ಪಂಜಾಬ್ ಪೊಲೀಸರು 
ದೇಶ

ತಲೆಮರೆಸಿಕೊಂಡಿರುವ ಖಲಿಸ್ಥಾನಿ ನಾಯಕ ಅಮೃತಪಾಲ್ ಸಿಂಗ್ ಆಪ್ತ ಪಾಪಲ್‌ಪ್ರೀತ್ ಸಿಂಗ್ ಬಂಧನ

ತೀವ್ರಗಾಮಿ ಅಮೃತಪಾಲ್ ಸಿಂಗ್ ಅವರ ಆಪ್ತ ಸಹಾಯಕ ಪಾಪಲ್‌ಪ್ರೀತ್ ಸಿಂಗ್ ಎಂಬಾತನನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಂಡೀಗಢ: ತೀವ್ರಗಾಮಿ ಅಮೃತಪಾಲ್ ಸಿಂಗ್ ಅವರ ಆಪ್ತ ಸಹಾಯಕ ಪಾಪಲ್‌ಪ್ರೀತ್ ಸಿಂಗ್ ಎಂಬಾತನನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಪಂಜಾಬ್ ಪೊಲೀಸರು ಮತ್ತು ಕೌಂಟರ್ ಇಂಟೆಲಿಜೆನ್ಸ್ ವಿಭಾಗವೂ ಕಾರ್ಯಾಚರಣೆ ನಡೆಸಿ ಪಾಪಾಲ್‌ಪ್ರೀತ್‌ ನನ್ನು ಬಂಧಿಸಿದ್ದಾರೆ. ಪಾಪಲ್‌ಪ್ರೀತ್ ಅಮೃತಪಾಲ್‌ನ ಮಾರ್ಗದರ್ಶಕ ಎಂದು ಪರಿಗಣಿಸಲಾಗಿದ್ದು ಇತ ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕದಲ್ಲಿ ಎಂದು ವರದಿಯಾಗಿದೆ. ಪಂಜಾಬ್ ಪೊಲೀಸರು ಖಲಿಸ್ತಾನ್ ಬೆಂಬಲಿಗರು ಮತ್ತು ಅವರ ಸಹಚರರ ವಿರುದ್ಧ ಕ್ರಮ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಅಮೃತಪಾಲ್ ಮತ್ತು ಪಾಪಲ್‌ಪ್ರೀತ್ ಮಾರ್ಚ್ 18ರಿಂದ ತಲೆಮರೆಸಿಕೊಂಡಿದ್ದರು.

ತೀವ್ರಗಾಮಿ ಅಮೃತಪಾಲ್ ಸಿಂಗ್ ಮಾರ್ಚ್ 18ರಂದು ಜಲಂಧರ್ ಜಿಲ್ಲೆಯಲ್ಲಿ ಪೊಲೀಸರ ಬಂಧನದಿಂದ ತಪ್ಪಿಸಿಕೊಂಡು ಹಲವಾರು ವಾಹನಗಳನ್ನು ಬದಲಾಯಿಸಿ ಪರಾರಿಯಾಗಿದ್ದನು. ಇಬ್ಬರು ಮತ್ತು ಅವರ ಸಹಚರರ ವಿರುದ್ಧ ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸಲು, ಕೊಲೆಗೆ ಯತ್ನ, ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಸೇರಿದಂತೆ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. 

ಇಬ್ಬರೂ ಒಟ್ಟಿಗೆ ಹೋಶಿಯಾರ್‌ಪುರದಲ್ಲಿ ಕಾಣಿಸಿಕೊಂಡಿದ್ದರು
ತೀವ್ರಗಾಮಿ ಸಂಘಟನೆಯಾದ ವಾರಿಸ್ ಪಂಜಾಬ್ ಡಿ ಮತ್ತು ಅದರ ಬೆಂಬಲಿಗರಾದ ಅಮೃತಪಾಲ್ ಮತ್ತು ಪಾಪಲ್‌ಪ್ರೀತ್ ತಲೆಮರೆಸಿಕೊಂಡಿದ್ದರು. ಆ ನಂತರ ಮಾರ್ಚ್ 18ರಿಂದ ಇಬ್ಬರೂ ಪಂಜಾಬ್‌ನ ವಿವಿಧ ಸ್ಥಳಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡರು. ಆದರೆ ಇಬ್ಬರೂ ಹೋಶಿಯಾರ್‌ಪುರದಲ್ಲಿ ಬೇರ್ಪಟ್ಟರು. ಆದರೆ, ಅಂದಿನಿಂದ ಪೊಲೀಸರು ಹೋಶಿಯಾರ್‌ಪುರ ಜಿಲ್ಲೆಯ ಗ್ರಾಮಗಳನ್ನು ಸುತ್ತುವರೆದಿದ್ದು ಮನೆ ಮನೆಗೆ ಹುಡುಕಾಟ ನಡೆಸಿದ್ದರು. ಅಮೃತಪಾಲ್ ಸಿಂಗ್ ಮತ್ತು ಪಾಪಲ್‌ಪ್ರೀತ್ ಸಿಂಗ್ ಅವರ ವೀಡಿಯೋ ಕೂಡ ಹೊರಬಿದ್ದಿದೆ, ಇದರಲ್ಲಿ ಅವರು ಪೇಟ ಮತ್ತು ಮುಖವಾಡಗಳಿಲ್ಲದೆ ದೆಹಲಿಯ ಬೀದಿಯಲ್ಲಿ ನಡೆಯುತ್ತಿರುವುದು ಕಂಡುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT