ಕಪಿಲ್ ಸಿಬಲ್ 
ದೇಶ

ನಂಬಿಕೆ ದ್ರೋಹ ಮಾಡುವವರು ಬಾಳಾಸಾಹೇಬ್ ಠಾಕ್ರೆ ಪರಂಪರೆಯನ್ನು ಮುಂದುವರಿಸಲು ಸಾಧ್ಯವಿಲ್ಲ: ಶಿಂಧೆ ವಿರುದ್ಧ ಕಪಿಲ್ ಸಿಬಲ್

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಅಯೋಧ್ಯೆ ಭೇಟಿಯ ನಂತರ ಸೋಮವಾರ ವಾಗ್ದಾಳಿ ನಡೆಸಿರುವ ರಾಜ್ಯಸಭಾ ಸಂಸದ ಕಪಿಲ್ ಸಿಬಲ್, 'ಪಿತೂರಿಗಾರರು, ಅವಕಾಶವಾದಿಗಳು ಮತ್ತು ಬೆನ್ನಿಗೆ ಚೂರಿ ಹಾಕುವವರು' ಬಾಳಾಸಾಹೇಬ್ ಠಾಕ್ರೆ ಅವರ ಪರಂಪರೆಯನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಅಯೋಧ್ಯೆ ಭೇಟಿಯ ನಂತರ ಸೋಮವಾರ ವಾಗ್ದಾಳಿ ನಡೆಸಿರುವ ರಾಜ್ಯಸಭಾ ಸಂಸದ ಕಪಿಲ್ ಸಿಬಲ್, 'ಪಿತೂರಿಗಾರರು, ಅವಕಾಶವಾದಿಗಳು ಮತ್ತು ನಂಬಿಕೆ ದ್ರೋಹ ಮಾಡುವವರು' ಬಾಳಾಸಾಹೇಬ್ ಠಾಕ್ರೆ ಅವರ ಪರಂಪರೆಯನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕಳೆದ ವರ್ಷ ಜೂನ್‌ನಲ್ಲಿ ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಶಿವಸೇನೆ ನಾಯಕ ಶಿಂಧೆ ಭಾನುವಾರ ಅಯೋಧ್ಯೆಗೆ ಭೇಟಿ ನೀಡಿದರು. ಅವರು ಸಾವಿರಾರು ಶಿವಸೈನಿಕರೊಂದಿಗೆ ಉತ್ತರ ಪ್ರದೇಶದ ಅಯೋಧ್ಯೆಗೆ ಬಂದಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಸಿಬಲ್, 'ಅಯೋಧ್ಯೆಯಲ್ಲಿ ಶಿಂಧೆ: ಭಗವಾನ್ ರಾಮನ ಆಯ್ಕೆ: ತ್ಯಾಗ, ಸತ್ಯದ ಮಾರ್ಗ, ಸರಿಯಾದ ನಡತೆ. ಬಾಳಾಸಾಹೇಬರೂ ಆ ಗುಣಗಳನ್ನು ಮೈಗೂಡಿಸಿಕೊಂಡಿದ್ದರು. ಪಿತೂರಿಗಾರರು, ಅವಕಾಶವಾದಿಗಳು, ನಂಬಿಕೆ ದ್ರೋಹ ಮಾಡುವವರು ಬಾಳಾಸಾಹೇಬರ ಪರಂಪರೆಯನ್ನು ಮುಂದುವರಿಸಲು ಸಾಧ್ಯವಿಲ್ಲ' ಎಂದು ಶಿಂಧೆ ವಿರುದ್ಧ ಕಿಡಿಕಾರಿದ್ದಾರೆ.

ತಮ್ಮ ಪಕ್ಷದ ಮತ್ತು ಬಿಜೆಪಿಯ ಸಿದ್ಧಾಂತ ಒಂದೇ ಆಗಿದ್ದು, ಮುಂದಿನ ವರ್ಷ ರಾಜ್ಯದಾದ್ಯಂತ ಕೇಸರಿ ಧ್ವಜವನ್ನು ಹಾರಿಸುತ್ತೇವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಭಾನುವಾರ ಹೇಳಿದ್ದಾರೆ.

'ನಮ್ಮ ಪಕ್ಷದ ಪಾತ್ರ ಸ್ಪಷ್ಟವಾಗಿದೆ. ಬಿಜೆಪಿ ಜೊತೆ ಶಿವಸೇನೆ ಮೈತ್ರಿ ಮಾಡಿಕೊಂಡಿದೆ. ನಮ್ಮ ಸಿದ್ಧಾಂತವೂ ಹಿಂದುತ್ವವೇ ಆಗಿದೆ. ಅಯೋಧ್ಯೆಯಿಂದ ಹೊಸ ಶಕ್ತಿಯೊಂದಿಗೆ ನಮ್ಮ ರಾಜ್ಯಕ್ಕೆ ಹೋಗಿ ಜನರ ಸೇವೆ ಮಾಡುತ್ತೇವೆ. 2024 ರಲ್ಲಿ, ಶಿವಸೇನೆ ಮತ್ತು ಬಿಜೆಪಿಯ ‘ಭಗವಾ’ (ಕೇಸರಿ ಧ್ವಜ) ಇಡೀ ರಾಜ್ಯದಲ್ಲಿ ಅನಾವರಣಗೊಳ್ಳಲಿದೆ' ಎಂದು ಅವರು ಅಯೋಧ್ಯೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಹೇಳಿದರು.

ಮುಂದಿನ ವರ್ಷ ಲೋಕಸಭೆ ಚುನಾವಣೆ ಹಾಗೂ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿದೆ. ಉದ್ಧವ್ ಠಾಕ್ರೆ ವಿರುದ್ಧ ಬಂಡೆದ್ದ ಶಿಂಧೆ ನಡೆ ಕಳೆದ ವರ್ಷ ಶಿವಸೇನೆಯನ್ನು ವಿಭಜಿಸಿತು ಮತ್ತು ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಉರುಳಿಸಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT