ರಕ್ಷಣಾ ಪರಿಕರ ರಫ್ತು 
ದೇಶ

2022-23ನೇ ಸಾಲಿನಲ್ಲಿ 15,920 ಕೋಟಿ ರೂ. ರಕ್ಷಣಾ ಪರಿಕರ ರಫ್ತು; ಭಾರತ ಮಹತ್ತರ ಸಾಧನೆ: ರಾಜನಾಥ್ ಸಿಂಗ್

ರಕ್ಷಣಾ ಸಾಮಗ್ರಿ ರಫ್ತಿನಲ್ಲಿ ಭಾರತ ಮಹತ್ತರ ಸಾಧನೆ ಗೈದಿದ್ದು, 2022-23ನೇ ಸಾಲಿನಲ್ಲಿ 15,920 ಕೋಟಿ ರೂ ಮೌಲ್ಯದ ರಕ್ಷಣಾ ಪರಿಕರಗಳನ್ನು ವಿವಿಧ ದೇಶಗಳಿಗೆ ರಫ್ತು ಮಾಡಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದಾರೆ.

ನವದೆಹಲಿ: ರಕ್ಷಣಾ ಸಾಮಗ್ರಿ ರಫ್ತಿನಲ್ಲಿ ಭಾರತ ಮಹತ್ತರ ಸಾಧನೆ ಗೈದಿದ್ದು, 2022-23ನೇ ಸಾಲಿನಲ್ಲಿ 15,920 ಕೋಟಿ ರೂ ಮೌಲ್ಯದ ರಕ್ಷಣಾ ಪರಿಕರಗಳನ್ನು ವಿವಿಧ ದೇಶಗಳಿಗೆ ರಫ್ತು ಮಾಡಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದಾರೆ.

2022–23ನೇ ಹಣಕಾಸು ವರ್ಷದಲ್ಲಿ ಭಾರತವು 15,920 ರೂ ಕೋಟಿ ಮೌಲ್ಯದ ರಕ್ಷಣಾ ಪರಿಕರಗಳನ್ನು ರಫ್ತು ಮಾಡಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. 

‘2022–2023ನೇ ಹಣಕಾಸು ವರ್ಷದಲ್ಲಿ ಭಾರತದ ರಕ್ಷಣಾ ರಫ್ತು ಸಾರ್ವಕಾಲಿಕ ದಾಖಲೆಯಾದ 15,920 ಕೋಟಿ ರೂಗೆ ತಲುಪಿದೆ. ಇದು ದೇಶದ ಗಮನಾರ್ಹ ಸಾಧನೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಸ್ಫೂರ್ತಿದಾಯಕ ನಾಯಕತ್ವದಲ್ಲಿ ನಮ್ಮ ರಕ್ಷಣಾ ರಫ್ತು ಬೆಳೆಯುತ್ತಲೇ ಇರುತ್ತದೆ‘ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

2021-22 ರಲ್ಲಿ 12,814 ಕೋಟಿ ರೂ ಮೌಲ್ಯದ ರಕ್ಷಣಾ ಪರಿಕರಗಳು ರಫ್ತಾಗಿದ್ದರೆ, 2020–21ರಲ್ಲಿ ಇದರ ಪ್ರಮಾಣ  8,434 ಕೋಟಿ ಇತ್ತು. 2019–20 ರಲ್ಲಿ 9,115 ಕೋಟಿ ರೂ ಮೌಲ್ಯದಷ್ಟು ರಫ್ತಾಗಿದ್ದರೆ, 2018-19ರಲ್ಲಿ 10,745 ಕೋಟಿ ರೂ ಮೌಲ್ಯದಷ್ಟು ರಕ್ಷಣಾ ‍ಪರಿಕರಗಳನ್ನು ಭಾರತ ವಿದೇಶಗಳಿಗೆ ಮಾರಾಟ ಮಾಡಿತ್ತು. 2024–25ರ ವೇಳೆಗೆ ₹ 1,75,000 ಕೋಟಿಯ ರಕ್ಷಣಾ ಸಾಮಗ್ರಿಗಳ ಉತ್ಪಾದನೆ ಹಾಗೂ 35,000 ಕೋಟಿ ರೂನಷ್ಟು ರಫ್ತು ಮಾಡುವ ಗುರಿ ಹಾಕಿಕೊಳ್ಳಲಾಗಿದೆ.

2024-25ರ ವೇಳೆಗೆ 1,75,000 ಕೋಟಿ ರೂಪಾಯಿ ಮೌಲ್ಯದ ರಕ್ಷಣಾ ಯಂತ್ರಾಂಶ ತಯಾರಿಕೆ ಮತ್ತು ರಕ್ಷಣಾ ರಫ್ತುಗಳನ್ನು 35,000 ಕೋಟಿ ರೂಪಾಯಿಗೆ ತೆಗೆದುಕೊಳ್ಳುವ ಗುರಿಯನ್ನು ಸರ್ಕಾರ ಹೊಂದಿದೆ. ಕಳೆದ ಕೆಲವು ವರ್ಷಗಳಲ್ಲಿ, ದೇಶೀಯ ರಕ್ಷಣಾ ಉತ್ಪಾದನೆಯನ್ನು ಉತ್ತೇಜಿಸಲು ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT