ಕಮಲ್ ನಾಥ್ 
ದೇಶ

ಇಂದೋರ್ ದೇವಾಲಯದ ಮೆಟ್ಟಿಲು ಬಾವಿ ದುರಂತಕ್ಕೆ ಅಕ್ರಮ ನಿರ್ಮಾಣ ಕಾರಣ: ಕಮಲ್ ನಾಥ್

36 ಜನರನ್ನು ಬಲಿ ಪಡೆದ ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ದುರಂತಕ್ಕೆ ಅಕ್ರಮ ನಿರ್ಮಾಣಗಳು ಕಾರಣ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರು ಶನಿವಾರ ಆರೋಪಿಸಿದ್ದಾರೆ.

ಇಂದೋರ್: 36 ಜನರನ್ನು ಬಲಿ ಪಡೆದ ಇಂದೋರ್ ದೇವಸ್ಥಾನದ ಮೆಟ್ಟಿಲು ಬಾವಿ ದುರಂತಕ್ಕೆ ಅಕ್ರಮ ನಿರ್ಮಾಣಗಳು ಕಾರಣ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರು ಶನಿವಾರ ಆರೋಪಿಸಿದ್ದಾರೆ.

ಆಡಳಿತಾರೂಢ ಭಾರತೀಯ ಜನತಾ ಪಕ್ಷದ(ಬಿಜೆಪಿ) ಒತ್ತಡಕ್ಕೆ ಮಣಿದು ಸ್ಥಳೀಯ ಮಹಾನಗರ ಪಾಲಿಕೆ ಮೆಟ್ಟಿಲುಬಾವಿಯ ಮೇಲಿನ ಅನಧಿಕೃತ ನಿರ್ಮಾಣಗಳನ್ನು ಕೆಡವಲಿಲ್ಲ ಎಂದ ಕಮಲ್ ನಾಥ್ ಅವರು, ಮುಂದಿನ ಏಳು ದಿನಗಳಲ್ಲಿ ಅಕ್ರಮ ನಿರ್ಮಾಣಗಳನ್ನು ತೆರವು ಮಾಡದಿದ್ದರೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪಟೇಲ್ ನಗರದ ಬಾಳೇಶ್ವರ ಮಹಾದೇವ ಜುಲೇಲಾಲ್ ದೇವಸ್ಥಾನದಲ್ಲಿ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಕಮಲ್ ನಾಥ್, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಸಾರ್ವಜನಿಕ ಸ್ಥಳಗಳಲ್ಲಿ ಭದ್ರತಾ ಪರಿಶೋಧನೆ ಕಡ್ಡಾಯಗೊಳಿಸಲು ಕಾನೂನು ಜಾರಿಗೆ ತರಲಿದೆ ಎಂದು ಹೇಳಿದರು.

ಗುರುವಾರ ಮೆಟ್ಟಿಲುಬಾವಿಯ ಮೇಲೆ ನಿರ್ಮಿಸಲಾದ ದೇವಾಲಯದ ನೆಲ ಕುಸಿದು 21 ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಮೂವತ್ತಾರು ಜನ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT