ಕೈಲಾಶ್ ವಿಜಯವರ್ಗಿಯಾ 
ದೇಶ

ಕೆಟ್ಟ ಬಟ್ಟೆ ಧರಿಸಿ ಶೂರ್ಪನಖಿಯಂತೆ ಕಾಣ್ತೀರಾ; ದೇವರು ಸುಂದರ ದೇಹ ಕೊಟ್ಟಿದ್ದಾನೆ ಒಳ್ಳೆ ಬಟ್ಟೆ ಧರಿಸಿ: ಬಿಜೆಪಿ ನಾಯಕ

'ಕೆಟ್ಟ ಉಡುಗೆ' ತೊಟ್ಟ ಹುಡುಗಿಯರು ರಾಮಾಯಣದ 'ಶೂರ್ಪನಖಿ'ಯಂತೆ ಕಾಣುತ್ತಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಹೇಳಿದ್ದಾರೆ.

ಇಂದೋರ್: 'ಕೆಟ್ಟ ಉಡುಗೆ' ತೊಟ್ಟ ಹುಡುಗಿಯರು ರಾಮಾಯಣದ 'ಶೂರ್ಪನಖಿ'ಯಂತೆ ಕಾಣುತ್ತಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಹೇಳಿದ್ದಾರೆ.

ಹನುಮ ಮತ್ತು ಮಹಾವೀರ ಜಯಂತಿಯಂದು ಇಲ್ಲಿ ಆಯೋಜಿಸಲಾದ ಧಾರ್ಮಿಕ ಸಮಾರಂಭದಲ್ಲಿ ಅವರು ನೀಡಿದ ಹೇಳಿಕೆ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

'ನಾನು ರಾತ್ರಿ ಮನೆಗೆ ಹೋಗುವಾಗ ವಿದ್ಯಾವಂತ ಯುವಕರು ಮತ್ತು ಮಕ್ಕಳನ್ನು ಮಾದಕ ದ್ರವ್ಯದ ಅಮಲಿನಲ್ಲಿ ನೋಡುತ್ತೇನೆ. ಕಾರಿನಿಂದ ಕೆಳಗೆ ಇಳಿದು ಅವರಿಗೆ ಕಪಾಳಮೋಕ್ಷ ಮಾಡಬೇಕೆನಿಸುತ್ತದೆ ಎಂದು ಬಿಜೆಪಿ ನಾಯಕ ಹೇಳಿದರು.

ನಾವು ಮಹಿಳೆಯರಲ್ಲಿ ದೇವಿಯನ್ನು ಕಾಣುತ್ತೇವೆ. ಆದರೆ ಹುಡುಗಿಯರು ಕೆಟ್ಟ ಉಡುಪು ಧರಿಸಿ ತಿರುಗಾಡುವುದನ್ನು ನೋಡಿದರೆ ಅವರು ದೇವಿಯಂತೆ ಕಾಣುವುದಿಲ್ಲ ಆದರೆ ಶೂರ್ಪನಖಿಯಂತೆ ಕಾಣುತ್ತಾರೆ. ದೇವರು ನಿಮಗೆ ಒಳ್ಳೆಯ ಮತ್ತು ಸುಂದರವಾದ ದೇಹವನ್ನು ಕೊಟ್ಟಿದ್ದಾನೆ. ಅದನ್ನು ಒಳ್ಳೆಯ ಉಡುಪುಗಳನ್ನು ಧರಿಸಿ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT