ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ 
ದೇಶ

ಪೂಂಚ್‌: ಒಳ ನುಸುಳುತ್ತಿದ್ದ ಪಾಕ್ ಶಂಕಿತ ಉಗ್ರನ ಹತ್ಯೆ, ಮತ್ತಿಬ್ಬರಿಗಾಗಿ ತೀವ್ರ ಶೋಧ

 ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾನುವಾರ ಮುಂಜಾನೆ ಒಳನುಸುಳುತ್ತಿದ್ದ ಪಾಕಿಸ್ತಾನದ ಶಂಕಿತ ಉಗ್ರನನ್ನು ಸೇನಾ ಪಡೆಗಳು ಹತ್ಯೆಗೈಯುವ ಮೂಲಕ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. 

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾನುವಾರ ಮುಂಜಾನೆ ಒಳನುಸುಳುತ್ತಿದ್ದ ಪಾಕಿಸ್ತಾನದ ಶಂಕಿತ ಉಗ್ರನನ್ನು ಸೇನಾ ಪಡೆಗಳು ಹತ್ಯೆಗೈಯುವ ಮೂಲಕ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. 

ಮುಂಜಾನೆ 2.15 ರ ಸುಮಾರಿಗೆ ಶಾಹಪುರ್ ಸೆಕ್ಟರ್‌ನಲ್ಲಿ ಮೂವರು ಶಂಕಿತ ಉಗ್ರರ ಚಲನವಲನ ಗಮನಿಸಿದ ಭದ್ರತಾ ಪಡೆಗಳು, ಗುಂಡಿನ ಚಕಮಕಿ ನಡೆಸುವ ಮೂಲಕ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿಯ ಸಮಯದಲ್ಲಿ ಪೂಂಚ್‌ನ ಗಡಿರೇಖೆಯ ಉದ್ದಕ್ಕೂ ರಕ್ಷಣಾ ಬೇಲಿ ಹತ್ತಿರ ಗುಂಪೊಂದು ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಗುರುತಿಸಿದ ಭದ್ರತಾ ಪಡೆಗಳು ನಂತರ ಕಾರ್ಯಾಚರಣೆ ಆರಂಭಿಸಿದಾಗ ಮೃತದೇಹವೊಂದು ಕಂಡುಬಂದಿದ್ದು, ಮತ್ತಿಬ್ಬರು ಒಳನುಸುಳುಕೋರರು ಅರಣ್ಯ ಪ್ರದೇಶದಿಂದ ಓಡಿ ಹೋಗಿದ್ದಾರೆ.

ಪರಾರಿಯಾಗಿರುವ ಶಂಕಿತ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಜಮ್ಮು ಮೂಲದ ಸೇನಾ ಪಿಆರ್ ಒ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

SCROLL FOR NEXT