ಇಂದೋರ್ ದೇವಸ್ಥಾನದಲ್ಲಿ ಅಕ್ರಮ ಕಟ್ಟಡವನ್ನು ಕೆಡವುತ್ತಿರುವ ಅಧಿಕಾರಿಗಳು. 
ದೇಶ

ಇಂದೋರ್ ದೇಗುಲ ದುರಂತ ಪ್ರಕರಣ: ಅಧಿಕಾರಿಗಳಿಂದ ದೇವಸ್ಥಾನದ ಅಕ್ರಮ ನಿರ್ಮಾಣ ತೆರವು

ಕೆಲ ದಿನಗಳ ಹಿಂದೆಯಷ್ಟೇ ಮೆಟ್ಟಿಲುಬಾವಿ ಕುಸಿದು 36 ಜನರ ಸಾವಿಗೆ ಕಾರಣವಾಗಿದ್ದ ಬಲೇಶ್ವರ್‌ ಮಹಾದೇವ್‌ ದೇವಸ್ಥಾನದ ಅಕ್ರಮ ನಿರ್ಮಾಣವನ್ನು ಇಂದೋರ್ ನಗರ ಪಾಲಿಕೆಯು ಸೋಮವಾರ ತೆರವು ಮಾಡಿದೆ.

ಇಂದೋರ್: ಕೆಲ ದಿನಗಳ ಹಿಂದೆಯಷ್ಟೇ ಮೆಟ್ಟಿಲುಬಾವಿ ಕುಸಿದು 36 ಜನರ ಸಾವಿಗೆ ಕಾರಣವಾಗಿದ್ದ ಬಲೇಶ್ವರ್‌ ಮಹಾದೇವ್‌ ದೇವಸ್ಥಾನದ ಅಕ್ರಮ ನಿರ್ಮಾಣವನ್ನು ಇಂದೋರ್ ನಗರ ಪಾಲಿಕೆಯು ಸೋಮವಾರ ತೆರವು ಮಾಡಿದೆ.

ಇಂದು ಬೆಳಗ್ಗೆಯಿಂದಲೇ ಅಕ್ರಮ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳು ಭಾರೀ ಸಂಖ್ಯೆಯಲ್ಲಿ ನೆರೆದಿರುವುದರಿಂದ ಯಾವುದೇ ಪ್ರತಿರೋಧ ವ್ಯಕ್ತವಾಗಿಲ್ಲ.

ಸಂಭಾವ್ಯ ಪ್ರತಿರೋಧವನ್ನು ತಡೆಯಲು ನಾಲ್ಕು ಪೊಲೀಸ್ ಠಾಣೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸ್ಥಳದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತರು, ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಇದ್ದಾರೆ.

ಏತನ್ಮಧ್ಯೆ, ಸ್ಥಳದಲ್ಲಿದ್ದ ದೇವಾಲಯದ ಅರ್ಚಕರೊಬ್ಬರು ಮಾತನಾಡಿ, ದೇವಾಲಯದಲ್ಲಿದ್ದ ಮೂರ್ತಿಗಳಿಗೆ ವಿಧಿ ವಿಧಾನಗಳ ಪ್ರಕಾರ ಪ್ರಾರ್ಥನೆ ಸಲ್ಲಿಸಲಾಗಿದ್ದು, ಅವುಗಳನ್ನು ಕಂಟಫೋಡ್ ದೇವಾಲಯಕ್ಕೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಈ ದೇವಸ್ಥಾನದ ಒಳಗಡೆ ಕುಸಿತವಾಗಿ 36 ಜನರು ಅಸುನೀಗಿದ್ದರು.  ಕುಸಿದ ದೇವಾಲಯದ ಪ್ರದೇಶವು ಅಕ್ರಮ ರಚನೆಯಾಗಿದೆ ಎಂದು ಅದನ್ನು ಮೆಟ್ಟಿಲುಬಾವಿಯ ಹೊದಿಕೆಯನ್ನು ನೆಲಸಮ ಮಾಡಲು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ ಕಳೆದ ವರ್ಷ ಸೂಚಿಸಿತ್ತು. ಆದರೆ, ದೇವಾಲಯದ ಟ್ರಸ್ಟ್ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ಎಚ್ಚರಿಸಿದ ನಂತರ ಮುನಿಸಿಪಾಲಿಟಿ ಅದರಿಂದ ಹಿಂದೆ ಸರಿದಿತ್ತು.

ರಾಮ ನವಮಿಯಂದು ಜನಸಂದಣಿಯ ಭಾರದಿಂದ ಮೆಟ್ಟಿಲುಬಾವಿಯ ಮೇಲ್ಛಾವಣಿ ಒಡೆದು ಹೋಗಿತ್ತು. ಘಟನೆ ನಡೆದಾಗ ದೇವಸ್ಥಾನದಲ್ಲಿ ಹೋಮ ಹವನ ನಡೆಯುತ್ತಿತ್ತು.

ದುರಂತದ ನಂತರ, ಭಾರತೀಯ ದಂಡ ಸಂಹಿತೆ ಸೆಕ್ಷನ್ 304 (ಅಪರಾಧ ನರಹತ್ಯೆ ಕೊಲೆಯಲ್ಲ) ಅಡಿಯಲ್ಲಿ ಬಲೇಶ್ವರ್‌ ಮಹಾದೇವ್‌ ಜುಲೇಲಾಲ್ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಸೇವಾರಾಮ್ ಗಲಾನಿ ಮತ್ತು ಕಾರ್ಯದರ್ಶಿ ಮುರಳಿ ಕುಮಾರ್ ಸಬ್ನಾನಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಜುನಿ ಇಂದೋರ್ ಪೊಲೀಸ್ ಠಾಣೆಯ ಉಸ್ತುವಾರಿ ನೀರಜ್ ಮೇದಾ ತಿಳಿಸಿದ್ದಾರೆ.

ಇಬ್ಬರು ಆರೋಪಿಗಳು ಮೆಟ್ಟಿಲುಬಾವಿಯ ಮೇಲೆ ಮೇಲ್ಛಾವಣಿಯನ್ನು ಹಾಕುವ ಮೂಲಕ ಅಸುರಕ್ಷಿತ ನಿರ್ಮಾಣ ಕಾರ್ಯವನ್ನು ಮಾಡಿದ ಆರೋಪವನ್ನು ಎದುರಿಸುತ್ತಿದ್ದಾರೆ, ಅಸುರಕ್ಷಿತ ನಿರ್ಮಾಣದಿಂದಾಗಿ 36 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ ದೇವಾಲಯದ ಸಂಕೀರ್ಣದಲ್ಲಿನ ಅಕ್ರಮ ನಿರ್ಮಾಣವನ್ನು ತೆಗೆದುಹಾಕಲು ಟ್ರಸ್ಟ್‌ಗೆ ಆದೇಶ ನೀಡಲಾಗಿತ್ತು, ಆದರೆ ಟ್ರಸ್ಟ್ ಆದೇಶವನ್ನು ಪಾಲಿಸಿರಲಿಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT