ಬೀಳ್ಕೊಡುಗೆ ಮೆರವಣಿಗೆ 
ದೇಶ

ಬ್ಯಾಂಡ್ ಬಾಜಾ: ವರ್ಗಾವಣೆಯ ನಂತರ ಬೀಳ್ಕೊಡುಗೆ ಮೆರವಣಿಗೆ ನಡೆಸಿದ ಛತ್ತೀಸ್‌ಗಢ ಪೊಲೀಸ್‌ ಅಧಿಕಾರಿ ಅಮಾನತು

ರಾಜನಂದಗಾಂವ್‌ನ ಡೊಂಗರ್‌ಗಢ ಪೊಲೀಸ್ ಠಾಣೆಯ ಪೊಲೀಸರು ಬ್ಯಾಂಡ್-ಬಾಜಾ ಮತ್ತು ನೃತ್ಯದೊಂದಿಗೆ ಅದ್ಧೂರಿ ಬೀಳ್ಕೊಡುಗೆ ಮೆರವಣಿಗೆ ನಡೆಸಿದ ಟೌನ್ ಇನ್ಸ್‌ಪೆಕ್ಟರ್ ಸುರೇಂದ್ರ ಸ್ವರ್ಣಕರ್ ಅವರನ್ನು 'ಅನುಚಿತ ವರ್ತನೆ' ಆಧಾರದ...

ರಾಯ್‌ಪುರ: ರಾಜನಂದಗಾಂವ್‌ನ ಡೊಂಗರ್‌ಗಢ ಪೊಲೀಸ್ ಠಾಣೆಯ ಪೊಲೀಸರು ಬ್ಯಾಂಡ್-ಬಾಜಾ ಮತ್ತು ನೃತ್ಯದೊಂದಿಗೆ ಅದ್ಧೂರಿ ಬೀಳ್ಕೊಡುಗೆ ಮೆರವಣಿಗೆ ನಡೆಸಿದ ಟೌನ್ ಇನ್ಸ್‌ಪೆಕ್ಟರ್ ಸುರೇಂದ್ರ ಸ್ವರ್ಣಕರ್ ಅವರನ್ನು 'ಅನುಚಿತ ವರ್ತನೆ' ಆಧಾರದ ಮೇಲೆ ಅಮಾನತುಗೊಳಿಸಲಾಗಿದೆ.

ಸುರೇಂದ್ರ ಸ್ವರ್ಣಕರ್ ಅವರನ್ನು ರಾಜನಂದಗಾಂವ್‌ನಿಂದ ಬಿಲಾಸ್‌ಪುರ ಜಿಲ್ಲೆಗೆ ವರ್ಗಾಯಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸ್ವರ್ಣಕರ್ ಅವರನ್ನು ಅದ್ಧೂರಿ ಮೆರವಣಿಗೆ ಮೂಲಕ ಬೀಳ್ಕೊಡಲಾಗಿದೆ. ಈ ವೇಳೆ ಸ್ವರ್ಣಕರ್ ಅವರು SUV ಕಾರಿನಲ್ಲಿ, ಕಪ್ಪು ಸನ್ಗ್ಲಾಸ್ ಧರಿಸಿ, ಸನ್‌ರೂಫ್ ಮೂಲಕ 'ಸಿಂಗಮ್' ನಂತೆ ಪೋಸ್ ನೀಡಿದ್ದಾರೆ.

ಟ್ರಾಫಿಕ್ ಪೊಲೀಸರ ವಿರೋಧದ ನಡುವೆಯೂ ಸ್ವರ್ಣಕರ್ ಅವರು ಅದ್ಧೂರಿ ಮೆರವಣಿಗೆ ನಡೆಸಿದ್ದು, ಪೋಲೀಸ್ ಅಧಿಕಾರಿಯು ಜಮಾಯಿಸಿದ ಜನರತ್ತ ಕೈ ಬೀಸಿದ್ದಾರೆ. ಇನ್ನೂ ಸಮವಸ್ತ್ರದಲ್ಲಿ ಅವರ ಸಹೋದ್ಯೋಗಿಗಳು ಭಾಂಗ್ರಾ ನಾದಕ್ಕೆ ತಕ್ಕಂತೆ ನೃತ್ಯ ಮಾಡುತ್ತಾ ಅವರ ವಾಹನಕ್ಕೆ ಪೋಲೀಸ್ ಠಾಣೆಯಿಂದಲೇ ಬೆಂಗಾವಲು ನೀಡಿದ್ದಾರೆ.

ಪೊಲೀಸ್ ಅಧಿಕಾರಿಯ ಅದ್ಧೂರಿ ಬೀಳ್ಕೊಡುಗೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರಿಂದ ಎಚ್ಚೆತ್ತುಕೊಂಡ ಬಿಲಾಸ್‌ಪುರ ವ್ಯಾಪ್ತಿಯ ಪೊಲೀಸ್ ಮಹಾನಿರೀಕ್ಷಕ ಬದ್ರಿ ನಾರಾಯಣ ಮೀನಾ. ಅವರು ಸ್ವರ್ಣಕರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಒಂದೇ ಶಾಟ್‌ನಲ್ಲಿ ಇರಾನ್‌ನ ಎಲ್ಲಾ ನಾಯಕರು ಖತಂ ಆಗುತ್ತಿದ್ದರು"... ಆದರೆ, ಅಮೆರಿಕಾ ಸುಮ್ಮನಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಟ್ರಂಪ್..!

Venezuelaದಲ್ಲಿ ಮರಣ ಮೃದಂಗ: ಅವಳಿ ಭೂಕಂಪಕ್ಕೆ 2,954 ಮಂದಿ ಬಲಿ, ಸಾವಿರಾರು ಕುಟುಂಬಗಳು ಬೀದಿಗೆ..!

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ