ಅಶೋಕ್ ಗೆಹ್ಲೋಟ್-ಪ್ರಧಾನಿ ಮೋದಿ 
ದೇಶ

ಪಿಎಂ ಫಸಲ್ ವಿಮಾ ಯೋಜನೆಯ ನಿಯಮಗಳಲ್ಲಿ ಬದಲಾವಣೆಗೆ ಆಗ್ರಹಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಗೆಹ್ಲೋಟ್!

'ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ' ನಿಯಮಗಳಲ್ಲಿ ಸಡಿಲಿಕೆ ಮಾಡಿ. ಇದರಿಂದ ಸಂತ್ರಸ್ತ ರೈತರಿಗೆ ಬೆಳೆ ನಷ್ಟವಾದ ತಕ್ಷಣ ಪರಿಹಾರ ಸಿಗುತ್ತದೆ. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೇವಲ ಎರಡು ಹೆಕ್ಟೇರ್ ಭೂಮಿಯಲ್ಲಿನ ಬೆಳೆ ನಷ್ಟಕ್ಕೆ ರೈತರಿಗೆ ಪರಿಹಾರ ನೀಡುವ...

ಜೈಪುರ: 'ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ' ನಿಯಮಗಳಲ್ಲಿ ಸಡಿಲಿಕೆ ಮಾಡಿ. ಇದರಿಂದ ಸಂತ್ರಸ್ತ ರೈತರಿಗೆ ಬೆಳೆ ನಷ್ಟವಾದ ತಕ್ಷಣ ಪರಿಹಾರ ಸಿಗುತ್ತದೆ. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೇವಲ ಎರಡು ಹೆಕ್ಟೇರ್ ಭೂಮಿಯಲ್ಲಿನ ಬೆಳೆ ನಷ್ಟಕ್ಕೆ ರೈತರಿಗೆ ಪರಿಹಾರ ನೀಡುವ ನಿಯಮವನ್ನು ಬದಲಾಯಿಸಲು ಮತ್ತು ಈ ಮಿತಿಯನ್ನು ಹೆಚ್ಚಿಸುವಂತೆ ಕೋರಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ರೈತರು ಬೆಳೆ ಹಾನಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ (ಎಸ್‌ಡಿಆರ್‌ಎಫ್) ತಕ್ಷಣದ ನೆರವು ಪಡೆಯಲು ಅಕ್ಟೋಬರ್ 2022 ರಲ್ಲಿ ಭಾರತ ಸರ್ಕಾರ ಹೊರಡಿಸಿದ ಹೊಸ ನಿಯಮಗಳನ್ನು ತಿದ್ದುಪಡಿ ಮಾಡುವಂತೆ ಮನವಿ ಮಾಡಿದ್ದಾರೆ.

ನಿಯಮದಿಂದಾಗಿ ರೈತರಿಗೆ ಬೆಳೆ ಹಾನಿಗೆ ತಕ್ಷಣ ಪರಿಹಾರ ಸಿಗುತ್ತಿಲ್ಲ ಎಂದು ಮುಖ್ಯಮಂತ್ರಿ ಪತ್ರ ಬರೆದಿದ್ದಾರೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಿಂದ ವಿಪತ್ತುಗಳ ಸಂದರ್ಭದಲ್ಲಿ ರೈತರು ಪಡೆಯಬೇಕಾದ ವಿಮಾ ಮೊತ್ತವನ್ನು ಲೆಕ್ಕಾಚಾರ ಮಾಡುವುದು ಸಂಕೀರ್ಣ ಮತ್ತು ಸುದೀರ್ಘ ಪ್ರಕ್ರಿಯೆಯಾಗಿದೆ. ಎಸ್‌ಡಿಆರ್‌ಎಫ್ ನೆರವಿನ ವಿತರಣೆಯಲ್ಲಿ ಹಲವಾರು ವಿಳಂಬಗಳು ನಡೆಯುತ್ತಿವೆ ಎಂದು ಸಿಎಂ ಹೇಳಿದರು.

ಅಕ್ಟೋಬರ್ 2022ರಲ್ಲಿ ಹೊಸ ನಿಯಮಗಳು ಜಾರಿಗೆ ಬರುವ ಮೊದಲು, ರೈತರು ಎಸ್‌ಡಿಆರ್‌ಎಫ್ ಅಡಿಯಲ್ಲಿ ತ್ವರಿತ ಆರ್ಥಿಕ ನೆರವು ಪಡೆಯುತ್ತಿದ್ದರು ಎಂದು ಗೆಹ್ಲೋಟ್ ಬರೆದಿದ್ದಾರೆ. ಆದ್ದರಿಂದ, ಎಸ್‌ಡಿಆರ್‌ಎಫ್ ಅಡಿಯಲ್ಲಿ ತಕ್ಷಣದ ನೆರವು ನೀಡಲು ನಿಯಮಗಳನ್ನು ತಿದ್ದುಪಡಿ ಮಾಡಬೇಕು ಎಂದು ಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

ಇರಾನ್ ಹಡಗಿನ ಮೇಲೆ ದಾಳಿ; 101 ಜನ ನಾಪತ್ತೆ; ಅಮೆರಿಕದೊಂದಿಗೆ 'ಸಂಧಾನ ಇಲ್ಲ', ಯುದ್ಧ ಮುಂದುವರಿಯಲಿದೆ

48 ವರ್ಷಗಳ ಬಳಿಕ ಪುರಿ ಜಗನ್ನಾಥ ದೇಗುಲದಲ್ಲಿ 'ಭಂಡಾರ ಎಣಿಕೆ': RBI ಉಪಸ್ಥಿತಿ, ಯಾವಾಗ ಗೊತ್ತಾ?

'ವೈದ್ಯಕೀಯ ಕಾರಣಗಳಿಗಾಗಿ ಮಾತ್ರ ಮನೆ ಊಟ, ಕೋರಿಕೆ ಮೇರೆಗೆ ಅಲ್ಲ': ಪವಿತ್ರಾಗೌಡ ಅಂಡ್ ಟೀಂಗೆ HighCourt ಶಾಕ್!

ಖಾಲಿ ಹುದ್ದೆಗಳ ಭರ್ತಿಗೆ SC ಒಳ ಮೀಸಲಾತಿ ಪರಿಗಣಿಸಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ

SCROLL FOR NEXT