ಸಂಗ್ರಹ ಚಿತ್ರ 
ದೇಶ

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಹೊಸ ದತ್ತಾಂಶ ಸಂರಕ್ಷಣಾ ಮಸೂದೆ ಮಂಡನೆ: ಸುಪ್ರೀಂ ಕೋರ್ಟ್‌ಗೆ ಕೇಂದ್ರ

ಹೊಸ ದತ್ತಾಂಶ ಸಂರಕ್ಷಣಾ ಮಸೂದೆ ಸಿದ್ಧವಾಗಿದೆ ಮತ್ತು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಅದನ್ನು ಮಂಡಿಸಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ನವದೆಹಲಿ: ಹೊಸ ದತ್ತಾಂಶ ಸಂರಕ್ಷಣಾ ಮಸೂದೆ ಸಿದ್ಧವಾಗಿದೆ ಮತ್ತು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಅದನ್ನು ಮಂಡಿಸಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಮಸೂದೆ ಸಿದ್ಧವಾಗಿದೆ ಎಂದು ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ನೇತೃತ್ವದ ಸಂವಿಧಾನ ಪೀಠಕ್ಕೆ ಅಟಾರ್ನಿ ಜನರಲ್ ಆರ್. ವೆಂಕಟ್ರಮಣಿ ತಿಳಿಸಿದರು.

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ್ ರಾಯ್ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪೀಠವು ಈ ವಿಚಾರವನ್ನು ಆಲಿಸಿತು.

ನ್ಯಾಯಮೂರ್ತಿ ಜೋಸೆಫ್ ಅವರು ಜೂನ್ 16ರಂದು ನಿವೃತ್ತರಾಗಲಿರುವ ಕಾರಣ ಹೊಸ ಪೀಠವನ್ನು ರಚಿಸುವಂತೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮುಂದೆ ಈ ವಿಷಯವನ್ನು ಇರಿಸುವಂತೆ ಅವರು ನಿರ್ದೇಶನ ನೀಡಿದರು. 
ಈ ಕುರಿತು 2023ರ ಆಗಸ್ಟ್ ಮೊದಲ ವಾರದಲ್ಲಿ ವಿಚಾರಣೆಗೆ ಮುಂದೂಡಲಾಗಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್ ಅವರು, ಶಾಸಕಾಂಗ ಪ್ರಕ್ರಿಯೆಗೆ ನ್ಯಾಯಾಲಯದ ವಿಚಾರಣೆಯನ್ನು ನ್ಯಾಯಾಲಯ ಜೋಡಿಸಬಾರದು. ಶಾಸಕಾಂಗ ಪ್ರಕ್ರಿಯೆಯು ಸಂಕೀರ್ಣವಾಗಿದೆ ಮತ್ತು ಅದನ್ನು ಮತ್ತೆ ಕೆಲವು ಸಮಿತಿಗಳಿಗೆ ಉಲ್ಲೇಖಿಸಬಹುದು ಎಂದು ಅವರು ಹೇಳಿದರು.

ಬಳಕೆದಾರರ ದತ್ತಾಂಶವನ್ನು ಫೇಸ್‌ಬುಕ್‌ ಹಾಗೂ ಇತರರೊಂದಿಗೆ ಹಂಚಿಕೊಳ್ಳುವ ಕುರಿತ ವಾಟ್ಸ್‌ಆ್ಯಪ್‌ ನೀತಿಯನ್ನು ವಿದ್ಯಾರ್ಥಿಗಳಾದ ಕರ್ಮಣ್ಯ ಸಿಂಗ್‌ ಸರೀನ್‌ ಮತ್ತು ಶ್ರೇಯಾ ಸೇಥಿ ಎಂಬುವರು ಪ್ರಶ್ನಿಸಿದ್ದರು. ಈ ನೀತಿಯು ತಮ್ಮ ಖಾಸಗಿತನ ಹಾಗೂ ಮುಕ್ತ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸಲಿದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ದೂರಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT