ಪೂಜಾ ಸಿಂಘಾಲ್ 
ದೇಶ

ಜಾರ್ಖಂಡ್ ಎಂಜಿಎನ್‌ಆರ್‌ಇಜಿಎ ಹಗರಣ: ಅಮಾತುಗೊಂಡ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಕೋರ್ಟ್ ಗೆ ಶರಣು

ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರ ಜಾಮೀನು ಅವಧಿ ಮುಗಿದ ನಂತರ ಬುಧವಾರ ರಾಂಚಿಯ ವಿಶೇಷ ಪಿಎಂಎಲ್‌ಎ(ಮನಿ ಲಾಂಡರಿಂಗ್ ಕಾಯ್ದೆ) ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.

ರಾಂಚಿ: ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರ ಜಾಮೀನು ಅವಧಿ ಮುಗಿದ ನಂತರ ಬುಧವಾರ ರಾಂಚಿಯ ವಿಶೇಷ ಪಿಎಂಎಲ್‌ಎ(ಮನಿ ಲಾಂಡರಿಂಗ್ ಕಾಯ್ದೆ) ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.

ಕೋರ್ಟ್ ಗೆ ಶರಣಾದ ಪೂಜಾ ಸಿಂಘಾಲ್ ಅವರನ್ನು ಬಿರ್ಸಾ ಮುಂಡಾ ಸೆಂಟ್ರಲ್ ಜೈಲಿಗೆ ಕಳುಹಿಸಲಾಗಿದೆ.

ಫೆಬ್ರವರಿ 2023 ರಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಮಗಳ ಚಿಕಿತ್ಸೆಗಾಗಿ ಸಿಂಘಾಲ್ ಅವರಿಗೆ ಎರಡು ತಿಂಗಳ ಮಧ್ಯಂತರ ಜಾಮೀನು ನೀಡಲಾಗಿತ್ತು. ಇದಕ್ಕೂ ಮೊದಲು ಜನವರಿ 3 ರಂದು, ಇದೇ ಆಧಾರದ ಮೇಲೆ ಸಿಂಘಾಲ್‌ಗೆ ಒಂದು ತಿಂಗಳ ಮಧ್ಯಂತರ ಜಾಮೀನು ನೀಡಲಾಗಿತ್ತು.

ನವೆಂಬರ್ 3, 2022 ರಂದು ಜಾರ್ಖಂಡ್ ಹೈಕೋರ್ಟ್ ಜಾಮೀನು ಸಿಂಘಾಲ್ ಅವರಿಗೆ ಜಾಮೀನು ನಿರಾಕರಿಸಿದ್ದು, ಐಎಎಸ್ ಅಧಿಕಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಎಂಜಿಎನ್‌ಆರ್‌ಇಜಿಎ) ಹಣ ದುರುಪಯೋಗ ಮತ್ತು ಇತರ ಆರೋಪಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ 15 ಗಂಟೆಗಳ ಕಾಲ ವಿಚಾರಣೆಯ ನಂತರ ಕಳೆದ ವರ್ಷ ಮೇ 11 ರಂದು ಸಿಂಘಾಲ್ ಅವರ್ನು ಬಂಧಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ತಂದೆ ಖಾನ್ ಚಂದ್ ನಿಧನ: ಜಿಂಬಾಬ್ವೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಂಕು ಸಿಂಗ್ ಗೆ ಆಘಾತ!

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಕುಣಿಗಲ್ ನಿವಾಸಿಗಳ ದಾರುಣ ಸಾವು

SCROLL FOR NEXT