ಭಗವಂತ್ ಮಾನ್ 
ದೇಶ

ಉಚಿತ ಕೊಡುಗೆಗಳಿಂದ ಪಂಜಾಬ್ ನಲ್ಲಿ ವಿತ್ತೀಯ ಕೊರತೆ ಹೆಚ್ಚಳ: ವರದಿ

ಭಗವಂತ್ ಮಾನ್ ನೇತೃತ್ವದ ಎಎಪಿ ಸರ್ಕಾರದ ಉಚಿತ ಕೊಡುಗೆಗಳಿಂದ ಪಂಜಾಬ್‌ ಈಗಾಗಲೇ ಆರ್ಥಿಕವಾಗಿ ಹೆಚ್ಚು ಒತ್ತಡದಲ್ಲಿರುವ ರಾಜ್ಯಗಳಲ್ಲಿ ಒಂದಾಗಿದ್ದು, ಈ ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆ ಮತ್ತಷ್ಟು ಹೆಚ್ಚಾಗಿದೆ ಎಂದು ವರದಿ...

ಮುಂಬೈ: ಭಗವಂತ್ ಮಾನ್ ನೇತೃತ್ವದ ಎಎಪಿ ಸರ್ಕಾರದ ಉಚಿತ ಕೊಡುಗೆಗಳಿಂದ ಪಂಜಾಬ್‌ ಈಗಾಗಲೇ ಆರ್ಥಿಕವಾಗಿ ಹೆಚ್ಚು ಒತ್ತಡದಲ್ಲಿರುವ ರಾಜ್ಯಗಳಲ್ಲಿ ಒಂದಾಗಿದ್ದು, ಈ ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆ ಮತ್ತಷ್ಟು ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.

2023-24ನೇ ಸಾಲಿನ ಪಂಜಾಬ್ ಬಜೆಟ್‌ನ ಇಂಡಿಯಾ ರೇಟಿಂಗ್ಸ್ ವಿಶ್ಲೇಷಣೆಯ ಪ್ರಕಾರ, ಭಗವಂತ್ ಮಾನ್ ಸರ್ಕಾರವು 33,216 ಕೋಟಿ ರೂಪಾಯಿಗಳ ವಿತ್ತೀಯ ಕೊರತೆಯೊಂದಿಗೆ ವರ್ಷ ಅಂತ್ಯಗೊಳ್ಳುವ ಸಾಧ್ಯತೆಯಿದೆ. ಇದು ಜಿಎಸ್ ಡಿಪಿಯ ಶೇ. 5.3 ಅಥವಾ ಒಟ್ಟು ರಾಜ್ಯದ ಆಂತರಿಕ ಉತ್ಪನ್ನದ 23,835 ರೂ. ಕೋಟಿ ಅಥವಾ ಶೇ. 3.8 ರಷ್ಟು ಆಗಲಿದೆ.

ಇದರೊಂದಿಗೆ ಶೇ. 5 ರಷ್ಟು ವಿತ್ತೀಯ ಕೊರತೆಯೊಂದಿಗೆ ಆರ್ಥಿಕ ವರ್ಷವನ್ನು ಅಂತ್ಯಗೊಳಿಸುವ ರಾಜ್ಯಗಳಲ್ಲಿ ಪಂಜಾಬ್ ಅಗ್ರಸ್ಥಾನದಲ್ಲಿದೆ.

ಕೇಂದ್ರ ಸರ್ಕಾರ ವಾರ್ಷಿಕವಾಗಿ ಜಿಎಸ್ ಡಿಪಿಯ ಶೇ. 3 ರಷ್ಟು ಮಾತ್ರ ಸಾಲ ಪಡೆಯಲು ರಾಜ್ಯಗಳಿಗೆ ಅನುಮತಿಸುತ್ತದೆ ಮತ್ತು ವಿದ್ಯುತ್ ವಿತರಣೆ ಹಾಗೂ ಸಾರ್ವಜನಿಕ ಸಾರಿಗೆ ವಲಯಗಳಲ್ಲಿ ಕೆಲವು ಸುಧಾರಣೆಗಳನ್ನು ಪೂರೈಸಲು ಹೆಚ್ಚುವರಿಯಾಗಿ 50 ಬಿಪಿಎಸ್ ಅನ್ನು ನೀಡುತ್ತದೆ.

ಪಂಜಾಬ್‌ನ ಹಣಕಾಸಿನ ಕೊರತೆ ಮಧ್ಯಮ ಅವಧಿಯಲ್ಲೂ ಮುಂದುವರಿಯುತ್ತದೆ ಮತ್ತು ಆರ್ಥಿಕವಾಗಿ ಹೆಚ್ಚು ಒತ್ತಡದ ರಾಜ್ಯಗಳಲ್ಲಿ ಒಂದಾಗಿ ಉಳಿಯುತ್ತದೆ ಎಂದು ಇಂಡಿಯಾ ರೇಟಿಂಗ್ಸ್ ಸಂಸ್ಥೆಯ  ಹಿರಿಯ ನಿರ್ದೇಶಕ ಸುನಿಲ್ ಕುಮಾರ್ ಸಿನ್ಹಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ರಾಹುಲ್ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ!

SCROLL FOR NEXT