ಕಮಲ್ ನಾಥ್ 
ದೇಶ

ಇಂದೋರ್ ದೇವಾಲಯದ ಮೆಟ್ಟಿಲು ಬಾವಿ ದುರಂತಕ್ಕೆ ಅಕ್ರಮ ನಿರ್ಮಾಣ ಕಾರಣ: ಕಮಲ್ ನಾಥ್

36 ಜನರನ್ನು ಬಲಿ ಪಡೆದ ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ದುರಂತಕ್ಕೆ ಅಕ್ರಮ ನಿರ್ಮಾಣಗಳು ಕಾರಣ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರು ಶನಿವಾರ ಆರೋಪಿಸಿದ್ದಾರೆ.

ಇಂದೋರ್: 36 ಜನರನ್ನು ಬಲಿ ಪಡೆದ ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ದುರಂತಕ್ಕೆ ಅಕ್ರಮ ನಿರ್ಮಾಣಗಳು ಕಾರಣ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರು ಶನಿವಾರ ಆರೋಪಿಸಿದ್ದಾರೆ.

ಆಡಳಿತಾರೂಢ ಭಾರತೀಯ ಜನತಾ ಪಕ್ಷದ(ಬಿಜೆಪಿ) ಒತ್ತಡಕ್ಕೆ ಮಣಿದು ಸ್ಥಳೀಯ ಮಹಾನಗರ ಪಾಲಿಕೆ ಮೆಟ್ಟಿಲುಬಾವಿಯ ಮೇಲಿನ ಅನಧಿಕೃತ ನಿರ್ಮಾಣಗಳನ್ನು ಕೆಡವಲಿಲ್ಲ ಎಂದ ಕಮಲ್ ನಾಥ್ ಅವರು, ಮುಂದಿನ ಏಳು ದಿನಗಳಲ್ಲಿ ಅಕ್ರಮ ನಿರ್ಮಾಣಗಳನ್ನು ತೆರವು ಮಾಡದಿದ್ದರೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪಟೇಲ್ ನಗರದ ಬಾಳೇಶ್ವರ ಮಹಾದೇವ ಜುಲೇಲಾಲ್ ದೇವಸ್ಥಾನದಲ್ಲಿ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಕಮಲ್ ನಾಥ್, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಸಾರ್ವಜನಿಕ ಸ್ಥಳಗಳಲ್ಲಿ ಭದ್ರತಾ ಪರಿಶೋಧನೆ ಕಡ್ಡಾಯಗೊಳಿಸಲು ಕಾನೂನು ಜಾರಿಗೆ ತರಲಿದೆ ಎಂದು ಹೇಳಿದರು.

ಗುರುವಾರ ಮೆಟ್ಟಿಲುಬಾವಿಯ ಮೇಲೆ ನಿರ್ಮಿಸಲಾದ ದೇವಾಲಯದ ನೆಲ ಕುಸಿದು 21 ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಮೂವತ್ತಾರು ಜನ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

SCROLL FOR NEXT