ಮಾಯಾವತಿ 
ದೇಶ

ಪಿಎಫ್‌ಐ ನಿಷೇಧ ಕೇಂದ್ರದ 'ರಾಜಕೀಯ ಸ್ವಾರ್ಥ' ಎಂದ ಮಾಯಾವತಿ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಮತ್ತು ಅದರ ಅಂಗಸಂಸ್ಥೆಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ)ಮುಖ್ಯಸ್ಥೆ ಮಾಯಾವತಿ ಅವರು, ಮುಂಬರುವ...

ಲಖನೌ (ಉತ್ತರ ಪ್ರದೇಶ): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಮತ್ತು ಅದರ ಅಂಗಸಂಸ್ಥೆಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ)ಮುಖ್ಯಸ್ಥೆ ಮಾಯಾವತಿ ಅವರು, ಮುಂಬರುವ ಹಲವಾರು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ. ಇದು ಬಿಜೆಪಿಯ ರಾಜಕೀಯ ಸ್ವಾರ್ಥ ಎಂದು ಶುಕ್ರವಾರ ಆರೋಪಿಸಿದ್ದಾರೆ.

"ಪಿಎಫ್‌ಐ ಮತ್ತು ಅದರ ಎಂಟು ಅಂಗಸಂಸ್ಥೆಗಳನ್ನು ದೇಶಾದ್ಯಂತ ನಿಷೇಧಿಸಿರುವುದು ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಇದು ಇತರರನ್ನು ಸಮಾಧಾನಪಡಿಸುವ ಕ್ರಮ. ಆದರೆ ಜನರಲ್ಲಿ ತೃಪ್ತಿಗಿಂತ ಹೆಚ್ಚು ಚಡಪಡಿಕೆ ಇದೆ" ಎಂದು ಮಾಯಾವತಿ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

ಈ ಕಾರಣಕ್ಕಾಗಿಯೇ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ಈ ಕ್ರಮವನ್ನು ದುರುದ್ದೇಶದ ಕ್ರಮ ಎಂದು ಆಕ್ರೋಶ ವ್ಯಕ್ತಪಡಿಸುತ್ತಿವೆ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಅನ್ನು ನಿಷೇಧಿಸಬೇಕು ಎಂದು ಬಹಿರಂಗವಾಗಿ ಒತ್ತಾಯಿಸುತ್ತಿವೆ. ಪಿಎಫ್‌ಐಯಿಂದ ದೇಶದ ಆಂತರಿಕ ಭದ್ರತೆಗೆ ಧಕ್ಕೆಯಾಗುವುದರಾದರೆ ಅಂತಹ ಇತರ ಸಂಘಟನೆಗಳನ್ನು ಏಕೆ ನಿಷೇಧಿಸಬಾರದು? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT