ಖರ್ಗೆ ಮತ್ತು ಎಂಕೆ ಸ್ಟಾಲಿನ್ 
ದೇಶ

ವಿಪಕ್ಷಗಳ ಒಗ್ಗೂಡಿವಿಕೆ ತಂತ್ರ: ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸುವಂತೆ ಸ್ಟಾಲಿನ್ ಗೆ ಖರ್ಗೆ ಆಹ್ವಾನ

2024ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ವಿಪಕ್ಷಗಳ ಒಗ್ಗೂಡಿವಿಕೆಯ ಮಂತ್ರ ಪಠಿಸುತ್ತಿದ್ದು, ಇದಕ್ಕೆ ಇಂಬು ನೀಡುವಂತೆ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗೆ ಆಹ್ವಾನ ನೀಡಿದ್ದಾರೆ.

ನವದೆಹಲಿ: 2024ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ವಿಪಕ್ಷಗಳ ಒಗ್ಗೂಡಿವಿಕೆಯ ಮಂತ್ರ ಪಠಿಸುತ್ತಿದ್ದು, ಇದಕ್ಕೆ ಇಂಬು ನೀಡುವಂತೆ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗೆ ಆಹ್ವಾನ ನೀಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರು ವಿರೋಧ ಪಕ್ಷಗಳ ಸಭೆಗೆ ಹಾಜರಾಗುವಂತೆ  ತಮಿಳುನಾಡು ಮುಖ್ಯಮಂತ್ರಿ ಹಾಗೂ  ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಅವರಿಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

 ಕೇಂದ್ರದ ಬಿಜೆಪಿ ನೇತೃತ್ವದ ಸರಕಾರದ ವಿರುದ್ಧ ಸಾಮಾನ್ಯ ಕಾರ್ಯತಂತ್ರವನ್ನು ರೂಪಿಸಲು ಹಾಗೂ  ಒಗ್ಗಟ್ಟಿನ ಒಕ್ಕೂಟ  ಪ್ರಸ್ತುತಪಡಿಸಲು ಸಮಾನ ಮನಸ್ಕ ಪಕ್ಷದ ನಾಯಕರ ಸಭೆಯನ್ನು ಕಾಂಗ್ರೆಸ್ ಪ್ರಸ್ತಾಪಿಸಿದೆ. ಮೂಲಗಳ ಪ್ರಕಾರ  ಖರ್ಗೆ ಅವರು ಸ್ಟಾಲಿನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಹಾಗೂ  ವಿರೋಧ ಪಕ್ಷದ ಸಭೆಗೆ ಸೇರಲು ಅವರನ್ನು ಆಹ್ವಾನಿಸಿದ್ದಾರೆ.

ಪ್ರಸ್ತಾವಿತ ಸಭೆಯಲ್ಲಿ ತಮ್ಮ ಬೆಂಬಲ ಹಾಗೂ  ಭಾಗವಹಿಸುವಿಕೆಯ ಬಗ್ಗೆ  ಸ್ಟಾಲಿನ್ ಅವರು  ಖರ್ಗೆ ಅವರಿಗೆ ಭರವಸೆ ನೀಡಿದರು ಎಂದು ತಿಳಿದುಬಂದಿದೆ. ತಮಿಳುನಾಡಿನಲ್ಲಿ ಡಿಎಂಕೆ ಕಾಂಗ್ರೆಸ್‌ನ ಪ್ರಮುಖ ಮಿತ್ರ ಪಕ್ಷವಾಗಿದೆ.

2014 ರಲ್ಲಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ನಂತರ, ಅವರು ಭಾರತೀಯ ರಾಜಕೀಯದಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ ಮತ್ತು ಸತತ ಎರಡು ಸಾರ್ವತ್ರಿಕ ಚುನಾವಣೆಗಳಲ್ಲಿ ವಿರೋಧ ಪಕ್ಷಗಳನ್ನು ಸೋಲಿಸಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT