ರಾಹುಲ್ ಗಾಂಧಿ 
ದೇಶ

ಮಾನಹಾನಿ ಪ್ರಕರಣ: ಮೇಲ್ಮನವಿ ಸಲ್ಲಿಸಿದ ರಾಹುಲ್ ಗಾಂಧಿಗೆ ಜಾಮೀನು, ವಿಚಾರಣೆ ಏಪ್ರಿಲ್ 13ಕ್ಕೆ ಮುಂದೂಡಿಕೆ

2019ರ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದ್ದು, ಮುಂದಿನ ವಿಚಾರಣೆಯನ್ನು ಏಪ್ರಿಲ್ 13ಕ್ಕೆ ನಿಗದಿಪಡಿಸಿದೆ.

ಸೂರತ್: 2019ರ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದ್ದು, ಮುಂದಿನ ವಿಚಾರಣೆಯನ್ನು ಏಪ್ರಿಲ್ 13ಕ್ಕೆ ನಿಗದಿಪಡಿಸಿದೆ.

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ನೀಡಿರುವ ಶಿಕ್ಷೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಇಂದು ಮೇಲ್ಮನವಿ ಸಲ್ಲಿಸಿದರು. ಮೇಲ್ಮನವಿ ಸ್ವೀಕರಿಸಿದ ಕೋರ್ಟ್, ಆರೋಪಿ ಕಾಂಗ್ರೆಸ್ ನಾಯಕನಿಗೆ ಜಾಮೀನು ಮಂಜೂರು ಮಾಡಿ, ವಿಚಾರಣೆಯನ್ನು ಏಪ್ರಿಲ್ 13ಕ್ಕೆ ಮುಂದೂಡಿದೆ.

2019ರ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು.

ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿ ಎರಡು ವರ್ಷ ಜೈಲು ಶಿಕ್ಷೆ  ವಿಧಿಸಿದೆ. ಈ ಶಿಕ್ಷೆಯನ್ನು ಆಧರಿಸಿ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT