶವನ್ನು ಪ್ರಶ್ನಿಸಿ  70 ವರ್ಷ ವಯಸ್ಸಿನ ಕಾರ್ಯಕರ್ತ ಗೌತಮ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT