ದಿಗ್ವಿಜಯ್ ಸಿಂಗ್ 
ದೇಶ

'ಖರ್ಗೆ ನನಗಿಂತ ಹಿರಿಯರು, ಅವರ ವಿರುದ್ಧ ಸ್ಪರ್ಧಿಸುವುದನ್ನೂ ನಾನು ಯೋಚಿಸಲಾರೆ': ದಿಗ್ವಿಜಯ್ ಸಿಂಗ್

ಮಲ್ಲಿಕಾರ್ಜುನ ಖರ್ಗೆ ನನಗಿಂತ ಹಿರಿಯರಾಗಿದ್ದು, ಅವರ ವಿರುದ್ಧ ಸ್ಪರ್ಧಿಸುವುದನ್ನು ನಾನು ಕಲ್ಪನೆ ಕೂಡ ಮಾಡಲಾರೆ.. ಹೀಗಾಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ನವದೆಹಲಿ: ಮಲ್ಲಿಕಾರ್ಜುನ ಖರ್ಗೆ ನನಗಿಂತ ಹಿರಿಯರಾಗಿದ್ದು, ಅವರ ವಿರುದ್ಧ ಸ್ಪರ್ಧಿಸುವುದನ್ನು ನಾನು ಕಲ್ಪನೆ ಕೂಡ ಮಾಡಲಾರೆ.. ಹೀಗಾಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಕಣ ರಂಗೇರಿದ್ದು, ಮಹತ್ವದ ಬೆಳವಣಿಗೆಯಲ್ಲಿ ನಿನ್ನೆಯಷ್ಟೇ ನಾಮಪತ್ರ ಸಂಗ್ರಹಿಸಿದ್ದ ಪಕ್ಷದ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ದಿಗ್ವಿಜಯ ಸಿಂಗ್ ಅವರು ಇಂದು ಬೆಳಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ನಂತರ ಸ್ಪರ್ಧೆಯಿಂದ ಹೊರಗುಳಿದಿದ್ದಾರೆ. ನಿನ್ನೆ ತಡರಾತ್ರಿ ನಡೆದ ಸಭೆಯ ನಂತರ, ಕಾಂಗ್ರೆಸ್ ಹಿರಿಯ ನಾಯಕ ಕೆಸಿ ವೇಣುಗೋಪಾಲ್ ಅವರು ಖರ್ಗೆ ಅವರನ್ನು ಸ್ಪರ್ಧಿಸಲು ನಾಯಕತ್ವ ಬಯಸುತ್ತದೆ ಎಂದು ತಿಳಿಸಿದ ಹಿನ್ನಲೆಯಲ್ಲಿ ದಿಗ್ವಿಜಯ್ ಸಿಂಗ್ ಸ್ಪರ್ಧೆಯಿಂದ ಹಿಂದೆ ಸರಿದ್ದಾರೆ ಎನ್ನಲಾಗಿದೆ.

ಈ ಕುರಿತು ಎದ್ದಿರುವ ಪ್ರಶ್ನೆಗಳಿಗೆ ಸ್ವತಃ ದಿಗ್ವಿಜಯ್ ಸಿಂಗ್ ಅವರು ಸುದ್ದಿಗಾರರಿಗೆ ಉತ್ತರಿಸಿದ್ದು, 'ಖರ್ಗೆ ಅವರಂತಹ ಹಿರಿಯ ನಾಯಕರ ವಿರುದ್ಧ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಯೋಚಿಸಲು ಕೂಡ ನನಗೆ ಸಾಧ್ಯವಿಲ್ಲ ಎಂದು ಹೇಳಿದರು.

'ಮಲ್ಲಿಕಾರ್ಜುನ ಖರ್ಗೆ ನನ್ನ ನಾಯಕರು ಮತ್ತು ನನ್ನ ಹಿರಿಯರು, ನಿನ್ನೆ ಅವರ ನಿವಾಸಕ್ಕೆ ಹೋಗಿ ಅವರು ಸ್ಪರ್ಧಿಸುತ್ತೀರಾ ಎಂದು ಕೇಳಿದ್ದೆ, ಅವರು ಸ್ಪರ್ಧಿಸಿದರೆ ನಾನು ಅರ್ಜಿಯನ್ನು ಭರ್ತಿ ಮಾಡುವುದಿಲ್ಲ ಎಂದು ಹೇಳಿದ್ದೆ. ಈ ಹಿಂದೆ ಖರ್ಗೆ ಅವರು ಸ್ಪರ್ಧಿಸುವ ಉದ್ದೇಶವಿಲ್ಲ ಎಂದು ನನಗೆ ಮಾಧ್ಯಮಗಳ ಮೂಲಕ ತಿಳಿದುಬಂದಿತ್ತು. ಹೀಗಾಗಿ ನಾನು ಸ್ಪರ್ಧೆಗೆ ಮುಂದಾದೆ. ಈಗ ಅವರು ಸ್ಪರ್ಧೆಗೆ ನಾನೇ ಒತ್ತಾಯಿಸುತ್ತಿದ್ದೇನೆ. ನಾನು ಇಂದು ಬೆಳಿಗ್ಗೆ ಅವರನ್ನು ಭೇಟಿಯಾಗಲು ಹೋಗಿದ್ದೆ, ಅವರು ನಾಮಪತ್ರ ಸಲ್ಲಿಸುವ ವೇಳೆ ನಾನು ಕೂಡ ಅವರೊಂದಿಗೆ ಹೋಗುತ್ತೇನೆ ಎಂದು ಸಿಂಗ್ ಹೇಳಿದರು.

ಖರ್ಗೆ ಅವರು ಪಕ್ಷದ ಹಿರಿಯ ಮತ್ತು ಗೌರವಾನ್ವಿತ ನಾಯಕ ಮತ್ತು ಅವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಾನು ಯೋಚಿಸುವುದಿಲ್ಲ. ಖರ್ಗೆ ಅವರು ನನಗೆ ಮೊದಲೇ ಹೇಳಿದ್ದರೆ, ನಾನು ನಾಮಪತ್ರವನ್ನು ಸಂಗ್ರಹಿಸಲು ಹೋಗುತ್ತಿರಲಿಲ್ಲ. ಈಗ ಅವರು ತಮ್ಮ ನಾಮಪತ್ರವನ್ನು ಸಲ್ಲಿಸಲು ಉದ್ದೇಶಿಸಿದ್ದಾರೆ, ನಾನು ಅವರ ಪ್ರಸ್ತಾಪಕನಾಗುತ್ತೇನೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಇದೇ ವೇಳೆ ನೆಹರು-ಗಾಂಧಿ ಕುಟುಂಬಕ್ಕೆ ತಮ್ಮ ಬದ್ಧತೆಯಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ ಸಿಂಗ್ ಅವರು, "ನಾನು ನನ್ನ ಜೀವನದುದ್ದಕ್ಕೂ ಕಾಂಗ್ರೆಸ್‌ಗಾಗಿ ಕೆಲಸ ಮಾಡಿದ್ದೇನೆ ಮತ್ತು ಅದನ್ನು ಮುಂದುವರಿಸುತ್ತೇನೆ. ನಾನು ಮೂರು ವಿಷಯಗಳಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಮೊದಲನೆಯದು, ದಲಿತ, ಬುಡಕಟ್ಟು ಮತ್ತು ಬಡವರ ವಿಚಾರಕ್ಕೆ, ಎರಡನೆಯದು, ಕೋಮು ಶಾಂತಿ ಕದಡುವಲ್ಲಿ ತೊಡಗಿರುವವರೊಂದಿಗೆ ನಾನು ರಾಜಿ ಮಾಡುವುದಿಲ್ಲ. ಮೂರನೆಯದಾಗಿ ನೆಹರೂ-ಗಾಂಧಿ ಕುಟುಂಬಕ್ಕೆ ನನ್ನ ಬದ್ಧತೆಯ ಮೇಲೆ ರಾಜಿ ಮಾಡಿಕೊಳ್ಳುವುದಿಲ್ಲ," ಎಂದು ಅವರು ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT