ಸಚಿನ್ ಪೈಲಟ್ ನಿರಶನ 
ದೇಶ

ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಸುತ್ತೇನೆ: ದಿನದ ನಿರಶನ ಅಂತ್ಯಗೊಳಿಸಿದ ಪೈಲಟ್

ರಾಜಸ್ಥಾನದಲ್ಲಿ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ನಿಂತಿರುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ತಾವು ಕೈಗೊಂಡಿದ್ದ ನಿರಶನವನ್ನು ಅಂತ್ಯಗೊಳಿಸಿದ್ದಾರೆ. ಆದರೆ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದ್ದಾರೆ. 

ಜೈಪುರ: ರಾಜಸ್ಥಾನದಲ್ಲಿ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ನಿಂತಿರುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ತಾವು ಕೈಗೊಂಡಿದ್ದ ನಿರಶನವನ್ನು ಅಂತ್ಯಗೊಳಿಸಿದ್ದಾರೆ. ಆದರೆ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದ್ದಾರೆ. 

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರವೆಸಗಿದ್ದವರ ವಿರುದ್ಧ ಕ್ರಮ ಕೈಗೊಳ್ಳುವ ಬೇಡಿಕೆಯನ್ನು ಅಶೋಕ್ ಗೆಹ್ಲೋಟ್ ಸರ್ಕಾರದ  ಮುಂದಿಟ್ಟು ಸಚಿನ್ ಪೈಲಟ್ ಸರ್ಕಾರದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ.

ಸಚಿನ್ ಪೈಲಟ್, ಕಾಂಗ್ರೆಸ್ ನ ಎಚ್ಚರಿಕೆಯ ಹೊರತಾಗಿಯೂ ಜೈಪುರದ ಹುತಾತ್ಮ ಯೋಧರ ಸ್ಮಾರಕದ ಬಳಿ ನಿರಶನ ಕೈಗೊಂಡಿದ್ದರು. ಸಿಎಂ ಗೆಹ್ಲೋಟ್ ಹಾಗೂ ಪೈಲಟ್ ಇಬ್ಬರ ನಡುವೆ 2018 ರ ಡಿಸೆಂಬರ್ ನಿಂದಲೂ ಭಿನ್ನಾಭಿಪ್ರಾಯ ತಲೆದೋರಿದೆ.

ನಿರಶನ ಸ್ಥಳದಿಂದ ವಾಪಸ್ ತೆರಳುವಾಗ ಮಾಧ್ಯಮಗಳೊಂದಿಗೆ ಮಾತನಾಡಿದ ಪೈಲಟ್ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ವೇದಿಕೆಯಲ್ಲಿ 5 ಗಂಟೆಗಳ ಕಾಲ ಬೆಂಬಲಿಗರೊಂದಿಗೆ ಪೈಲಟ್ ಕುಳಿತಿದ್ದರು. ಆಡಳಿತ ಪಕ್ಷದ ಯಾವುದೇ ಶಾಸಕನೂ ಪೈಲಟ್ ನಿರಶನದ ಸ್ಥಳಕ್ಕೆ ಭೇಟಿ ನೀಡಲಿಲ್ಲ. ಆದರೆ ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ನಾಯಕರು ಪೈಲಟ್ ಜೊತೆ ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCCಗೆ ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

ನಾವು ಕಳವಳ ವ್ಯಕ್ತಪಡಿಸಿದೆವು, ಆದ್ರೆ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದರು: ಸಚಿವ ಎಚ್.ಕೆ.ಪಾಟೀಲ್

ಗ್ಯಾಂಗ್ ರೇಪ್ ಪ್ರಕರಣ: ವಿವಾದಿತ ದೇವಮಾನವ Asaram Bapu ಖುಲಾಸೆ

SCROLL FOR NEXT