ರಷ್ಯಾ ಇಂಧನ (ಸಂಗ್ರಹ ಚಿತ್ರ) 
ದೇಶ

ಭಾರತಕ್ಕೆ ಕಚ್ಚಾ ತೈಲ ಪೂರೈಕೆ: ಇರಾಕ್ ಗಿಂತ ದುಪ್ಪಟ್ಟು ಪ್ರಮಾಣದಲ್ಲಿ ರಷ್ಯಾದಿಂದ ಆಮದು! 

ಭಾರತ ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿರುವ ಕಚ್ಚಾ ತೈಲದ ಪ್ರಮಾಣ ಹೊಸ ದಾಖಲೆ ನಿರ್ಮಿಸಿದೆ. ಇರಾಕ್ ನಿಂದ ಆಮದು ಮಾಡಿಕೊಳ್ಳುತ್ತಿದ್ದಕ್ಕಿಂತಲೂ ದುಪ್ಪಟ್ಟು ಪ್ರಮಾಣದಲ್ಲಿ ನಾವು ಈಗ ರಷ್ಯಾದಿಂದ ತೈಲವನ್ನು ಖರೀದಿಸಿದ್ದೇವೆ. 

ನವದೆಹಲಿ: ಭಾರತ ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿರುವ ಕಚ್ಚಾ ತೈಲದ ಪ್ರಮಾಣ ಹೊಸ ದಾಖಲೆ ನಿರ್ಮಿಸಿದೆ. ಇರಾಕ್ ನಿಂದ ಆಮದು ಮಾಡಿಕೊಳ್ಳುತ್ತಿದ್ದಕ್ಕಿಂತಲೂ ದುಪ್ಪಟ್ಟು ಪ್ರಮಾಣದಲ್ಲಿ ನಾವು ಈಗ ರಷ್ಯಾದಿಂದ ತೈಲವನ್ನು ಖರೀದಿಸಿದ್ದೇವೆ. 

ಬೆಳವಣಿಗೆ ನಿಧಾನಗತಿಯಲ್ಲಿರುವುದರಿಂದ ತೈಲ ಆಮದಿನಲ್ಲಿ ಯಾವುದೇ ಬದಲಾವಣೆಯೂ ಕಂಡುಬಂದಿಲ್ಲ.

ರಷ್ಯಾ ಕಚ್ಚಾ ತೈಲ ಪೂರೈಕೆ ಮಾಡುತ್ತಿರುವ ಏಕೈಕ ದೊಡ್ಡ ರಾಷ್ಟ್ರವಾಗಿದ್ದು, ಭಾರತ ಆಮದು ಮಾಡಿಕೊಳ್ಳುತ್ತಿರುವ ಒಟ್ಟಾರೆ ತೈಲದ ಪೈಕಿ ಮೂರನೇ ಒಂದರಷ್ಟನ್ನು ಪೂರೈಕೆ ಮಾಡುತ್ತಿರುವ ಮೂಲಕ ರಷ್ಯಾ ಸತತ 6 ನೇ ತಿಂಗಳು ಈ ಸ್ಥಾನದಲ್ಲಿ ಮುಂದುವರೆದಿದೆ ಎಂದು ಎನರ್ಜಿ ಕಾರ್ಗೋ ಟ್ರ್ಯಾಕರ್ ವೋರ್ಟೆಕ್ಸಾ ತಿಳಿಸಿದೆ.

ಈ ನಡುವೆ ರಿಫೈನರ್‌ಗಳು ಹೇರಳವಾದ ರಷ್ಯಾದ ಸರಕುಗಳನ್ನು ಇತರ ಶ್ರೇಣಿಗಳಿಗೆ ರಿಯಾಯಿತಿಯಲ್ಲಿ ಕ್ಷಿಪ್ರವಾಗಿ ಖರೀದಿಸುವುದನ್ನು ಮುಂದುವರಿಸುತ್ತಿದ್ದಾರೆ.

2022 ರ ಫೆಬ್ರವರಿಯಲ್ಲಿ ಅಂದರೆ ಯುಕ್ರೇನ್-ರಷ್ಯಾದ ನಡುವಿನ ಯುದ್ಧ ಪ್ರಾರಂಭಕ್ಕೂ ಮುನ್ನ ಶೇ.1 ರಷ್ಟಿದ್ದ ರಷ್ಯಾದಿಂದ ಭಾರತ ಆಮದು ಮಾಡಿಕೊಳ್ಳುತ್ತಿದ್ದ ತೈಲ ಪ್ರಮಾಣ ಈಗ ಮಾರ್ಚ್ ತಿಂಗಳಲ್ಲಿ ದಿನವೊಂದಕ್ಕೆ 1.64 ಮಿಲಿಯನ್ ಬ್ಯಾರಲ್ ಗೆ ಏರಿಕೆಯಾಗಿದ್ದು, ಶೇ.34 ರಷ್ಟು ಪಾಲುದಾರಿಕೆ ಹೊಂದಿದೆ.

2017-18 ರಿಂದ ಭಾರತಕ್ಕೆ ತೈಲ ಪೂರೈಕೆ ಮಾಡುತ್ತಿರುವುದರಲ್ಲಿ ಮುಂಚೂಣಿ ರಾಷ್ಟ್ರವಾಗಿದ್ದ ಇರಾಕ್ ನ್ನು ರಷ್ಯಾ ಈಗ ಹಿಂದಿಕ್ಕಿದ್ದು, ಮಾರ್ಚ್ ನಲ್ಲಿ ದಿನವೊಂದಕ್ಕೆ 0.82 ಮಿಲಿಯನ್ ಬ್ಯಾರಲ್ ಗಳ ಎರಡರಷ್ಟು ಈಗ ಖರೀದಿ ಮಾಡಲಾಗುತ್ತಿದೆ. ಚೀನಾ, ಅಮೇರಿಕಾದ ಬಳಿಕ ಭಾರತ ಕಚ್ಚಾ ತೈಲ ಆಮದು ಮಾಡಿಕೊಳ್ಳುವ ಮೂರನೇ ಅತಿ ದೊಡ್ಡ ರಾಷ್ಟ್ರವಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮುಂದಿನ ಸಿಜೆಐ ಯಾರು?: ಉತ್ತರಾಧಿಕಾರಿ ಹೆಸರು ಕೇಂದ್ರಕ್ಕೆ ಶಿಫಾರಸು ಮಾಡಿದ ನ್ಯಾಯಮೂರ್ತಿ ಬಿ.ಆರ್. ಗವಾಯಿ

Dharmasthala Mass Burial Case: ಸಾಕ್ಷ್ಯಾಧಾರಗಳ ಕೊರತೆ, 'ಷಡ್ಯಂತ್ರ ಸೂತ್ರಧಾರರತ್ತ' ಎಸ್ ಐಟಿ ತನಿಖೆ!

ಸೂಪರ್ ಹಿಟ್ ಆದರೂ ಈ ವರೆಗೂ ಯಾರಿಗೂ ಅರ್ಥವಾಗದ ಕಾಂತಾರ ಚಾಪ್ಟರ್-1 ರಹಸ್ಯ; ದ್ವಿಪಾತ್ರದಲ್ಲಿ ರಿಷಭ್ ಶೆಟ್ಟಿ ಅಭಿನಯ; ಪ್ರೇಕ್ಷಕರಲ್ಲಿ ಮತ್ತೆ ಹೆಚ್ಚಿದ ಕುತೂಹಲ!

ಹೈಕೋರ್ಟ್ ಸ್ಥಳಾಂತರ ಬೇಡಿಕೆ ಬಗ್ಗೆ ಪರಿಶೀಲನೆ: ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ; ಡಿ.ಕೆ ಶಿವಕುಮಾರ್

RSS ರಹಸ್ಯ ಸಂಘಟನೆಯಲ್ಲ- ಶತ್ರುಗಳೂ ಇಲ್ಲ: ನೆಹರು ಮರಿಮೊಮ್ಮಕ್ಕಳು ಅರ್ಥಮಾಡಿಕೊಳ್ಳಲು ಸಮಯ ಬೇಕು; ರಾಮ್ ಮಾಧವ್

SCROLL FOR NEXT