ಅಲಹಾಬಾದ್ ಹೈಕೋರ್ಟ್ 
ದೇಶ

ಶಿವನ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಲು ಹೈಕೋರ್ಟ್ ನಕಾರ!

ಫೇಸ್‌ಬುಕ್‌ನಲ್ಲಿ ಶಿವನ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿಯ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ.

ಪ್ರಯಾಗ್‌ರಾಜ್: ಫೇಸ್‌ಬುಕ್‌ನಲ್ಲಿ ಶಿವನ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್ ಮಾಡಿದ ವ್ಯಕ್ತಿಯ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ. 

ಅಲಿಘರ್ ಜಿಲ್ಲೆಯ ಆಸಿಫ್‌ ಎಂಬಾತ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಜೆಜೆ ಮುನೀರ್, ಜನರು ಅಥವಾ ಸಮುದಾಯಗಳ ನಡುವೆ ಅಸಂಗತತೆಯನ್ನು ಉತ್ತೇಜಿಸುವ ಇಂತಹ ಅಪರಾಧಗಳನ್ನು ಕಠಿಣವಾಗಿ ವ್ಯವಹರಿಸಬೇಕು ಎಂದು ಹೇಳಿದರು. ಇಂತಹ ಅಪರಾಧಗಳು ಸಮಾಜದಲ್ಲಿ ವಿಜೃಂಭಿಸಲು ಬಿಡುವುದಿಲ್ಲ ಎಂದಿದೆ.

ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಶಿವನ ಕುರಿತು ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ್ದು, ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದೆ ಎಂಬುದು ಅರ್ಜಿದಾರರ ವಿರುದ್ಧದ ಆರೋಪವಾಗಿದೆ. ತನಿಖೆಯ ನಂತರ ಪೊಲೀಸರು ಸಾಕ್ಷ್ಯಾಧಾರಗಳ ಆಧಾರದ ಮೇಲೆ ಅರ್ಜಿದಾರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು. ನಂತರ, ಅಲಿಘರ್‌ನ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಅರ್ಜಿದಾರರಿಗೆ 2023ರ ಜನವರಿ 3ರಂದು ಸಮನ್ಸ್ ಜಾರಿಗೊಳಿಸಿತ್ತು. ಈ ಸಮನ್ಸ್ ಅನ್ನು ಅರ್ಜಿದಾರ ಪ್ರಶ್ನಿಸಿದ್ದನು.

ವಿಚಾರಣೆಯ ಸಂದರ್ಭದಲ್ಲಿ, ಅರ್ಜಿದಾರರ ಪರ ವಕೀಲರು ತಮ್ಮ ಕಕ್ಷಿದಾರರ ಫೇಸ್‌ಬುಕ್ ಖಾತೆಯಲ್ಲಿ ಮಾಡಿದ ಕಾಮೆಂಟ್‌ಗಳನ್ನು ಅರ್ಜಿದಾರರಿಗೆ ಯಾವುದೇ ನಿಯಂತ್ರಣವಿಲ್ಲದ ಇನ್ನೊಬ್ಬ ವ್ಯಕ್ತಿ ಮಾಡಿದ್ದನು ಕೇವಲ 'ಫಾರ್ವರ್ಡ್' ಮಾಡಿದ್ದಾರೆ ಎಂದು ವಾದಿಸಿದರು. ಈ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ, ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ಅಸಂಗತತೆಯನ್ನು ಉತ್ತೇಜಿಸುವ ಕಾಮೆಂಟ್ ಮಾಡಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದರೆ ಅದು ಖಂಡಿತವಾಗಿಯೂ ಅಪರಾಧವಾಗುತ್ತದೆ ಎಂದು ಹೇಳಿದೆ.

ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಏಪ್ರಿಲ್ 6ರಂದು ತನ್ನ ಆದೇಶದಲ್ಲಿ, ನ್ಯಾಯಾಲಯದ ದೃಷ್ಟಿಯಲ್ಲಿ, ಸೆಕ್ಷನ್ 482 CrPC ಅಡಿಯಲ್ಲಿ ತನ್ನ ಅಧಿಕಾರವನ್ನು ಚಲಾಯಿಸುವ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ಯಾವುದೇ ಸಮಂಜಸವಾದ ಕಾರಣವಿಲ್ಲ, ಆದ್ದರಿಂದ, ಈ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT