ಅತ್ಯಾಚಾರ (ಸಂಗ್ರಹ ಚಿತ್ರ) 
ದೇಶ

ಬಿಹಾರ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ 50 ಸಾವಿರಕ್ಕೆ ಮಾರಾಟ; ಮೂವರ ಬಂಧನ

ಬಿಹಾರದ ಮಧುಬನಿ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬಳಿಕ ಬಾಲಕಿಯನ್ನು ಮಾರಾಟ ಮಾಡಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಪಾಟ್ನಾ: ಬಿಹಾರದ ಮಧುಬನಿ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬಳಿಕ ಬಾಲಕಿಯನ್ನು ಮಾರಾಟ ಮಾಡಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಪೊಲೀಸರ ಪ್ರಕಾರ, ಮಹಿಳಾ ಪಿಂಪ್‌ಗೆ 50,000 ರೂ.ಗೆ ಬಾಲಕಿಯನ್ನು ಮಾರಾಟ ಮಾಡುವ ಮೊದಲು ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಗುರುವಾರ ರಾತ್ರಿ ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲಿ ತಂಡವೊಂದು ಮಹಿಳೆಯ ವಶದಲ್ಲಿದ್ದ ಬಾಲಕಿಯನ್ನು ರಕ್ಷಿಸಿ ಪ್ರಕರಣವನ್ನು ಭೇದಿಸಿದ ಘಟನೆ ಬೆಳಕಿಗೆ ಬಂದಿದೆ.

ಬಂಧಿತರನ್ನು ಸೋನಿ ದೇವಿ, ಜೈನಗರದ ಅಶೋಕ್ ಮಾರುಕಟ್ಟೆಯ ರಾತ್ರಿ ಕಾವಲುಗಾರ ಅರ್ಜುನ್ ಯಾದವ್ ಮತ್ತು ಎಲೆಕ್ಟ್ರಿಷಿಯನ್ ಸಜನ್ ಕುಮಾರ್ ಎಂದು ಗುರುತಿಸಲಾಗಿದೆ.

ಇನ್ನು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಜೈನಗರ ಪೊಲೀಸ್ ಠಾಣೆಯ ಪೊಲೀಸ್ ಚಾಲಕ ಆಚಾರ್ಯ ಮತ್ತು ಚೋಕಿದಾರ್ ರಾಮ್‌ಜೀವನ್ ಪಾಸ್ವಾನ್ ತಲೆಮರೆಸಿಕೊಂಡಿದ್ದಾರೆ.

ಸಂತ್ರಸ್ತೆ ಒಂದು ತಿಂಗಳ ಹಿಂದೆ ತನ್ನ ಸ್ವಂತ ಪಟ್ಟಣವಾದ ಮೌವಿನಿಂದ ದಾರಿ ತಪ್ಪಿ ಮಧುಬನಿ ಜಿಲ್ಲೆಯ ಜೈನಗರ ಪಟ್ಟಣಕ್ಕೆ ಬಂದಿದ್ದಳು. ಅಶೋಕ್ ಮಾರ್ಕೆಟ್‌ನಲ್ಲಿ ತಿರುಗಾಡುತ್ತಿದ್ದಾಗ ಆಕೆ ಅರ್ಜುನ್ ಯಾದವ್‌ನ ಸಹಾಯ ಯಾಚಿಸಿದ್ದಾಳೆ. ಈ ವೇಳೆ ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ತನ್ನ ಇತರ ಮೂವರು ಸ್ನೇಹಿತರನ್ನು ಕರೆದು ಸರದಿಯಲ್ಲಿ ಅವಳ ಮೇಲೆ ಅತ್ಯಾಚಾರವೆಸಗಿದರು ಮತ್ತು ಅವಳನ್ನು ಕೋಣೆಯಲ್ಲಿ ಕೂಡಿ ಹಾಕಿದ್ದರು. 

ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ ಮತ್ತು ಇದಕ್ಕಾಗಿ ಇತರರನ್ನು ಕರೆದಿದ್ದಾರೆ.

ಸಂತ್ರಸ್ತೆ ಮನೆಯವರು ಬಾಲಕಿ ನಾಪತ್ತೆಯಾಗಿರುವುದಾಗಿ ಮೌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಾಹಿತಿಯ ಆಧಾರದ ಮೇಲೆ, ಮೌ ಪೊಲೀಸರ ತಂಡ ಮಧುಬನಿಯ ಜೈನಗರ ಪಟ್ಟಣಕ್ಕೆ ಆಗಮಿಸಿ ಸೋನಿ ದೇವಿ ಮನೆಯ ಮೇಲೆ ದಾಳಿ ನಡೆಸಿ, ಬಾಲಕಿಯನ್ನು ರಕ್ಷಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT