ಭಗವಂತ್ ಮಾನ್ 
ದೇಶ

ಉಚಿತ ಕೊಡುಗೆಗಳಿಂದ ಪಂಜಾಬ್ ನಲ್ಲಿ ವಿತ್ತೀಯ ಕೊರತೆ ಹೆಚ್ಚಳ: ವರದಿ

ಭಗವಂತ್ ಮಾನ್ ನೇತೃತ್ವದ ಎಎಪಿ ಸರ್ಕಾರದ ಉಚಿತ ಕೊಡುಗೆಗಳಿಂದ ಪಂಜಾಬ್‌ ಈಗಾಗಲೇ ಆರ್ಥಿಕವಾಗಿ ಹೆಚ್ಚು ಒತ್ತಡದಲ್ಲಿರುವ ರಾಜ್ಯಗಳಲ್ಲಿ ಒಂದಾಗಿದ್ದು, ಈ ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆ ಮತ್ತಷ್ಟು ಹೆಚ್ಚಾಗಿದೆ ಎಂದು ವರದಿ...

ಮುಂಬೈ: ಭಗವಂತ್ ಮಾನ್ ನೇತೃತ್ವದ ಎಎಪಿ ಸರ್ಕಾರದ ಉಚಿತ ಕೊಡುಗೆಗಳಿಂದ ಪಂಜಾಬ್‌ ಈಗಾಗಲೇ ಆರ್ಥಿಕವಾಗಿ ಹೆಚ್ಚು ಒತ್ತಡದಲ್ಲಿರುವ ರಾಜ್ಯಗಳಲ್ಲಿ ಒಂದಾಗಿದ್ದು, ಈ ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆ ಮತ್ತಷ್ಟು ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.

2023-24ನೇ ಸಾಲಿನ ಪಂಜಾಬ್ ಬಜೆಟ್‌ನ ಇಂಡಿಯಾ ರೇಟಿಂಗ್ಸ್ ವಿಶ್ಲೇಷಣೆಯ ಪ್ರಕಾರ, ಭಗವಂತ್ ಮಾನ್ ಸರ್ಕಾರವು 33,216 ಕೋಟಿ ರೂಪಾಯಿಗಳ ವಿತ್ತೀಯ ಕೊರತೆಯೊಂದಿಗೆ ವರ್ಷ ಅಂತ್ಯಗೊಳ್ಳುವ ಸಾಧ್ಯತೆಯಿದೆ. ಇದು ಜಿಎಸ್ ಡಿಪಿಯ ಶೇ. 5.3 ಅಥವಾ ಒಟ್ಟು ರಾಜ್ಯದ ಆಂತರಿಕ ಉತ್ಪನ್ನದ 23,835 ರೂ. ಕೋಟಿ ಅಥವಾ ಶೇ. 3.8 ರಷ್ಟು ಆಗಲಿದೆ.

ಇದರೊಂದಿಗೆ ಶೇ. 5 ರಷ್ಟು ವಿತ್ತೀಯ ಕೊರತೆಯೊಂದಿಗೆ ಆರ್ಥಿಕ ವರ್ಷವನ್ನು ಅಂತ್ಯಗೊಳಿಸುವ ರಾಜ್ಯಗಳಲ್ಲಿ ಪಂಜಾಬ್ ಅಗ್ರಸ್ಥಾನದಲ್ಲಿದೆ.

ಕೇಂದ್ರ ಸರ್ಕಾರ ವಾರ್ಷಿಕವಾಗಿ ಜಿಎಸ್ ಡಿಪಿಯ ಶೇ. 3 ರಷ್ಟು ಮಾತ್ರ ಸಾಲ ಪಡೆಯಲು ರಾಜ್ಯಗಳಿಗೆ ಅನುಮತಿಸುತ್ತದೆ ಮತ್ತು ವಿದ್ಯುತ್ ವಿತರಣೆ ಹಾಗೂ ಸಾರ್ವಜನಿಕ ಸಾರಿಗೆ ವಲಯಗಳಲ್ಲಿ ಕೆಲವು ಸುಧಾರಣೆಗಳನ್ನು ಪೂರೈಸಲು ಹೆಚ್ಚುವರಿಯಾಗಿ 50 ಬಿಪಿಎಸ್ ಅನ್ನು ನೀಡುತ್ತದೆ.

ಪಂಜಾಬ್‌ನ ಹಣಕಾಸಿನ ಕೊರತೆ ಮಧ್ಯಮ ಅವಧಿಯಲ್ಲೂ ಮುಂದುವರಿಯುತ್ತದೆ ಮತ್ತು ಆರ್ಥಿಕವಾಗಿ ಹೆಚ್ಚು ಒತ್ತಡದ ರಾಜ್ಯಗಳಲ್ಲಿ ಒಂದಾಗಿ ಉಳಿಯುತ್ತದೆ ಎಂದು ಇಂಡಿಯಾ ರೇಟಿಂಗ್ಸ್ ಸಂಸ್ಥೆಯ  ಹಿರಿಯ ನಿರ್ದೇಶಕ ಸುನಿಲ್ ಕುಮಾರ್ ಸಿನ್ಹಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT