ಅಶೋಕ್ ಗೆಹ್ಲೋಟ್ 
ದೇಶ

ಎಐಸಿಸಿ ಅಧ್ಯಕ್ಷೀಯ ಚುನಾವಣೆ: ಪಕ್ಷದ ಹಿರಿಯ ಮುಖಂಡರೆಲ್ಲ ಖರ್ಗೆಗೆ ಬೆಂಬಲ- ಗೆಹ್ಲೋಟ್

ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಪಕ್ಷದ ಹಿರಿಯ ಮುಖಂಡರೆಲ್ಲ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಬಲಿಸಲು ನಿರ್ಧರಿಸಿರುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. 

ನವದೆಹಲಿ: ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಪಕ್ಷದ ಹಿರಿಯ ಮುಖಂಡರೆಲ್ಲ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಬಲಿಸಲು ನಿರ್ಧರಿಸಿರುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.  ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ಸ್ಪರ್ಧಿಸುತ್ತಿಲ್ಲ ಎಂದು ನಿನ್ನೆಯಷ್ಟೇ ಘೋಷಿಸಿದ ಗೆಹ್ಲೋಟ್, ಹಿರಿಯ ಮುಖಂಡರ ಸಭೆ ನಂತರ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೆಹ್ಲೋಟ್, ಎಲ್ಲಾ ಹಿರಿಯ ಮುಖಂಡರು ಖರ್ಗೆ ಅವರನ್ನು ಬೆಂಬಲಿಸಲು ನಿರ್ಧರಿಸಿರುವುದಾಗಿ ತಿಳಿಸಿದರು. ಶಶಿ ತರೂರು ಅವರು ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧವಾಗಿ ಸ್ಪರ್ಧಿಸಲಿದ್ದಾರೆ. 

ರಾಜಸ್ಥಾನ ಮುಖ್ಯಮಂತ್ರಿ ಹುದ್ದೆ ತೊರೆಯಲು ನಿಮ್ಮನ್ನು ವರಿಷ್ಠರು ಕೇಳಿದ್ರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಗೆಹ್ಲೋಟ್, ಕಳೆದ ಐದು ವರ್ಷಗಳಿಂದ ಗಾಂಧಿ ಕುಟುಂಬದ ಆಶೀರ್ವಾದದಿಂದ ಹಲವಾರು ಹುದ್ದೆ ನಿರ್ವಹಿಸಿದ್ದೇನೆ. ಇದು ಹುದ್ದೆಯ ವಿಚಾರವಲ್ಲ, ಆದರೆ, ಪಕ್ಷವನ್ನು ಹೇಗೆ ಸಂಘಟಿಸುವರು ಎಂಬುದಕ್ಕೆ ಸಂಬಂಧಿಸಿದ ವಿಚಾರವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಚುನಾವಣೆ ನಂತರ ಪಕ್ಷ ಪುನರ್ ಸಂಘಟಿಸುವ ನಿಟ್ಟಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಬಲಿಸುವಂತೆ ಗೆಹ್ಲೋಟ್ ಮನವಿ ಮಾಡಿದರು.  ಖರ್ಗೆ ಅವರು ಅನುಭವಿ ರಾಜಕಾರಣಿಯಾಗಿದ್ದು, 10-12 ಬಾರಿ ಚುನಾವಣೆಯಲ್ಲಿ ಗೆದಿದ್ದಾರೆ. ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಅನುಭವ ಹೊಂದಿದ್ದಾರೆ. ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಅವರನ್ನು ಬೆಂಬಲಿಸುವುದಾಗಿ ಗೆಹ್ಲೋಟ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT