ಭಾರತೀಯ ಸೇನೆ 
ದೇಶ

ಬಾರಾಮುಲ್ಲಾ ಎನ್‌ಕೌಂಟರ್‌: ಇಬ್ಬರು ಜೈಶ್ ಉಗ್ರರ ಹತ್ಯೆ!

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇನೆಯ ಅಗ್ನಿವೀರ್ ನೇಮಕಾತಿ ರ್ಯಾಲಿಯನ್ನು ಗುರಿಯಾಗಿಸಿ ದಾಳಿಗೆ ಮುಂದಾಗಿದ್ದ ಇಬ್ಬರು ಸ್ಥಳೀಯ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇನೆಯ ಅಗ್ನಿವೀರ್ ನೇಮಕಾತಿ ರ್ಯಾಲಿಯನ್ನು ಗುರಿಯಾಗಿಸಿ ದಾಳಿಗೆ ಮುಂದಾಗಿದ್ದ ಇಬ್ಬರು ಸ್ಥಳೀಯ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಕಾಶ್ಮೀರ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಾರಾಮುಲ್ಲಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಯೀಸ್ ಭಟ್ ಅವರು ಶುಕ್ರವಾರ ಮುಂಜಾನೆ ಪಟ್ಟಾನ್‌ನ ಯಡಿಪೋರಾ ಪ್ರದೇಶದಲ್ಲಿ ಉಗ್ರರ ಉಪಸ್ಥಿತಿ ಬಗ್ಗೆ ಗುಪ್ತಚರ ಸಂಸ್ಥೆಗಳಿಂದ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.

ಸೇನೆಯ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಈ ವೇಳೆ ಸೇನೆಯಿಂದ ಕಾರ್ಯಾಚರಣೆ ಶುರುವಾಯಿ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಸೇನೆಯ ಅಗ್ನಿವೀರ್(ನೇಮಕಾತಿ) ರ್ಯಾಲಿಯನ್ನು ಗುರಿಯಾಗಿಸಲು ಭಯೋತ್ಪಾದಕರು ಇಲ್ಲಿಗೆ ಬಂಧಿದ್ದರು. ಸೇನೆಗೆ ಸೇರಲು ಪ್ರಯತ್ನಿಸುತ್ತಿರುವ ಯುವಕರನ್ನು ತೊಂದರೆಕ್ಕೀಡು ಮಾಡುವುದು. ಈ ರ್ಯಾಲಿಯನ್ನು ವಿಫಲಗೊಳಿಸಲು ಅವರು ಯೋಜಿಸಿದ್ದರು. ಅದನ್ನು ನಾವು ವಿಫಲಗೊಳಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದರು.

ಭದ್ರತಾ ಪಡೆಗಳು ಎನ್‌ಕೌಂಟರ್ ಸ್ಥಳದಿಂದ ಎಕೆಎಸ್ -74 ಯು ರೈಫಲ್ ಮತ್ತು ಮೂರು ಮ್ಯಾಗಜೀನ್‌ಗಳು, ಪಿಸ್ತೂಲ್ ಮ್ಯಾಗಜೀನ್ ಮತ್ತು ಎರಡು ಬುಲೆಟ್‌ಗಳನ್ನು ವಶಪಡಿಸಿಕೊಂಡಿವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT