ಅಮಿತ್ ಶಾ 
ದೇಶ

ಪ್ರಜಾಪ್ರಭುತ್ವವಲ್ಲ. ಜಾತಿವಾದ, ಕುಟುಂಬವಾದ ಅಪಾಯದಲ್ಲಿರೋದು: ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟ ಅಮಿತ್ ಶಾ

ಪ್ರಜಾಪ್ರಭುತ್ವವಲ್ಲ. ಜಾತಿವಾದ, ಕುಟುಂಬವಾದ ಅಪಾಯದಲ್ಲಿರೋದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಟಾಂಗ್ ಕೊಟ್ಟಿದ್ದಾರೆ.

ನವದೆಹಲಿ: ಪ್ರಜಾಪ್ರಭುತ್ವವಲ್ಲ. ಜಾತಿವಾದ, ಕುಟುಂಬವಾದ ಅಪಾಯದಲ್ಲಿರೋದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಟಾಂಗ್ ಕೊಟ್ಟಿದ್ದಾರೆ.

ಕೌಶಂಬಿ ಹಬ್ಬದ ಸಂದರ್ಭದಲ್ಲಿ ಉತ್ತರ ಪ್ರದೇಶದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಕೋಟ್ಯಂತರ ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಿದರು. ಉತ್ಸವವನ್ನು ಉದ್ಘಾಟಿಸಿದ ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ಬಗ್ಗೆ ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸಿದ ವಿರೋಧ ಪಕ್ಷಗಳನ್ನು ದೇಶ ಕ್ಷಮಿಸುವುದಿಲ್ಲ ಎಂದು ಪ್ರತಿಪಾದಿಸಿದರು.

ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಸರ್ಕಾರ) ತಂದ ಕಾನೂನಿನ ಆಧಾರದ ಮೇಲೆ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ ಎಂದು ಅಮಿತ್ ಶಾ ಹೇಳಿದರು. ಸಮಾಜದ ಎಲ್ಲಾ ವರ್ಗಗಳ ಸರ್ವತೋಮುಖ ಕಲ್ಯಾಣಕ್ಕಾಗಿ 2024ರಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಬೇಕೆಂದು ಶಾ ಜನರಿಗೆ ಕರೆ ನೀಡಿದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜ್ಯ ಘಟಕದ ಅಧ್ಯಕ್ಷ ಭೂಪೇಂದ್ರ ಚೌಧರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಾರ್ಚ್ 24 ರಂದು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು.

ದೇಶದ ಬಜೆಟ್ ಅಧಿವೇಶನದ ಬಗ್ಗೆ ಚರ್ಚೆ ನಡೆಸದೆ ಸಂಸತ್ತಿನ ಕಲಾಪವನ್ನು ಅಂತ್ಯಗೊಳಿಸಿದ್ದು ಸ್ವಾತಂತ್ರ್ಯದ ಇತಿಹಾಸದಲ್ಲಿ ಎಂದೂ ನಡೆದಿರಲಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. ಪ್ರತಿಪಕ್ಷಗಳ ನಾಯಕರು ಸದನ ಕಲಾಪಕ್ಕೆ ಅವಕಾಶ ನೀಡಲಿಲ್ಲ. ಇದಕ್ಕೆ ಕಾರಣ ರಾಹುಲ್ ಗಾಂಧಿ ಅವರನ್ನು ಅನರ್ಹತೆ ಎಂದು ಅಮಿತ್ ಶಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!