ತಿರಂಗಾ ನಡಿಗೆಯಲ್ಲಿ ವಿಪಕ್ಷ ಸಂಸದರು 
ದೇಶ

ಸಂಸತ್ತಿನಿಂದ ವಿಜಯ್ ಚೌಕವರೆಗೂ ವಿಪಕ್ಷ ಸಂಸದರಿಂದ ‘ತಿರಂಗಾ ನಡಿಗೆ'- ವಿಡಿಯೋ

ಬಜೆಟ್ ಅಧಿವೇಶನದ ಕೊನೆಯ ದಿನವಾದ ಇಂದು ಪ್ರತಿಪಕ್ಷಗಳ ಸದಸ್ಯರು ಸಂಸತ್ತಿನಿಂದ ವಿಜಯ್ ಚೌಕದವರೆಗೂ ತಿರಂಗಾ ಹಿಡಿದು ಪ್ರತಿಭಟನೆ ನಡೆಸಿದರು.

ನವದೆಹಲಿ: ಬಜೆಟ್ ಅಧಿವೇಶನದ ಕೊನೆಯ ದಿನವಾದ ಇಂದು ಪ್ರತಿಪಕ್ಷಗಳ ಸದಸ್ಯರು ಸಂಸತ್ತಿನಿಂದ ವಿಜಯ್ ಚೌಕದವರೆಗೂ ತಿರಂಗಾ ಹಿಡಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ಮುಖಂಡ ಕೆ.ಸಿ. ವೇಣುಗೋಪಾಲ್, ಸರ್ಕಾರ ಸಂಸತ್ ಕಲಾಪ ನಡೆಯಲು ಬಿಡುತ್ತಿಲ್ಲ. ಅದಾನಿ ಹಗರಣ ಕುರಿತು ಚರ್ಚೆ ಅವರು ಏಕೆ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಪ್ರಶ್ನಿಸಿದರು. ಬಜೆಟ್ ಅಧಿವೇಶನ ಆರಂಭವಾದಾಗಿನಿಂದಲೂ ಸಂಸತ್ತಿನ ಉಭಯ ಸದನಗಳ ಕಲಾಪ ಪದೇ ಪದೇ ಮುಂದೂಡಲ್ಪಟ್ಟಿತ್ತು. 

ಸಂಸತ್ತಿನಿಂದ ಆರಂಭವಾದ ತಿರಂಗಾ ನಡಿಗೆ ವಿಜಯ್ ಚೌಕದ ಬಳಿ ಅಂತ್ಯಗೊಂಡಿತು. ಈ ನಡಿಗೆ ನಂತರ ಕನ್ಸಿಟ್ಯೂಷನ್ ಕ್ಲಬ್ ನಲ್ಲಿ ವಿಪಕ್ಷಗಳು ಸುದ್ದಿಗೋಷ್ಠಿ ನಡೆಯಲಿದೆ ಎನ್ನಲಾಗಿದೆ. ಈ ಮಧ್ಯೆ, ಲೋಕಸಭಾ ಸ್ಪೀಕರ್ ಇಂದು ಸಂಜೆ ಆಯೋಜಿಸಿರುವ ಚಹಾಕೂಟದಲ್ಲಿ ಕಾಂಗ್ರೆಸ್ ಸೇರಿದಂತೆ ಇತರ ಮೂರು ಪ್ರಮುಖ ರಾಜಕೀಯ ಪಕ್ಷಗಳು ಪಾಲ್ಗೊಳ್ಳಲುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT