ಸಿಆರ್ ಕೇಶವನ್ 
ದೇಶ

ಕಾಂಗ್ರೆಸ್‌ ಮಾಜಿ ನಾಯಕ ಸಿ ರಾಜಗೋಪಾಲಾಚಾರಿ ಮರಿಮೊಮ್ಮಗ ಸಿಆರ್ ಕೇಶವನ್ ಬಿಜೆಪಿಗೆ ಸೇರ್ಪಡೆ

ಭಾರತದ ಮೊದಲ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಅವರ ಮೊಮ್ಮಗ ಸಿಆರ್ ಕೇಶವನ್ ಅವರು ಬಿಜೆಪಿಗೆ ಶನಿವಾರ ಸೇರ್ಪಡೆಗೊಂಡಿದ್ದು, ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್'ಗೆ ದೊಡ್ಡ ಹೊಡೆದ ಬಿದ್ದಂತಾಗಿದೆ.

ಚೆನ್ನೈ: ಭಾರತದ ಮೊದಲ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಅವರ ಮೊಮ್ಮಗ ಸಿಆರ್ ಕೇಶವನ್ ಅವರು ಬಿಜೆಪಿಗೆ ಶನಿವಾರ ಸೇರ್ಪಡೆಗೊಂಡಿದ್ದು, ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್'ಗೆ ದೊಡ್ಡ ಹೊಡೆದ ಬಿದ್ದಂತಾಗಿದೆ.

ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಶವನ್ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕೊಂಡಾಡಿದರು.

ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷಕ್ಕೆ ನನ್ನನ್ನು ಸೇರ್ಪಡೆಗೊಳಿಸಿಕೊಂಡಿದ್ದಕ್ಕಾಗಿ, ಪ್ರಮುಖವಾಗಿ ಪ್ರಧಾನಿ ಮೋದಿಯವರು ತಮಿಳುನಾಡಿಗೆ ಭೇಟಿ ನೀಡುವ ದಿನವೇ ಸೇರ್ಪಡೆಗೊಳಿಸಿಕೊಂಡಿದ್ದಕ್ಕಾಗಿ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆಂದು ಹೇಳಿದರು.

"ಪ್ರಧಾನಿ ಮೋದಿಯವರ ಜನಕೇಂದ್ರಿತ ನೀತಿಗಳು, ಭ್ರಷ್ಟಾಚಾರ-ಮುಕ್ತ ಆಡಳಿತ ಮತ್ತು ಸುಧಾರಣೆ-ನೇತೃತ್ವದ ಅಭಿವೃದ್ಧಿ ಕಾರ್ಯಸೂಚಿಗಳು ಭಾರತವನ್ನು ದುರ್ಬಲ ಆರ್ಥಿಕತೆಯಿಂದ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಗೆ ಸಾಗುವಂತೆ ಮಾಡಿದೆ ಎಂದು ತಿಳಿಸಿದರು.

ಕೆಲ ದಿನಗಳ ಹಿಂದಷ್ಟೇ ಕೇಶವನ್ ಅವರು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಈ ರಾಜೀನಾಮೆ ಪತ್ರವನ್ನು ಹಂಚಿಕೊಂಡಿದ್ದರು. ರಾಜೀನಾಮೆ ಪತ್ರದಲ್ಲಿ ಎರಡು ದಶಕಗಳಿಂದ ಪಕ್ಷಕ್ಕಾಗಿ ದುಡಿಯಲು ಕಾರಣವಾದ ಯಾವುದೇ "ಮೌಲ್ಯದ ಕುರುಹು" ಈಗ ಕಾಣುತ್ತಿಲ್ಲ. ಪಕ್ಷವು ಪ್ರಸ್ತುತವಾಗಿ ಏನನ್ನು ಸಂಕೇತಿಸುತ್ತದೆಯೋ ಅದನ್ನು ನಾನು ಒಪ್ಪುತ್ತೇನೆ ಎಂದು ನಾನು ಇನ್ನು ಮುಂದೆ ಒಳ್ಳೆಯ ಆತ್ಮಸಾಕ್ಷಿಯಿಂದ ಹೇಳಲಾರೆ..." ಎಂದು ಬರೆದಿದ್ದರು.

ಇದಕ್ಕಾಗಿಯೇ ನಾನು ಇತ್ತೀಚೆಗೆ ರಾಷ್ಟ್ರೀಯ ಮಟ್ಟದಲ್ಲಿ ಸಾಂಸ್ಥಿಕ ಜವಾಬ್ದಾರಿಯನ್ನು ನಿರಾಕರಿಸಿದ್ದೇನೆ ಮತ್ತು ಅದರಿಂದ ದೂರವಿದ್ದೇನೆ. ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸದೆ ದೂರ ಇದ್ದೆ. "ನಾನು ಹೊಸ ಮಾರ್ಗವನ್ನು ಕಂಡುಕೊಳ್ಳುವ ಸಮಯ ಬಂದಿದೆ ಮತ್ತು ಆದ್ದರಿಂದ ನಾನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ತಮಿಳುನಾಡು ಕಾಂಗ್ರೆಸ್ ಸಮಿತಿ ಚಾರಿಟಬಲ್ ಟ್ರಸ್ಟ್‌ನ ಟ್ರಸ್ಟಿ ಸ್ಥಾನಕ್ಕೆ ನನ್ನ ರಾಜೀನಾಮೆಯನ್ನು ಸೂಕ್ತ ಪ್ರಾಧಿಕಾರಕ್ಕೆ ಸಲ್ಲಿಸಿದ್ದೇನೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಸ್ಸಾಂ: ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ; ಸ್ಥಳದಲ್ಲೇ 7 ಆನೆಗಳ ದಾರುಣ ಸಾವು

ಉ.ಕ. ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ

Epstein Files ಬಿಡುಗಡೆ: ಟ್ರಂಪ್ ಬಗ್ಗೆ ಹೆಚ್ಚಿನದ್ದಿಲ್ಲ; ಕ್ಲಿಂಟನ್ ಫೋಟೋಗಳು ಬಹಿರಂಗ!

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಸಿಗದ ನಿರೀಕ್ಷಣಾ ಜಾಮೀನು: ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ ಭೈರತಿ ಬಸವರಾಜು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾತ್ರೋರಾತ್ರಿ ಶೋಧ; ಇತಿಹಾಸದಲ್ಲಿಯೇ ಮೊದಲ ಬಾರಿಗೆ 30 ಮೊಬೈಲ್ ಫೋನ್‌ಗಳು ವಶ!

SCROLL FOR NEXT