ಧಾರ್ಮಿಕ ವಿಧಿವಿಧಾನಗಳಲ್ಲಿ ತೊಡಗಿದ್ದ ಅರ್ಚಕರು 
ದೇಶ

ತಮಿಳುನಾಡು: ಧಾರ್ಮಿಕ ವಿಧಿವಿಧಾನಗಳಲ್ಲಿ ತೊಡಗಿದ್ದ ಐವರು ಅರ್ಚಕರು ನೀರಿನಲ್ಲಿ ಮುಳುಗಿ ಸಾವು

ಧಾರ್ಮಿಕ ವಿಧಾನಗಳಲ್ಲಿ ತೊಡಗಿದ್ದ 5 ಅರ್ಚಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮೂವರಸನ್ ಪೇಟೆಯಲ್ಲಿ ನಡೆದಿದೆ. 

ಮೂವರಸನ್: ಧಾರ್ಮಿಕ ವಿಧಾನಗಳಲ್ಲಿ ತೊಡಗಿದ್ದ 5 ಅರ್ಚಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮೂವರಸನ್ ಪೇಟೆಯಲ್ಲಿ ನಡೆದಿದೆ. 

25 ಮಂದಿ ಅರ್ಚಕರ ಪೈಕಿ 5 ಮಂದಿ ಸಾವನ್ನಪ್ಪಿದ್ದಾರೆ. ಇತ್ತೀಚಿನ ಮಾಹಿತಿಯ ಪ್ರಕಾರ 5 ಮೃತರನ್ನು ಸೂರ್ಯ (24) ರಾಘವನ್ (22) ಯೋಗೇಶ್ವರನ್ (23) ವನೀಶ್ (20) ರಾಘವನ್ (18) ಎಂದು ಗುರುತಿಸಲಾಗಿದೆ. ಈ ಅರ್ಚಕರ ತಂಡ ಮೂವರಸನ್ ಪೇಟ್ ನಲ್ಲಿನ ಧರ್ಮಲಿಂಗೇಶ್ವರ ದೇವಾಲಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

 
ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಈ 25 ಮಂದಿ ಅರ್ಚಕರು ಕಲ್ಯಾಣಿ/ ನೀರಿರುವ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಏಕಾಏಕಿ 5 ಮಂದಿ ನೀರಿನಲ್ಲಿ ಮುಳುಗಿದ್ದರು. ಮಾಹಿತಿ ಪಡೆದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಕಳಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT