ಬಂಡಿ ಸಂಜಯ್ 
ದೇಶ

ತೆಲಂಗಾಣ: ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್‌ ಕುಮಾರ್‌ ಬಂಧನ

ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್‌ ಕುಮಾರ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕರೀಮ್‌ನಗರದಲ್ಲಿರುವ ನಿವಾಸದಲ್ಲಿ ಸಂಜಯ್‌ ಕುಮಾರ್‌ ಅವರನ್ನು ಬುಧವಾರ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ .

ತೆಲಂಗಾಣ: ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್‌ ಕುಮಾರ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.  ಕರೀಮ್‌ನಗರದಲ್ಲಿರುವ ನಿವಾಸದಲ್ಲಿ ಸಂಜಯ್‌ ಕುಮಾರ್‌ ಅವರನ್ನು ಬುಧವಾರ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ .

ತೆಲಂಗಾಣ ರಾಜ್ಯ ಸಾರ್ವಜನಿಕ ಸೇವಾ ಆಯೋಗ ಮತ್ತು 10ನೇ ತರಗತಿ ಪ್ರಶ್ನೆ ಪತ್ರಿಕೆ ಲೀಕ್ ಆಗಿತ್ತು. ಇದಕ್ಕೆ ಸಿಎಂ ಕೆ.ಚಂದ್ರಶೇಖರ್ ರಾವ್​ ಅವರ ಸರ್ಕಾರವೇ ನೇರಹೊಣೆ ಎಂದು ಆರೋಪಿಸಿದ್ದ ಬಂಡಿ ಸಂಜಯ್ ಕುಮಾರ್​, ‘ಇದರಲ್ಲಿ ನೇರ ಪ್ರಭಾವ ಇರುವುದು ಮುಖ್ಯಮಂತ್ರಿ ಕೆಸಿಆರ್​ ಮತ್ತು ಅವರ ಪುತ್ರ ಕೆಟಿಆರ್​ ಅವರೇ ಹೊಣೆ. ಹೀಗಾಗಿ ಅವರಿಬ್ಬರೂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು. ಇದೀಗ ಅದೇ ಆರೋಪದಡಿ ಬಂಡಿ ಸಂಜಯ್ ಅವರನ್ನೇ ಬಂಧಿಸಲಾಗಿದೆ ಎನ್ನಲಾಗಿದೆ.

ತಡರಾತ್ರಿ 12.47ರ ಹೊತ್ತಿಗೆ ಬಂಡಿ ಸಂಜಯ್​ ಅವರ ಟ್ವಿಟರ್​ ಅಕೌಂಟ್​​ನಲ್ಲಿ, ಅವರ ಬಂಧನದ ದೃಶ್ಯಗಳನ್ನು ಪೋಸ್ಟ್ ಮಾಡಲಾಗಿದೆ. ಹಾಗೇ, ‘ಭಾರತ್​ ರಾಷ್ಟ್ರ ಸಮಿತಿ ಪಕ್ಷದಲ್ಲಿ ಭಯ ಮನೆ ಮಾಡಿದೆ. ಮೊದಲು ನಾನು ಸುದ್ದಿಗೋಷ್ಠಿ ನಡೆಸುವುದನ್ನು ತಪ್ಪಿಸಿದರು.

ರಾತ್ರೋರಾತ್ರಿ ಬಂದು ಅರೆಸ್ಟ್ ಮಾಡಿದರು. ಬಿಆರ್​ಎಸ್​ ಸರ್ಕಾರ ಮಾಡುತ್ತಿರುವ ತಪ್ಪುಗಳನ್ನು ಪ್ರಶ್ನಿಸುತ್ತಿರುವುದೇ ನಾನು ಮಾಡುತ್ತಿರುವ ಪ್ರಮಾದ. ನಾನು ಜೈಲಿನಲ್ಲಿದ್ದರೂ ಸರಿ, ಬಿಆರ್​ಎಸ್​ ಪಕ್ಷದ ಭ್ರಷ್ಟಾಚಾರ, ತಪ್ಪುಗಳನ್ನು ಪ್ರಶ್ನಿಸುವುದನ್ನು ನಿಲ್ಲಿಸುವುದಿಲ್ಲ ಎಂದು ಕೂಡ ಟ್ವೀಟ್​ ಮಾಡಲಾಗಿದೆ.

‘ಭಾರತ್ ಮಾತಾ ಕೀ ಜೈ, ಜೈ ಶ್ರೀರಾಮ್​, ಜೈ ತೆಲಂಗಾಣ’ ಎಂದೂ ಬರೆದಿದ್ದಾರೆ. ಏಪ್ರಿಲ್​ 8ರಂದು ತೆಲಂಗಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಡಲಿದ್ದಾರೆ. ಅದಕ್ಕೂ ಪೂರ್ವ ಬಿಜೆಪಿ ರಾಜ್ಯಾಧ್ಯಕ್ಷನ ಬಂಧನವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇವೇಗೌಡರ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು: ಆತಂಕ ಪಡುವ ಅಗತ್ಯವಿಲ್ಲ ಎಂದ ಹೆಚ್​​ಡಿ ಕುಮಾರಸ್ವಾಮಿ, ಆಸ್ಪತ್ರೆ ಬುಲೆಟಿನ್ ಬಿಡುಗಡೆ

ಮತ್ತೆ ಕೋವಿಡ್ ಅಬ್ಬರ: ಆಂಧ್ರದಲ್ಲಿ ನಾಲ್ವರು ಬಲಿ; ರಾಜ್ಯದ ಗಡಿಭಾಗದಲ್ಲಿ ಹೈ ಅಲರ್ಟ್, 8 ಮಾರ್ಗಗಳಲ್ಲಿ ತೀವ್ರ ತಪಾಸಣೆ!

ವೆಸ್ಟ್ ಇಂಡೀಸ್ ಕ್ರಿಕೆಟ್ ದಿಗ್ಗಜ Sir Garry Sobers ನಿಧನ, 6 ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟರ್!

ಯಲಹಂಕದಲ್ಲಿ ಭೀಕರ ಅಪಘಾತ, ಟ್ಯಾಂಕರ್ ಢಿಕ್ಕಿ,: ಶಾಲೆಗೆ ಮೊಮ್ಮಕ್ಕಳ ಬಿಡಲು ಹೋಗಿದ್ದ ವೃದ್ಧ ದಾರುಣ ಸಾವು! Video

'ಭೂಮಿ ಮೇಲಿನ ಎಲ್ಲರೂ ಹಿಂದೂಗಳೇ, ಧರ್ಮ ಬದಲಾವಣೆ ತಂದೆ ಬದಲಿಸಿದಂತೆ': ಆಟೋ ಮೇಲಿನ ಬರಹ ವೈರಲ್, ಚಾಲಕನಿಗೆ ಬೆದರಿಕೆ!