ಪ್ರಧಾನಿ ಮೋದಿ 
ದೇಶ

ಸಿಬಿಐ ‘ಸತ್ಯ, ನ್ಯಾಯದ ಬ್ರಾಂಡ್’ ಆಗಿ ಹೊರಹೊಮ್ಮಿದೆ: ಕೇಂದ್ರ ತನಿಖಾ ಸಂಸ್ಥೆಯನ್ನು ಹಾಡಿಹೊಗಳಿದ ಪ್ರಧಾನಿ ಮೋದಿ

ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಯನ್ನು ಹಾಡಿಹೊಗಳಿದ ಪ್ರಧಾನಿ ನರೇಂದ್ರ ಮೋದಿ, ಸಿಬಿಐ ಸತ್ಯ, ನ್ಯಾಯದ ಬ್ರಾಂಡ್ ಆಗಿ ಹೊರಹೊಮ್ಮಿದೆ ಎಂದು ಸೋಮವಾರ ಹೇಳಿದ್ದಾರೆ.

ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಯನ್ನು ಹಾಡಿಹೊಗಳಿದ ಪ್ರಧಾನಿ ನರೇಂದ್ರ ಮೋದಿ, ಸಿಬಿಐ ಸತ್ಯ, ನ್ಯಾಯದ ಬ್ರಾಂಡ್ ಆಗಿ ಹೊರಹೊಮ್ಮಿದೆ ಎಂದು ಸೋಮವಾರ ಹೇಳಿದ್ದಾರೆ.

ಇಂದು ದೆಹಲಿ ವಿಜ್ಞಾನ ಭವನದಲ್ಲಿ ನಡೆದ ಸಿಬಿಐ ವಜ್ರ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸಿಬಿಐ ಸಾಮಾನ್ಯ ನಾಗರಿಕರಿಗೆ ಹೊಸ ಭರವಸೆ ಮತ್ತು ಶಕ್ತಿಯನ್ನು ನೀಡಿದೆ ಎಂದರು.

ಸಿಬಿಐ ಸತ್ಯ ಮತ್ತು ನ್ಯಾಯದ ಬ್ರಾಂಡ್‌ ಆಗಿ ಹೊರಹೊಮ್ಮಿರುವುದರಿಂದ ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರೀಯ ತನಿಖಾ ಸಂಸ್ಥೆಯ ವ್ಯಾಪ್ತಿ ಹಲವು ಪಟ್ಟು ಹೆಚ್ಚಿದೆ. ಆದರೆ ದೇಶವನ್ನು ಭ್ರಷ್ಟಾಚಾರ ಮುಕ್ತ ಮಾಡುವುದು ಸಿಬಿಐನ ಮುಖ್ಯ ಜವಾಬ್ದಾರಿಯಾಗಿದೆ ಎಂದರು.

ದೇಶದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಲು ಯಾವುದೇ ರೀತಿಯ ರಾಜಕೀಯ ಇಚ್ಛಾಶಕ್ತಿಯ ಕೊರತೆ ಇಲ್ಲ. ಭ್ರಷ್ಟಾಚಾರದ ವಿರುದ್ಧ ಕಾರ್ಯಾಚರಣೆ ನಡೆಸುವ ವೇಳೆ ತನಿಖಾ ಸಂಸ್ಥೆಗಳಿಗೆ ಯಾವುದೇ ಹಿಂಜರಿಕೆ ಬೇಡ ಎಂದರು.

ಭ್ರಷ್ಟಾಚಾರ ಒಂದು ಸಾಮಾನ್ಯ ಅಪರಾಧ ಅಲ್ಲ. ಭ್ರಷ್ಟಾಚಾರವು ಬಡವರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಭ್ರಷ್ಟಾಚಾರದಿಂದ ಹಲವು ಅಕ್ರಮಗಳು, ಅಪರಾಧಗಳು ಹುಟ್ಟಿಕೊಳ್ಳುತ್ತವೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ, ನ್ಯಾಯ ದಾನ ವ್ಯವಸ್ಥೆಗೆ ಭ್ರಷ್ಟಾಚಾರವು ಅತಿ ದೊಡ್ಡ ಅಡ್ಡಿ ಎಂದು ಪ್ರಧಾನಿ ಮೋದಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT