ಸಾಂದರ್ಭಿಕ ಚಿತ್ರ 
ದೇಶ

ಸಹೋದರನ ಜೊತೆ ಎಸ್‌ಎಡಿ ನಾಯಕ ಇಂದರ್ ಇಕ್ಬಾಲ್ ಸಿಂಗ್ ಅತ್ವಾಲ್ ಬಿಜೆಪಿಗೆ ಸೇರ್ಪಡೆ

ಶಿರೋಮಣಿ ಅಕಾಲಿದಳದ ನಾಯಕ ಇಂದರ್ ಇಕ್ಬಾಲ್ ಸಿಂಗ್ ಅತ್ವಾಲ್ ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು. ಪಕ್ಷದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಮತ್ತಿತರ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಕೇಸರಿ ಪಕ್ಷ ಸೇರಿಕೊಂಡರು. 

ನವದೆಹಲಿ: ಶಿರೋಮಣಿ ಅಕಾಲಿದಳದ ನಾಯಕ ಇಂದರ್ ಇಕ್ಬಾಲ್ ಸಿಂಗ್ ಅತ್ವಾಲ್ ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು. ಪಕ್ಷದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಮತ್ತಿತರ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಕೇಸರಿ ಪಕ್ಷ ಸೇರಿಕೊಂಡರು. 

ಭಾರತೀಯ ಜನತಾ ಪಕ್ಷಕ್ಕೆ ಸೇರಲು ಎಸ್‌ಎಡಿ ತೊರೆದ ಅತ್ವಾಲ್, 2004 ರಿಂದ 2009 ರವರೆಗೆ 14 ನೇ ಲೋಕಸಭೆಯ ಉಪ ಸ್ಪೀಕರ್ ಆಗಿದ್ದ ಚರಂಜಿತ್ ಸಿಂಗ್ ಅತ್ವಾಲ್ ಅವರ ಪುತ್ರ ಮತ್ತು ಈ ಹಿಂದೆ ಪಂಜಾಬ್ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು. ಅತ್ವಾಲ್ ಜೊತೆಗೆ, ಅವರ ಕಿರಿಯ ಸಹೋದರ ಜಸ್ಜೀತ್ ಸಿಂಗ್ ಅತ್ವಾಲ್ ಮತ್ತು ಪಂಜಾಬ್‌ನ ಇತರ ಅನೇಕ ಮಂದಿಗೆ ಬಿಜೆಪಿ ಸೇರಿದರು. 

ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಚಾರಗಳನ್ನು ಯಾರಾದರೂ ನಿಜವಾದ ಅರ್ಥದಲ್ಲಿ ಅನುಷ್ಠಾನಗೊಳಿಸುತ್ತಿದ್ದರೆ ಅದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರವಾಗಿದೆ, ಕೇಂದ್ರದ ಸರ್ಕಾರದ ವಿವಿಧ ಯೋಜನೆಗಳಿಂದ ಪ್ರಭಾವಿತನಾಗಿ ಬಿಜೆಪಿ ಸೇರಿರುವುದಾಗಿ ಅತ್ವಾಲ್ ಸುದ್ದಿಗಾರರಿಗೆ ತಿಳಿಸಿದರು.

ಸಿಖ್ಖರಿಗಾಗಿ ಕರ್ತಾರ್‌ಪುರ ಕಾರಿಡಾರ್ ನ್ನು ಮತ್ತೆ ತೆರೆದಿದ್ದಕ್ಕಾಗಿ ಮೋದಿಯನ್ನು ಶ್ಲಾಘಿಸಿದ ಅತ್ವಾಲ್, ಪಂಜಾಬ್‌ನಲ್ಲಿ ದಲಿತರು ಸೇರಿದಂತೆ ಸಮಾಜದ ಎಲ್ಲಾ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿಯ ಹೊಸ ಯುಗ ಕ್ಕೆ ನಾಂದಿ ಹಾಡುವ ಅಗತ್ಯವಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT