ಕಾಂಗ್ರೆಸ್ ನಾಯಕ ಶಶಿ ತರೂರ್ 
ದೇಶ

ಯಥಾಸ್ಥಿತಿ ಬೇಕು ಅಂದರೆ ಖರ್ಗೆಗೆ ಮತ ಹಾಕಿ, ಬದಲಾವಣೆ ಬೇಕಾದಲ್ಲಿ ನನಗೆ ಮತ ನೀಡಿ: ಕಾಂಗ್ರೆಸ್ ಅಧ್ಯಕ್ಷ ಹುದ್ದೆಯ ಅಭ್ಯರ್ಥಿ ಶಶಿ ತರೂರ್

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ, ಜಾರ್ಖಂಡ್ ಕಾಂಗ್ರೆಸ್ ನಾಯಕ ಕೆಎನ್ ತ್ರಿಪಾಠಿ ಹಾಗೂ ಶಶಿ ತರೂರ್ ನಾಮಪತ್ರ ಸಲ್ಲಿಸಿದ್ದು, ಜಿ-23 ನಾಯಕರೂ ಸೇರಿ ಗಾಂಧಿ ಕುಟುಂಬದವರೂ ಬೆಂಬಲ ನೀಡಿದ್ದಾರೆ. 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ, ಜಾರ್ಖಂಡ್ ಕಾಂಗ್ರೆಸ್ ನಾಯಕ ಕೆಎನ್ ತ್ರಿಪಾಠಿ ಹಾಗೂ ಶಶಿ ತರೂರ್ ನಾಮಪತ್ರ ಸಲ್ಲಿಸಿದ್ದು, ಜಿ-23 ನಾಯಕರೂ ಸೇರಿ ಗಾಂಧಿ ಕುಟುಂಬದವರೂ ಖರ್ಗೆಗೆ ಬೆಂಬಲ ನೀಡಿದ್ದಾರೆ. 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ಶಶಿ ತರೂರ್, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗಾಂಧಿ ಕುಟುಂಬದವರು ಬೆಂಬಲ ನೀಡಿರುವುದು ಅಚ್ಚರಿಯೇನಲ್ಲ ಎಂದು ಹೇಳಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಶಶಿ ತರೂರ್ ತಮ್ಮ ಪ್ರತಿಸ್ಪರ್ಧಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ನ ಭೀಷ್ಮ ಪಿತಾಮಹ ಎಂದು ಹೇಳಿದ್ದಾರೆ. 

ಇದು ಸೌಹಾರ್ದಯುತವಾದ ಸ್ಪರ್ಧೆಯಾಗಿರಲಿದೆ ಎಂದು ಶಶಿ ತರೂರ್ ಹೇಳಿದ್ದು. ಖರ್ಗೆಯನ್ನು ತರೂರ್ "ಮುಂದುವರಿಕೆಯ ಅಭ್ಯರ್ಥಿ" ಎಂದೂ ಹೇಳಿದ್ದಾರೆ.

ಸ್ಥಾಪಿತ ನಾಯಕತ್ವದ ಯಥಾಸ್ಥಿತಿಯನ್ನು ಮುಂದುವರೆಸಲು ಒಟ್ಟುಗೂಡುತ್ತಿರುವುದರಲ್ಲಿ ಅಚ್ಚರಿಯೇನು ಇಲ್ಲ. ಯಥಾಸ್ಥಿತಿ ಬೇಕೆಂದರೆ ನೀವು ಖರ್ಗೆಗೆ ಮತಹಾಕಬೇಕು, 21 ನೇ ಶತಮಾನದ ಉಳಿದ ಭಾಗದಲ್ಲಿ ನಿಮಗೆ ಬದಲಾವಣೆ, ಪ್ರಗತಿ ಬೇಕು ಎನ್ನುವುದಾದರೆ, ನಾನು ಆ ಬದಲಾವಣೆಗಾಗಿ ನಿಲ್ಲುತ್ತೇನೆ ಎಂದು ಸಂಸದರೂ ಆಗಿರುವ ಶಶಿ ತರೂರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT