ದೇಶ

ಕಾಶ್ಮೀರದಲ್ಲಿ ಕಿರಣ್ ರಿಜಿಜು ಕಾರಿಗೆ ಟ್ರಕ್ ಡಿಕ್ಕಿ; ಕೇಂದ್ರ ಸಚಿವ ಅಪಾಯದಿಂದ ಪಾರು

Lingaraj Badiger

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ.

ಕಿರಣ್ ರಿಜಿಜು ಅವರು ಇಂದು ಸಂಜೆ ಕಾಶ್ಮೀರದಿಂದ ವಾಪಸ್ ಬರುತ್ತಿದ್ದ ವೇಳೆ ರಾಂಬನ್ ಜಿಲ್ಲೆಯ ಬನಿಹಾಲ್ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ಇದೊಂದು ಸಣ್ಣ ಅಪಘಾತ ಅಷ್ಟೆ, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಎಡಿಜಿ ಮುಖೇಶ್ ಸಿಂಗ್ ಹೇಳಿದ್ದಾರೆ.

ಈ ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಮುಖೇಶ್ ಸಿಂಗ್ ಅವರು ತಿಳಿಸಿದ್ದಾರೆ.

SCROLL FOR NEXT