ಕೈಲಾಶ್ ವಿಜಯವರ್ಗಿಯಾ 
ದೇಶ

ಕೆಟ್ಟ ಬಟ್ಟೆ ಧರಿಸಿ ಶೂರ್ಪನಖಿಯಂತೆ ಕಾಣ್ತೀರಾ; ದೇವರು ಸುಂದರ ದೇಹ ಕೊಟ್ಟಿದ್ದಾನೆ ಒಳ್ಳೆ ಬಟ್ಟೆ ಧರಿಸಿ: ಬಿಜೆಪಿ ನಾಯಕ

'ಕೆಟ್ಟ ಉಡುಗೆ' ತೊಟ್ಟ ಹುಡುಗಿಯರು ರಾಮಾಯಣದ 'ಶೂರ್ಪನಖಿ'ಯಂತೆ ಕಾಣುತ್ತಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಹೇಳಿದ್ದಾರೆ.

ಇಂದೋರ್: 'ಕೆಟ್ಟ ಉಡುಗೆ' ತೊಟ್ಟ ಹುಡುಗಿಯರು ರಾಮಾಯಣದ 'ಶೂರ್ಪನಖಿ'ಯಂತೆ ಕಾಣುತ್ತಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಹೇಳಿದ್ದಾರೆ.

ಹನುಮ ಮತ್ತು ಮಹಾವೀರ ಜಯಂತಿಯಂದು ಇಲ್ಲಿ ಆಯೋಜಿಸಲಾದ ಧಾರ್ಮಿಕ ಸಮಾರಂಭದಲ್ಲಿ ಅವರು ನೀಡಿದ ಹೇಳಿಕೆ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

'ನಾನು ರಾತ್ರಿ ಮನೆಗೆ ಹೋಗುವಾಗ ವಿದ್ಯಾವಂತ ಯುವಕರು ಮತ್ತು ಮಕ್ಕಳನ್ನು ಮಾದಕ ದ್ರವ್ಯದ ಅಮಲಿನಲ್ಲಿ ನೋಡುತ್ತೇನೆ. ಕಾರಿನಿಂದ ಕೆಳಗೆ ಇಳಿದು ಅವರಿಗೆ ಕಪಾಳಮೋಕ್ಷ ಮಾಡಬೇಕೆನಿಸುತ್ತದೆ ಎಂದು ಬಿಜೆಪಿ ನಾಯಕ ಹೇಳಿದರು.

ನಾವು ಮಹಿಳೆಯರಲ್ಲಿ ದೇವಿಯನ್ನು ಕಾಣುತ್ತೇವೆ. ಆದರೆ ಹುಡುಗಿಯರು ಕೆಟ್ಟ ಉಡುಪು ಧರಿಸಿ ತಿರುಗಾಡುವುದನ್ನು ನೋಡಿದರೆ ಅವರು ದೇವಿಯಂತೆ ಕಾಣುವುದಿಲ್ಲ ಆದರೆ ಶೂರ್ಪನಖಿಯಂತೆ ಕಾಣುತ್ತಾರೆ. ದೇವರು ನಿಮಗೆ ಒಳ್ಳೆಯ ಮತ್ತು ಸುಂದರವಾದ ದೇಹವನ್ನು ಕೊಟ್ಟಿದ್ದಾನೆ. ಅದನ್ನು ಒಳ್ಳೆಯ ಉಡುಪುಗಳನ್ನು ಧರಿಸಿ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT