ಕಾಜಲ್ ಹಿಂದೂಸ್ತಾನಿ 
ದೇಶ

ಗುಜರಾತ್: ದ್ವೇಷಪೂರಿತ ಭಾಷಣ, ಬಲಪಂಥೀಯ ಕಾರ್ಯಕರ್ತೆ ಕಾಜಲ್ ಬಂಧನ

ಉನಾ ಪಟ್ಟಣದಲ್ಲಿ ಏಪ್ರಿಲ್ 1 ರಂದು ನಡೆದಿದ್ದ ಕೋಮು ಘರ್ಷಣೆಗೆ ಕಾರಣವಾದ ದ್ವೇಷಪೂರಿತ ಭಾಷಣ ಆರೋಪದ ಮೇಲೆ ಬಲಪಂಥೀಯ ಕಾರ್ಯಕರ್ತೆ ಕಾಜಲ್ ಹಿಂದೂಸ್ತಾನಿ ಅವರನ್ನು ಗಿರ್ ಸೋಮನಾಥ್ ಜಿಲ್ಲೆಯಲ್ಲಿ ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಜರಾತ್: ಉನಾ ಪಟ್ಟಣದಲ್ಲಿ ಏಪ್ರಿಲ್ 1 ರಂದು ನಡೆದಿದ್ದ ಕೋಮು ಘರ್ಷಣೆಗೆ ಕಾರಣವಾದ ದ್ವೇಷಪೂರಿತ ಭಾಷಣ ಆರೋಪದ ಮೇಲೆ ಬಲಪಂಥೀಯ ಕಾರ್ಯಕರ್ತೆ ಕಾಜಲ್ ಹಿಂದೂಸ್ತಾನಿ ಅವರನ್ನು ಗಿರ್ ಸೋಮನಾಥ್ ಜಿಲ್ಲೆಯಲ್ಲಿ ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಉನಾದಲ್ಲಿ ಕಾಜಲ್ ಹಿಂದೂಸ್ತಾನಿ ಪೊಲೀಸರ ಮುಂದೆ ಶರಣಾದ ನಂತರ ಆಕೆಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟ್ವಿಟರ್ ಪ್ರೊಪೈಲ್ ನಲ್ಲಿ ಉದ್ಯಮಿ, ಸಂಶೋಧನಾ ವಿಶ್ಲೇಷಕ, ಸಾಮಾಜಿಕ ಕಾರ್ಯಕರ್ತೆ, ರಾಷ್ಟ್ರೀಯತಾವಾದಿ ಮತ್ತು "ಹೆಮ್ಮೆಯ ಭಾರತೀಯಳು ಎಂದು ಹೇಳಿಕೊಂಡಿರುವ ಹಿಂದೂಸ್ತಾನಿ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 92,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದು, ವಿಶ್ವ ಹಿಂದೂ ಪರಿಷತ್ ಆಯೋಜಿಸುವ ಕಾರ್ಯಕ್ರಮಗಳಲ್ಲಿ ಆಗಾಗ್ಗೆ ಪಾಲ್ಗೊಳುತ್ತಿದ್ದರು. 

ಮಾರ್ಚ್ 30 ರಂದು ರಾಮ ನವಮಿಯಂದು ವಿಎಚ್‌ಪಿ ಆಯೋಜಿಸಿದ್ದ ಹಿಂದೂ ಸಮುದಾಯದ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ನೀಡಿದ ಎರಡು ದಿನದ ನಂತರ ಹಿಂದೂಸ್ತಾನಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು,ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶ) ಅಡಿಯಲ್ಲಿ ಏಪ್ರಿಲ್ 2 ರಂದು ಎಫ್ ಐಆರ್ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?