ಭಾರತೀಯ ನೌಕಾಪಡೆ ಅಧಿಕಾರಿ ಸಾವು 
ದೇಶ

ಸಮುದ್ರ ಕಾರ್ಯಾಚರಣೆ ವೇಳೆ ದುರಂತ: ಐಎನ್‌ಎಸ್ ಬ್ರಹ್ಮಪುತ್ರದ ಭಾರತೀಯ ನೌಕಾಪಡೆ ಅಧಿಕಾರಿ ಸಾವು!

ಸಮುದ್ರದಲ್ಲಿ ಕಾರ್ಯಾಚರಣೆ ವೇಳೆ ದುರಂತವೊಂದು ಸಂಭವಿಸಿದ್ದು, ಐಎನ್‌ಎಸ್ ಬ್ರಹ್ಮಪುತ್ರದಲ್ಲಿ ನಿಯೋಜನೆಗೊಂಡಿದ್ದ ಭಾರತೀಯ ನೌಕಾಪಡೆ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.

ನವದೆಹಲಿ: ಸಮುದ್ರದಲ್ಲಿ ಕಾರ್ಯಾಚರಣೆ ವೇಳೆ ದುರಂತವೊಂದು ಸಂಭವಿಸಿದ್ದು, ಐಎನ್‌ಎಸ್ ಬ್ರಹ್ಮಪುತ್ರದಲ್ಲಿ ನಿಯೋಜನೆಗೊಂಡಿದ್ದ ಭಾರತೀಯ ನೌಕಾಪಡೆ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.

ಐಎನ್‌ಎಸ್ ಬ್ರಹ್ಮಪುತ್ರದಲ್ಲಿ ನಿಯೋಜನೆಗೊಂಡ 23 ವರ್ಷದ ಜವಾನ ಕೂಡ ಸಮುದ್ರದಲ್ಲಿ ಕಾರ್ಯಾಚರಣೆಯ ಸಮಯದಲ್ಲಿ ಸಾವನ್ನಪ್ಪಿದ್ದು, ಈ ಕುರಿತು ತನಿಖೆಗೆ ಆದೇಶ ನೀಡಲಾಗಿದೆ. ಸಮುದ್ರದಲ್ಲಿ ಕಾರ್ಯಾಚರಣೆಯ ವೇಳೆ ಕ್ಷಿಪಣಿ ಹೊಂದಿದ ಹಡಗಿನಲ್ಲಿ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಭಾನುವಾರ ಈ ಮಾಹಿತಿ ನೀಡಿದ್ದಾರೆ.

ಮೃತರನ್ನು 23 ವರ್ಷದ ನೌಕಾಪಡೆ ಅಧಿಕಾರಿ ಮೋಹಿತ್ ಎಂದು ಗುರುತಿಸಲಾಗಿದ್ದು, ಅವರನ್ನು ಕ್ಷಿಪಣಿ ಯುದ್ಧನೌಕೆ ಐಎನ್‌ಎಸ್ ಬ್ರಹ್ಮಪುತ್ರದಲ್ಲಿ ಪೋಸ್ಟ್ ಮಾಡಲಾಗಿತ್ತು. ಮೋಹಿತ್ 'ಪ್ಲೋವ್ ಆರ್ಟಿಫೈಸರ್ 4' ಶ್ರೇಣಿಯ ಅಧಿಕಾರಿ ಎಂದು ತಿಳಿದುಬಂದಿದ್ದು, ಈ ಶ್ರೇಣಿಯು ಸಣ್ಣ ಅಧಿಕಾರಿಗೆ ಸಮಾನವಾಗಿರುತ್ತದೆ.

ಏಪ್ರಿಲ್ 8 ರಂದು ಸಮುದ್ರದಲ್ಲಿ ನಡೆದ ಘಟನೆಯಲ್ಲಿ, 23 ವರ್ಷದ ಮೋಹಿತ್, INS ಬ್ರಹ್ಮಪುತ್ರ, ಸಮುದ್ರದಲ್ಲಿ ಕಾರ್ಯಾಚರಣೆ ಮಾಡುವಾಗ ಉಂಟಾದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ನೌಕಾಪಡೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪಘಾತದ ಕಾರಣ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ಹೇಳಿದರು.

ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ಎಲ್ಲಾ ನೌಕಾಪಡೆಯ ಸಿಬ್ಬಂದಿ ಮೋಹಿತ್ ಅವರಿಗೆ ಗೌರವ ಸಲ್ಲಿಸಿದ್ದಾರೆ ಎಂದು ನೌಕಾಪಡೆ ಟ್ವೀಟ್‌ನಲ್ಲಿ ತಿಳಿಸಲಾಗಿದೆ.  

ಮತ್ತೊಂದು ನೌಕಾಪಡೆ ದುರಂತ
ಈ ಹಿಂದೆಯೂ ಕೂಡ ಇಂತಹುದೇ ದುರಂತ ಸಂಭವಿಸಿತ್ತು. ಪಶ್ಚಿಮ ಬಂಗಾಳದ ಪನಗಢ್‌ನಲ್ಲಿ ತರಬೇತಿಯ ವೇಳೆ ನೌಕಾಪಡೆಯ ಮೆರೈನ್ ಕಮಾಂಡೋ ಗೋವಿಂದ್ ಸಾವನ್ನಪ್ಪಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT